ಟೊಮೆಟೋ-ಕ್ಯಾಪಿಕಂ ನಕಲಿ ಔಷಧಿ ನಿಯಂತ್ರಣಕ್ಕೆ ಒತ್ತಾಯ


Team Udayavani, Jul 13, 2022, 5:40 PM IST

tdy-30

ಕೋಲಾರ: ಟೊಮೆಟೋ ಕ್ಯಾಪ್ಸಿಕಂಗೆ ಬಾದಿಸುತ್ತಿರುವ ರೋಗ ನಿಯಂತ್ರಣಕ್ಕೆ ಗುಣಮಟ್ಟದ ಔಷಧ ವಿತರಣೆ ಮಾಡಿ ನಕಲಿ ಬೀಜ ಕಂಪನಿಗಳ ನಿಯಂತ್ರಣಕ್ಕೆ ಕಾನೂನು ರಚನೆ ಮಾಡಬೇಕೆಂದು ರೈತಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಯೆದುರು ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ದುಬಾರಿಯಾಗಿರುವ ಕೃಷಿ ಕ್ಷೇತ್ರದಲ್ಲಿ ಲಕ್ಷಾಂತರ ರೂ. ಬಂಡವಾಳ ಹಾಕಿ ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ಅತಿವೃಷ್ಟಿ ಅನಾವೃಷ್ಟಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಒಂದು ಕಡೆಯಾದರೆ ಮತ್ತೂಂದೆಡೆ ಮುಂಗಾರು ಮಳೆ ಆರ್ಭಟಕ್ಕೆ ತೇವಾಂಶ ಹೆಚ್ಚಾಗಿ ಟೊಮೆಟೋ, ಕ್ಯಾಪ್ಸಿಕಂ ಮತ್ತಿತರ ವಾಣಿಜ್ಯ ಬೆಳೆಗಳಿಗೆ ಬಾಧಿಸುತ್ತಿರುವ ಚುಕ್ಕಿರೋಗ, ಅಂಗಮಾರಿ, ಊಜಿ ನಿಯಂತ್ರಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡಿ ಸಿಂಪಡಿಸುವ ಔಷಧಿಗಳಿಂದ ರೋಗ ನಿಯಂತ್ರಣಕ್ಕೆ ಬಾರದೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದ್ದರೂ ಬೆಳೆ ನಾಶದಿಂದ ರೈತರು ಬೀದಿಗೆ ಬೀಳುತ್ತಿದ್ದಾರೆ ಎಂದು ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಆರೋಪಿಸಿದರು.

ಕಳಪೆ ಔಷಧ: ಬಹುರಾಷ್ಟ್ರೀಯ ಔಷಧ ಕಂಪನಿಗಳು ವಿತರಣೆ ಮಾಡುತ್ತಿರುವ ಔಷಧಿಗಳ ಗುಣಮಟ್ಟ ಸಂಪೂರ್ಣವಾಗಿ ಕಳಪೆಯಾಗಿದೆ. 10 ರೂ. ಸೊಳ್ಳೆ ಬತ್ತಿ ಮನೆಯ ಸೊಳ್ಳೆಯನ್ನು ಸಾಯಿಸುತ್ತದೆ. ಆದರೆ, ಲಕ್ಷಾಂತರ ರೂ. ನೀಡಿ ಖರೀದಿ ಮಾಡುವ ಔಷಧಿಗಳಿಂದ ರೋಗ ನಿಯಂತ್ರಣಕ್ಕೆ ಬಾರದೆ ರೈತನ ಆರೋಗ್ಯ ಹದಗೆಡುತ್ತದೆ. ಅಧಿಕಾರಿಗಳು ಕಂಪನಿಗಳ ಜೊತೆ ಶಾಮೀಲಾಗಿ ರೈತರ ಹಣೆಬರಹ ತಿದ್ದುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಗದ ಬೆಳೆ ವಿಮಾ ಪರಿಹಾರ: ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಫಸಲ್‌ ಭಿಮಾ ಯೋಜನೆ ಕಟ್ಟ ಕಡೆಯ ರೈತರಿಗೆ ಸಿಗುತ್ತಿಲ್ಲ. ಮಳೆಯಾಧಾರಿತ ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಸೀಮಿತವಾಗಿದ್ದು, ಲಕ್ಷಾಂತರ ಬಂಡವಾಳ ಹಾಕುವ ವಾಣಿಜ್ಯ ಬೆಳೆಗಳಾದ ಟೊಮೆಟೋ, ಕ್ಯಾಪ್ಸಿಕಂ ಮತ್ತಿತರರ ಬೆಳೆಗಳಿಗೆ ವಿಮೆ ಎಂಬುದು ಮರೀಚಿಕೆಯಾಗಿದೆ. ಪ್ರತಿಯೊಂದು ಬೆಳೆಗೂ ವಿಮಾ ಕಂಪನಿ ಪರಿಹಾರ ನೀಡುವ ಕಾನೂನು ಜಾರಿಯಾಗಬೇಕು. ಬೆಳೆ ಪರಿಶೀಲಿಸಲು ವಿಶೇಷ ತಂಡ ರಚನೆ ಮಾಡಬೇಕು. ಎಕರೆ ತಲಾ 5 ಲಕ್ಷ ಬೆಳೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ನಿರ್ದೇಶಕರು ರವಿಕುಮಾರ್‌ ಮುಂಗಾರು ಮಳೆ ಹೆಚ್ಚಾಗಿರುವುದರಿಂದ ತೇವಾಂಶದ ನಿಯಂತ್ರಣವಿಲ್ಲದೆ ಟೊಮೆಟೋ ಮತ್ತಿತರ ಬೆಳೆಗಳಿಗೆ ರೋಗ ಬಾಧಿಸುತ್ತಿದೆ. ಸರ್ಕಾರಕ್ಕೆ ವರದಿ ನೀಡಿ ರೈತರ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.

ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಬಂಗವಾದಿ ನಾಗರಾಜ್‌ ಗೌಡ, ವಿಭಾಗೀಯ ಕಾರ್ಯಾಧ್ಯಕ್ಷ ಫಾರೂಖ್‌ ಪಾಷ, ಮುಳಬಾಗಿಲು ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಶ್ರೀನಿವಾಸಪುರ ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ, ನಳಿನಿ.ವಿ, ಇರ್ಫಾತ್‌ ತಾರಾ, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ವೆಂಕಟೇಶಪ್ಪ, ಗೋವಿಂದಪ್ಪ, ನಾರಾಯಣಗೌಡ, ಹರೀಶ್‌, ಮರಗಲ್‌ ಮುನಿಯಪ್ಪ, ವಿಶ್ವ, ಭಾಸ್ಕರ್‌, ಬಂಗಾರಿ ಮಂಜು, ರಾಜೇಶ್‌, ಗಿರೀಶ್‌, ಚಂದ್ರಪ್ಪ ಇತರರಿದ್ದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.