41 ಸಾವಿರ ರೂ.ಕೊಟ್ಟು ಖರೀದಿಸಿದ್ದ ಬ್ರ್ಯಾಂಡ್ ವಾಚ್ ಮೂರೇ ವಾರದಲ್ಲಿ ಕೆಟ್ಟು ಹೋಯ್ತು
ಕಂಪೆನಿಗೆ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ
Team Udayavani, Jul 12, 2022, 7:00 AM IST
ಸಾಂದರ್ಭಿಕ ಚಿತ್ರ...
ಬೆಂಗಳೂರು: ಬ್ರ್ಯಾಂಡ್ ಮೇಲೆ ನಂಬಿಕೆಯಿಟ್ಟು 41 ಸಾ. ರೂ. ಕೊಟ್ಟು ಖರೀದಿಸಿದ್ದ ವಾಚು ಮೂರೇ ವಾರದಲ್ಲಿ ನಿಂತು ಹೋಗಿದ್ದ ಬಗ್ಗೆ ದೂರು ನೀಡಿದರೂ ಸ್ಪಂದಿಸದ ಕಂಪೆನಿಗೆ ಗ್ರಾಹಕ ನ್ಯಾಯಾಲಯ ದಂಡ ವಿಧಿಸಿದೆ.
ನಗರದ ಹೊರವರ್ತುಲ ರಸ್ತೆಯ 45 ವರ್ಷದ ವ್ಯಕ್ತಿಯೊಬ್ಬರು 2021ರ ಸೆಪ್ಟಂಬರ್ನಲ್ಲಿ 41,650 ರೂ. ಮೊತ್ತದ ವಾಚ್ ಖರೀದಿಸಿದ್ದರು. ಅದು ಕೆಟ್ಟಾಗ ವಾರೆಂಟಿ ಕಾರ್ಡ್ ಸಹಿತ ಎಲ್ಲ ದಾಖಲೆಗಳೊಂದಿಗೆ ಶೋ ರೂಂಗೆ ದೂರು ನೀಡಿದ್ದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ.
ಬಳಿಕ ಬೆಂಗಳೂರು ನಗರ 2ನೇ ಹೆಚ್ಚುವರಿ ಗ್ರಾಹಕ ನ್ಯಾಯಾಲಯದ ಮೊರೆ ಹೋದ ಗ್ರಾಹಕರು, ವಾಚ್ ಮೊತ್ತ, 20,000 ರೂ. ಪರಿಹಾರ ಹಾಗೂ ಕೋರ್ಟ್ ವ್ಯಾಜ್ಯಕ್ಕೆ ಸಂಬಂಧಿಸಿ 20,000 ರೂ. ಸಹಿತ ಒಟ್ಟು 81,650 ರೂ. ಪರಿಹಾರ ಕೋರಿದ್ದರು.
ವಾದ ವಿವಾದ ಆಲಿಸಿದ ನ್ಯಾಯಾಧೀಶರು, ವಾಚ್ನ ಮೊತ್ತ 41,650 ರೂ.ಗೆ ಶೇ.5ರಷ್ಟು ಬಡ್ಡಿಯೊಂದಿಗೆ ಒಟ್ಟು 46,650, ಪ್ರಕರಣದಿಂದ ಮಾನಸಿಕ ಒತ್ತಡಕ್ಕೆ ಗುರಿಯಾದ ಹಿನ್ನೆಲೆಯಲ್ಲಿ 5 ಸಾ. ರೂ. ಪರಿಹಾರ ಹಾಗೂ ಕೋರ್ಟ್ ಖರ್ಚಿನ ಬಾಬ್ತು 5 ಸಾ. ರೂ. ಸಹಿತ ಒಟ್ಟು 56,650 ರೂ. ಅನ್ನು ಜುಲೈ ಅಂತ್ಯದೊಳಗೆ ಪಾವತಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.