ಮಳಲಿ ಮಸೀದಿ: ಮಂಗಳೂರು ಸಿವಿಲ್ ಕೋರ್ಟ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ
ಅಸಲು ದಾವೆ ವಿಚಾರಣೆ
Team Udayavani, Jul 16, 2022, 7:00 AM IST
ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅಸಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಅಸಲು ದಾವೆಯ ಭವಿಷ್ಯ ವಿಚಾರಣಾ ನ್ಯಾಯಾಲಯದಲ್ಲೇ ನಿರ್ಧಾರವಾಗಲಿದೆ.
ಈ ವಿಚಾರವಾಗಿ ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್ ಹಾಗೂ ಬಡುಗಳೈಪಾಡಿ ಗ್ರಾಮದ ಮನೋಜ್ ಕುಮಾರ್ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ತಕರಾರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್ ಸುಬ್ಟಾರೆಡ್ಡಿ ಹಾಗೂ ಮಸೀದಿ ಆಡಳಿತ ಮಂಡಳಿ ಪರ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್ ವಾದ ಮಂಡಿಸಿದ್ದರು.
ಅರ್ಜಿದಾರರ ವಾದ ಏನಿತ್ತು:
ಮಳಲಿ ಮಸೀದಿಯಲ್ಲಿ ಪತ್ತೆಯಾಗಿರುವ ದೇವಾಲಯದ ರಚನೆ ಬಗ್ಗೆ ಮೊದಲು ಪರಿಶೀಲನೆಯಾಗಬೇಕು. ಅದರ ವಸ್ತುಸ್ಥಿತಿ ಪರಿಶೀಲಿಸಲು ನ್ಯಾಯಾಲಯದ ವತಿಯಿಂದ ಕಮಿಷನರ್ ಒಬ್ಬರನ್ನು ನೇಮಕ ಮಾಡಬೇಕು. ಜ್ಞಾನವಾಪಿ ಮಸೀದಿಯ ಮಾದರಿಯಲ್ಲಿ ಕಮಿಷನರ್ ನೇಮಕ ಮಾಡುವ ಕುರಿತು ಪರಿಗಣಿಸಬೇಕಿದೆ. ಆದ್ದರಿಂದ, ಕಮಿಷನರ್ ನೇಮಕ ಮಾಡುವ ಕುರಿತ ಮನವಿ ಬಗ್ಗೆ ಸಿವಿಲ್ ಕೋರ್ಟ್ ಮೊದಲು ವಿಚಾರಣೆ ನಡೆಸಬೇಕಿದೆ.
ನೂರು ವರ್ಷಕ್ಕೂ ಹಳೆಯ ಕಟ್ಟಡ ಪ್ರಾಚೀನ ಸ್ಮಾರಕ ಎನಿಸಿಕೊಳ್ಳುತ್ತದೆ. ಮಳಲಿ ಮಸೀದಿ 700 ವರ್ಷಕ್ಕೂ ಹಳೆಯದಾಗಿದೆ ಎಂದು ಮಸೀದಿಯವರೇ ಹೇಳುತ್ತಿದ್ದಾರೆ.
ಹೀಗಿರುವಾಗ ಒಳಗೆ ಪತ್ತೆಯಾಗಿರುವ ದೇವಾಲಯ ಅದಕ್ಕಿಂತ ಹಳೆಯದಾಗಿರುವ ಸಾಧ್ಯತೆ ಇರುತ್ತದೆ.
ಮಸೀದಿಯವರ ಮಾತನ್ನೇ ಒಪ್ಪಕೊಂಡರೂ ಪ್ರಾಚೀನ ಸ್ಮಾರಕಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯಿಸುವುದಿಲ್ಲ.ಆದ್ದರಿಂದ, ಆ ಕಾಯ್ದೆಯಡಿ ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂಬ ಅವರ ವಾದ ಒಪ್ಪಲು ಸಾಧ್ಯವಿಲ್ಲ .
ಮೊದಲು ಕಮಿಷನರ್ ನೇಮಕ ಮಾಡಬೇಕು. ಅವರು ಸ್ಥಳದ ಸರ್ವೇ ನಡೆಸಿ ವಸ್ತುನಿಷ್ಠ ವರದಿ ನೀಡಬೇಕು. ಅದಕ್ಕೂ ಮೊದಲು ದಾವೆಯ ಸಿಂಧುತ್ವದ ಬಗ್ಗೆ ವಿಚಾರಣೆ ನಡೆಸಿ, ಒಂದೊಮ್ಮೆ ಅದು ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ಆದೇಶ ನೀಡಿದರೆ, ತಕ್ಷಣವೇ ಒಳಗಿರುವ ದೇವಾಲಯ ರಚನೆಯನ್ನು ನೆಲಸಮಗೊಳಿಸುವ ಸಾಧ್ಯತೆ ಇದೆ. ಆದ್ದರಿಂದ, ಕಮಿಷನರ್ ನೇಮಕಗೊಂಡು, ಪರಿಶೀಲನೆ ನಡೆಸುವವರೆಗೆ ದಾವೆಯ ಸಿಂಧುತ್ವದ ಕುರಿತು ಯಾವುದೇ ಆದೇಶ ನೀಡದಂತೆ ಸಿವಿಲ್ ಕೋರ್ಟ್ಗೆ ನಿರ್ದೇಶಿಸಬೇಕು.
ಮಸೀದಿ ಆಡಳಿತ ಮಂಡಳಿ ವಾದ:
ಅಸಲು ದಾವೆಯನ್ನು ಆಲಿಸಲು ವಿಚಾರಣಾ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಕಮಿಷನರ್ ವರದಿ ಅಗತ್ಯವಿಲ್ಲ. ಒಂದು ವೇಳೆ, ಮೊದಲು ಕಮಿಷನರ್ ನೇಮಿಸಿ, ವರದಿ ಬಂದ ನಂತರ ದಾವೆಯ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ, ಕಮಿಷನರ್ ನೇಮಕ ಮತ್ತದರ ವರದಿ ಎರಡಕ್ಕೂ ಮಾನ್ಯತೆ ಇರುವುದಿಲ್ಲ. ಆದ್ದರಿಂದ, ಮೊದಲು ಅಸಲು ದಾವೆಯ ಸಿಂಧುತ್ವದ ಬಗ್ಗೆ ನಿರ್ಧಾರವಾಗಬೇಕಿದೆ.
ಪ್ರಕರಣವೇನು?
ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್ ಹಾಗೂ ಮನೋಜ್ ಕುರ್ಮಾ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು. ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್ ಒಬ್ಬರನ್ನು ನೇಮಕ ಮಾಡಿ ಸ್ಥಳ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ಕೈಗೆತ್ತಿಕೊಂಡಿತ್ತು. ಇದನ್ನು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.