ನೆರೆ ಬರುವ ಮುನ್ನ ಎಚ್ಚರವಾಗಿ: ಪಾಟೀಲ


Team Udayavani, Jul 15, 2022, 3:46 PM IST

14flood

ಅಫಜಲಪುರ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಅಲ್ಲಿನ ನದಿಗಳು ತುಂಬಿವೆ. ಜಲಾಶಯಗಳು ಭರ್ತಿಯಾಗುತ್ತಿದ್ದು ಹೆಚ್ಚಾದ ನೀರನ್ನು ಭೀಮಾ ನದಿಗೆ ಹರಿ ಬಿಡುವುದರಿಂದ ನಮ್ಮಲ್ಲೂ ನೆರೆ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಾಗಿ ತಾಲೂಕು ಅಧಿಕಾರಿಗಳು ಎಚ್ಚರವಾಗಿ, ಈಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ತ್ರೆ„ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಮುಂಗಾರು ಹಂಗಾಮಿನ ಆರಂಭದ ಒಂದು ತಿಂಗಳು ಮಳೆ ಬಾರದೇ ಬಿತ್ತನೆ ಕುಂಠಿತವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ಹೀಗಾಗಿ ಕೃಷಿ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆಯವರು ರೈತರ ಕುರಿತು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಕೆಲಸ ಮಾಡಬೇಕು ಎಂದರು.

ಪ್ರವಾಹ ಬರುವ ಸಂಭವ ಹೆಚ್ಚಿದ್ದರಿಂದ ಸಂಬಂಧಪಟ್ಟವರು ಜಾಗೃತವಾಗಿದ್ದು ನದಿ ಪಾತ್ರದ ಹಳ್ಳಿಗಳ ಜನ ಸುರಕ್ಷಿತವಾಗಿರುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅನೇಕ ಗ್ರಾಮಗಳಲ್ಲಿ ಶಾಲೆಗಳು, ಅಂಗನವಾಡಿಗಳ ಮೇಲ್ಛಾವಣಿಗಳು ಶಿಥಿಲಾವಸ್ಥೆಯಲ್ಲಿವೆ. ಅವುಗಳ ಮಾಹಿತಿ ನೀಡಿ. ಯಾವುದೇ ಕಾರಣಕ್ಕೂ ಅಂಗನವಾಡಿ, ಶಾಲೆ ಮಕ್ಕಳಿಗೆ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ. ಸಾಕಷ್ಟು ಅನುದಾನ ಬರುತ್ತಿದೆ. ಅದರ ಸದ್ಬಳಕೆ ಮಾಡಿಕೊಳ್ಳಿ. ಅನುದಾನ ದುರ್ಬಳಕೆಯಾಗಿದ್ದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಗ್ರಾಮೀಣ ಭಾಗದ ರಸ್ತೆಗಳು ಮಳೆಯಿಂದಾಗಿ ಹಾಳಾಗಿದ್ದರೆ ಅದನ್ನು ನನ್ನ ಗಮನಕ್ಕೆ ತನ್ನಿ. ಕೂಡಲೇ ರಸ್ತೆಗಳನ್ನು ಸರಿಪಡಿಸುವ ಕೆಲಸ ಮಾಡಿಸಲಾಗುತ್ತದೆ ಎಂದರು.

ಕೃಷಿ ಇಲಾಖೆ ಅಧಿಕಾರಿ ಎಸ್‌. ಎಚ್‌ ಗಡಗಿಮನಿ ಮಾತನಾಡಿ ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಬಹಳ ಕಡಿಮೆ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯ ವಿಳಂಬವಾಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೆಸರು, ಸೋಯಾ ಹೊರತು ಪಡಿಸಿ ಹತ್ತಿ, ತೊಗರಿ, ಉದ್ದು ಸೇರಿದಂತೆ ಇನ್ನಿತರ ಮುಂಗಾರು ಹಂಗಾಮಿನ ಬೆಳೆಗಳನ್ನು ಈ ತಿಂಗಳ ಅಂತ್ಯದ ವರೆಗೂ ಬಿತ್ತನೆ ಮಾಡಬಹುದು ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜದ ದಾಸ್ತಾನು ಇದ್ದು ರೈತರು ರಿಯಾಯ್ತಿ ದರದಲ್ಲಿ ಪಡೆದುಕೊಳ್ಳುತ್ತಿದ್ದಾರೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಇದುವರೆಗೆ ಒಟ್ಟು ಶೇ. 18.8 ಪ್ರತಿಶತದಷ್ಟು ಮಾತ್ರ ಬಿತ್ತನೆಯಾಗಿದೆ. ರೈತರು ತಮ್ಮ ಬೆಳೆಗೆ ವೀಮೆ ಮಾಡಿಸಲು ಇನ್ನೂ ಕಾಲಾವಕಾಶವಿದ್ದು ಈ ತಿಂಗಳ ಅಂತ್ಯದ ವರೆಗೆ ವಿಮೆ ಮಾಡಿಸಿಕೊಳ್ಳಬಹುದಾಗಿದೆ. ಈ ಕುರಿತು ನಾವು ರೈತರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.

ಆರೋಗ್ಯ ಇಲಾಖೆ ಅಧಿಕಾರಿ ಡಾ| ರವಿಕಿರಣ ಮಾತನಾಡಿ, ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಸಕ್ತ ತಿಂಗಳಲ್ಲಿ ಐದು ಕೇಸ್‌ಗಳು ದಾಖಲಾಗಿದ್ದು, ಈ ಪೈಕಿ ಇಬ್ಬರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಉಳಿದ ಮೂರು ಜನರಿಗೆ ಅವರವರ ಮನೆಗಳಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ಬಿಇಒ ಮಾರುತಿ ಹುಜರತಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನ ಪಠ್ಯಪುಸ್ತಕಗಳು ಬಂದಿದ್ದು ಶಾಲೆಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಸಮವಸ್ತ್ರ ಬಂದಿಲ್ಲ, ವಾರದ ಒಳಗಾಗಿ ಸಮವಸ್ತ್ರ ಬರಲಿದ್ದು, ಎಲ್ಲವನ್ನು ಹಂಚಿಕೆ ಮಾಡಲಾಗುತ್ತದೆ ಎಂದರು.

ಇನ್ನುಳಿದಂತೆ ಪಿಆರ್‌ಇ, ಶಿಶು ಅಭಿವೃದ್ಧಿ, ಜೆಸ್ಕಾಂ, ಅರಣ್ಯ, ತೋಟಗಾರಿಕೆ, ಆಯುಷ್‌ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ತಹಶೀಲ್ದಾರ್‌ ಸಂಜೀವಕುಮಾರ ದಾಸರ್‌, ಜಿ.ಪಂ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ತಾ.ಪಂ ಪ್ರಭಾರಿ ಇಒ ರಮೇಶ ಪಾಟೀಲ, ಕೆ.ಎಂ. ಕೋಟೆ, ಸರ್ವಜ್ಞ, ಹೊನ್ನೇಶ, ನಾಗರಾಜ ಕೆ, ರಾಜೇಂದ್ರ ಮರಬ್‌, ಮೀನಾಕ್ಷಿ ಪಾಟೀಲ, ಡಾ| ಎಂ.ಬಿ. ಪಾಟೀಲ, ದೇವೀಂದ್ರ ಸಜ್ಜನ್‌, ಕೆ. ಬಾಲಕೃಷ್ಣ, ಅಶೋಕ ನಾಯ್ಕ, ಅರ್ಜುನಕುಮಾರ ಪಾಟೀಲ, ಜಾಫರ್‌ ಅನ್ಸಾರಿ, ಶಿವರಾಜ್‌ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸಿಎಂ ಸಿದ್ಧರಾಮಯ್ಯ ರಾಜೀನಾಮೆ ಕೊಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

12-epson

Epson ಇಕೊ ಟ್ಯಾಂಕ್ ಪ್ರಿಂಟರ್: ರಶ್ಮಿಕಾ ಮಂದಣ್ಣ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.