ಆಂಧ್ರ, ಕರ್ನಾಟಕ ಗಡಿ ಜಿಲಾ ಪೊಲೀಸ್‌ ಅಧಿಕಾರಿಗಳ ಸಭೆ

ಉಭಯ ರಾಜ್ಯಗಳಲ್ಲಿ ಸುಳಿದಾಡುವ ಅಪರಾಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ

Team Udayavani, Jul 15, 2022, 5:40 PM IST

ಆಂಧ್ರ, ಕರ್ನಾಟಕ ಗಡಿ ಜಿಲಾ ಪೊಲೀಸ್‌ ಅಧಿಕಾರಿಗಳ ಸಭೆ

ಶ್ರೀನಿವಾಸಪುರ: ತಾಲೂಕಿನ ಹೊಗಳಗೆರೆ ತೋಟಗಾರಿಕೆ ಮಾವು ಸಂಶೋಧನಾ ಕೇಂದ್ರದಲ್ಲಿ ಆಂಧ್ರ ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಎಸ್ಪಿ ಡಿ.ದೇವರಾಜ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆ, ಚಿತ್ತೂರು, ಪಲಮನೇರು ಹಾಗೂ ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಕೆಜಿಎಫ್ ಪೊಲೀಸ್‌ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ನಂತರ ಎಸ್ಪಿ ದೇವರಾಜ್‌ ಸುದ್ದಿಗಾರರೊಂದಿಗೆ ಮಾತನಾಡಿದರು. ಗಡಿ ಭಾಗದಲ್ಲಿ ಕಳ್ಳತನ, ಅಕ್ರಮ ಚಟುವಟಿಕೆಗಳು, ಅಕ್ರಮವಾಗಿ ವಸ್ತುಗಳ ಸಾಗಣೆ, ಕಳ್ಳತನ, ಅಪರಾಧ ಪ್ರಕರಣಗಳ ತಡೆಯುವುದು, ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಹೇಳಿದರು.

ಗಾಂಜಾ ಸಾಗಾಣಿಕೆ ತಡೆ: ಹಲವು ಪ್ರಕರಣಗಳಲ್ಲಿ ತನಿಖೆ ನಡೆಸುವಾಗ ಪರಸ್ಪರ ಸಹಕಾರ, ಮಾಹಿತಿ ವಿನಿಮ ಯದ ಬಗ್ಗೆ ಮಾತುಕತೆ ನಡೆಸಲಾಗಿದೆ. ಆಂಧ್ರ ಮೂಲಕ ರಾಜ್ಯಕ್ಕೆ ಗಾಂಜಾ ಸಾಗಾಣಿಕೆ ತಡೆ ಯುವುದು, ಆರೋಪಿಗಳನ್ನು ಸೆರೆ ಹಿಡಿದು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಅಬಕಾರಿ ಪ್ರಕರಣಗಳ ಕುರಿತು ಚರ್ಚೆ: ಗೋ ಸಾಗಾಣಿಕೆ, ಅಂತಾರಾಜ್ಯ ಕಳ್ಳರ ಗ್ಯಾಂಗ್‌, ಅಬಕಾರಿ ವಿಷಯಕ್ಕೆ ಸಂಬಂಧಿಸಿ ಪ್ರಕರಣಗಳನ್ನು ಹೇಗೆ ತಡೆಯಬೇಕೆಂಬುವ ವಿಚಾರ ಕುರಿತೂ ಚರ್ಚೆ ನಡೆಸಲಾಗಿದೆ. ಹಾಗೆಯೇ, ಗಡಿ ಭಾಗಗಳಲ್ಲಿ ವಿವಿಧ ಕಾರಣಗಳಿಂದ ಮೃತಪಟ್ಟ ಅನಾಥ ಶವಗಳ ಬಗ್ಗೆ ಗಮನ ಹರಿಸುವುದು, ನಾಪತ್ತೆ ಪ್ರಕರಣಗಳಲ್ಲಿ ಸದರಿ ಮೃತಪಟ್ಟವರು ತಾಳೆಯಾಗುತ್ತಾರೆ ಎಂಬುದನ್ನು ಸಹ ಇಲಾಖೆಯ ಅಧಿಕಾರಿಗಳು ಗಂಭೀರವಾಗಿ
ಪರಿಗಣಿಸಬೇಕೆಂದು ತಿಳಿಸಲಾಗಿದೆ ಎಂದು ವಿವರಿಸಿದರು.

ಸಮನ್ವಯ ಅಗತ್ಯ: ರಾಜ್ಯ ಮತ್ತು ಅಂತಾರಾಜ್ಯ ಅಪರಾಧ ಪ್ರಕರಣಗಳು ಆಂಧ್ರ ಅಥವಾ ಕರ್ನಾಟಕದಲ್ಲಿ ನಡೆದರೂ ಪೊಲೀಸರು ಸಹಕಾರ, ಸಮನ್ವಯ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಆಗ ಅಪರಾಧಗಳನ್ನು ಸಾಧ್ಯವಾದಷ್ಟು ತಡೆಯಬಹುದು. ಈ ಬಗ್ಗೆಯೂ ಮಾತುಕತೆ ನಡೆಸಲಾಯಿತು ಎಂದು ತಿಳಿಸಿದರು.

ಅಪರಾಧಿಗಳ ಮಟ್ಟ ಹಾಕಲು ಸಭೆ: ಒಟ್ಟಾರೆಯಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಸಂಬಂಧ ಉಭಯ ರಾಜ್ಯಗಳಲ್ಲಿ ಸುಳಿದಾಡುವ ಅಪರಾಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಈ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಆಂಧ್ರ ಪ್ರದೇಶದ ಪಲಮನೇರು ಡಿವೈಎಸ್ಪಿ ಗಂಗಯ್ಯ, ಮದನಪಲ್ಲಿ ಡಿವೈಎಸ್ಪಿ ರವಿ ಮನೋಹರಾಚಾರಿ, ಜಿಲ್ಲೆಯ ಬೇತಮಂಗಲ ಸಿಪಿಐ ವೆಂಕಟೇಶ್‌, ಮುಳಬಾಗಿಲು ಡಿವೈಎಸ್ಪಿ
ಜಯಶಂಕರ್‌, ಶ್ರೀನಿವಾಸಪುರ ಸಿಪಿ.ಐ. ಬಿ.ಜಿ.ನಾರಾಯಣಸ್ವಾಮಿ, ಗೌನಿಪಲ್ಲಿ ಸಿಪಿಐ ಜಯರಾಜ್‌ ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.