ಹಣದುಬ್ಬರ ಇಳಿಕೆಗೆ ಆರ್‌ಬಿಐ ಇನ್ನಷ್ಟು ಕ್ರಮ ವಹಿಸಲಿ


Team Udayavani, Jul 13, 2022, 6:00 AM IST

ಹಣದುಬ್ಬರ ಇಳಿಕೆಗೆ ಆರ್‌ಬಿಐ ಇನ್ನಷ್ಟು ಕ್ರಮ ವಹಿಸಲಿ

ಜೂನ್‌ ಮಾಹೆಯ ಹಣದುಬ್ಬರ ದರ ಪ್ರಕಟಗೊಂಡಿದ್ದು, ಶೇ.7.1ರಷ್ಟಕ್ಕೆ ಇಳಿಕೆಯಾಗಿದೆ. ಅಂದರೆ ಅದರ ಹಿಂದಿನ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.0.3ರಷ್ಟು ಇಳಿಕೆಯಾಗಿದೆ. ತರಕಾರಿ ಮತ್ತು ಬೇಳೆಕಾಳುಗಳ ದರದಲ್ಲಿ ಇಳಿಕೆಯಾದ ಕಾರಣದಿಂದಾಗಿ ಹಣದುಬ್ಬರದ ಪ್ರಮಾಣ ಇಳಿಕೆಯಾಗಿದೆ ಎಂಬುದು ಆರ್ಥಿಕ ವಿಶ್ಲೇಷಕರ ಅಭಿಪ್ರಾಯ. ಹಣದುಬ್ಬರ ಇಳಿಕೆಯಿಂದ ಜನ ಕೂಡ ಅಲ್ಪ ಪ್ರಮಾಣದಲ್ಲಿ ನಿಟ್ಟುಸಿರು ಬಿಡುವಂತಾಗಿದೆ.

ಕೊರೊನಾ ಮತ್ತು ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣದಿಂದಾಗಿ ಇಡೀ ಜಗತ್ತಿನ ಆರ್ಥಿಕತೆ ಮೇಲೆ ಪೆಟ್ಟು ಬಿದ್ದಿದೆ. ಅಷ್ಟೇ ಅಲ್ಲ ಪೂರೈಕೆ ವ್ಯವಸ್ಥೆಯ ಮೇಲೂ ಅಡ್ಡಪರಿಣಾಮ ಬೀರಿದೆ. ಇದರಿಂದ ಅಗತ್ಯ ವಸ್ತುಗಳು, ತೈಲೋತ್ಪನ್ನ ವಸ್ತುಗಳು ಸೇರಿದಂತೆ ಬಹುತೇಕ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಜನರ ಬಹುಪಾಲು ಆದಾಯ ವಸ್ತುಗಳ ಖರೀದಿಯಲ್ಲೇ ಮುಗಿದುಹೋಗುವ ಸನ್ನಿವೇಶ ಎದುರಾಗಿದೆ. ನೆರೆಯ ಶ್ರೀಲಂಕಾದ ಆರ್ಥಿಕತೆಯನ್ನು ಗಮನಿಸಿದರೆ, ಕೊರೊನಾ ಅನಂತರ ಮತ್ತು ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣ ಯಾವ ಪ್ರಮಾಣ ದಲ್ಲಿ ಪರಿಣಾಮ ಬೀರಿದೆ ಎಂಬುದನ್ನು ನೋಡಬಹುದಾಗಿದೆ.

ಕಳೆದ ವರ್ಷದ ಜೂನ್‌ನಲ್ಲಿ ದೇಶದ ವಾರ್ಷಿಕ ಸಗಟು ಹಣದುಬ್ಬರ ಪ್ರಮಾಣ ಶೇ.6.26 ಇತ್ತು. ಕೊರೊನಾ ಪೆಟ್ಟು ಕೊಟ್ಟಿದ್ದರೂ ಹಣದುಬ್ಬರ ಪ್ರಮಾಣವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ಯಶಸ್ವಿಯಾಗಿತ್ತು. ಆದರೆ ಅನಂತರದ ದಿನಗಳಲ್ಲಿ ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣವಂತೂ ಇಡೀ ಜಗತ್ತಿನ ಎಲ್ಲ ವ್ಯವಸ್ಥೆ  ಯನ್ನು ಅಲ್ಲೋಲ ಕಲ್ಲೋಲ ಮಾಡಿದೆ. ಇದು ತೈಲೋತ್ಪನ್ನಗಳ ಪೂರೈಕೆ ಮೇಲೆ ಬಹಳಷ್ಟು ಪರಿಣಾಮ ಬೀರಿರುವುದರಿಂದ ಭಾರತವೂ ಸೇರಿದಂತೆ ಬಹುತೇಕ ಎಲ್ಲ ದೇಶಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳವಾಗಿ ಹಣದುಬ್ಬರ ಹೆಚ್ಚಾಗಿದೆ. ಇದಕ್ಕೆ ನೆರೆಯ ಪಾಕಿಸ್ಥಾನವೂ ಸಾಕ್ಷಿ.

ಹಣದುಬ್ಬರ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಆರ್‌ಬಿಐ ಒಟ್ಟಾರೆ ಮೂರು ಬಾರಿ ರೆಪೋ ದರವನ್ನು ಹೆಚ್ಚಳ ಮಾಡಿದೆ. ಇದರಿಂದಾಗಿ ಗೃಹ, ವಾಹನ ಸಾಲದ ಮೇಲಿನ ಬಡ್ಡಿ ದರ ಹೆಚ್ಚಾಗಿದೆ. ಹಾಗೆಯೇ ಉಳಿ  ತಾಯದ ಮೇಲಿನ ಬಡ್ಡಿದರ ಹೆಚ್ಚಾಗಿ, ಹೊಸ ವಸ್ತುಗಳ ಖರೀದಿಗಿಂತ ಉಳಿತಾಯದತ್ತ ಜನ ಮುಖಮಾಡುತ್ತಾರೆ ಎಂಬುದು ಆರ್‌ಬಿಐನ ಉದ್ದೇಶವಾಗಿತ್ತು. ಈಗಿನ ಹಣದುಬ್ಬರ ಪ್ರಮಾಣ ಗಮನಿಸಿದರೆ, ಆರ್‌ಬಿಐನ ಉದ್ದೇಶ ಸ್ವಲ್ಪ ಮಟ್ಟಿಗೆ ಈಡೇರಿದೆ ಎಂದೇ ಹೇಳಬಹುದು.

ಆದರೂ ಉಕ್ರೇನ್‌ ಮೇಲಿನ ರಷ್ಯಾ ಯುದ್ಧ ಇನ್ನಷ್ಟು ದಿನ ಮುಂದುವರಿದರೆ ಹಣದುಬ್ಬರ ಹೆಚ್ಚಿನ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಗಳು ಕಡಿಮೆ. ಅಲ್ಲದೆ, ಆರ್‌ಬಿಐ ಕೂಡ ಮುಂದಿನ ತನ್ನ ದ್ವೆ„ಮಾ ಸಿಕ ಸಭೆಗಳಲ್ಲಿ ರೆಪೋ ದರವನ್ನು ಇನ್ನಷ್ಟು ಏರಿಕೆ ಮಾಡುವ ಸಂಭವವೂ ಇದೆ. ಒಂದು ಲೆಕ್ಕಾಚಾರದಲ್ಲಿ ಈ ಕ್ರಮ ರಿಯಲ್‌ ಎಸ್ಟೇಟ್‌, ವಾಹನೋ ದ್ಯಮದ ಮೇಲೆ ಪೆಟ್ಟು ಬೀಳುವ ಸಾಧ್ಯತೆಯಂತೂ ಇದ್ದೇ ಇದೆ. ಇದರ ಜತೆಯಲ್ಲೇ ಈಗ ಕರ್ನಾಟಕವೂ ಸೇರಿ ಹಲವಾರು ರಾಜ್ಯಗಳಲ್ಲಿ ವರುಣನ ಪ್ರಕೋಪ ಹೆಚ್ಚಾಗಿದ್ದು, ಬೆಳೆ ನಾಶವಾಗಿದೆ. ಕೃಷಿ ಉತ್ಪನ್ನಗಳ ಉತ್ಪಾದನೆ ಯೂ ಕಡಿಮೆಯಾಗುವ ಸಾಧ್ಯತೆ ಇದ್ದು, ತರಕಾರಿ ಸಹಿತ ವಿವಿಧ ಬೆಳೆಗಳ ದರ ಹೆಚ್ಚುವ ಸಂಭವವಿದೆ. ಈಗಿನಿಂದಲೇ ಕೇಂದ್ರ ಮತ್ತು ರಾಜ್ಯ ಸರಕಾರ ಗಳು ಇತ್ತ ಈ ನಿಟ್ಟಿನಲ್ಲಿ ಯೋಚಿಸಿ ಪರ್ಯಾಯ ವ್ಯವಸ್ಥೆ ಮಾಡುವ ಅಗತ್ಯತೆ ಇದೆ. ಒಟ್ಟಾರೆಯಾಗಿ ಯಾವುದೇ ಕಾರಣಕ್ಕೂ ಜನರ ಮೇಲೆ ಇನ್ನಷ್ಟು ಹೊರೆ ಬೀಳದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರಗಳದ್ದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.