ಅತ್ಯಾಚಾರದ ದೂರು ಆರೋಪ ಹಾಲಪ್ಪನವರದೇ ಸೃಷ್ಟಿ: ಬೇಳೂರು ವ್ಯಂಗ್ಯ


Team Udayavani, Jul 16, 2022, 5:37 PM IST

1-dsdsad

ಸಾಗರ: ಶಾಸಕರು ತಮ್ಮ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲು ಪ್ರಯತ್ನ ನಡೆದಿತ್ತು. ಅದಕ್ಕೆ ನಾನು ಕುಮ್ಮಕ್ಕು ನೀಡಿದ್ದೇನೆಂದು ಸುಳ್ಳು ಆರೋಪ ಮಾಡಿದ್ದಾರೆ. ಅಂತಹ ನೀಚ ಕೆಲಸಕ್ಕೆ ನಾನು ಇಳಿಯುವುದಿಲ್ಲ. ಅವರು ಹತಾಶರಾಗಿ ಪ್ರತಿಕ್ರಿಯಿಸುತ್ತಿದ್ದು ನನ್ನ ವಿರುದ್ಧ ಏನೇನೋ ಹೇಳುತ್ತಿದ್ದಾರೆ ಎಂದು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಪ್ರತಿಪಾದಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ತಮ್ಮ ವಿರುದ್ಧ ಇಂತಹ ಆರೋಪ ಬಂದಾಗ ಶಾಸಕ ಹಾಲಪ್ಪ ಅವರು ವೆಂಕಟೇಶ್‌ಮೂರ್ತಿ ಎಂಬುವವರ ವಿರುದ್ಧ ಇಂತಹುದೇ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಲು ಪ್ರಚೋದಿಸಿದಂತಹ ಪ್ರಕರಣ ನಡೆದಿತ್ತು. ನಾನು ಈವರೆಗೂ ಬೇರೆಯವರ ವಿರುದ್ಧ ಎಫ್‌ಐಆರ್ ಮಾಡಲು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಲ್ಲ. ಶಾಸಕರು ಹೇಳೀಕೊಳ್ಳುವಂತೆ ಮೊನ್ನೆ ಕೂಡ ನಾನು ಹೋಗಿಲ್ಲ ಎಂದರು.

ನನ್ನ ಕಾಲದಲ್ಲಿ ಹೆಚ್ಚು ಎಫ್‌ಐಆರ್ ಆಗುತ್ತಿತ್ತು ಎಂದು ಶಾಸಕರು ಆರೋಪಿಸಿದ್ದಾರೆ. ನನ್ನ ಅವಧಿಯಲ್ಲಿ ಕಾನೂನು ಪ್ರಕಾರ ಎಫ್‌ಐಆರ್ ಆಗುವ ಪ್ರಕರಣದಲ್ಲಿ ಹಸ್ತಕ್ಷೇಪ ನಡೆಯುತ್ತಿರಲಿಲ್ಲ. ಈಗ ಶಾಸಕರು ಕೇಸು ದಾಖಲಾಗಲು ಬಿಡುತ್ತಿಲ್ಲವಾದುದರಿಂದ ಈ ತರಹದ ಕಡಿಮೆ ಸಾಧನೆ ಸಾಧ್ಯವಾಗಿದೆ ಎಂದು ಬೇಳೂರು ವ್ಯಂಗ್ಯವಾಡಿದರು.

ಎಂಡಿಎಫ್ ಸರ್ವಸದಸ್ಯರ ಸಭೆಯಲ್ಲಿ ಶ್ರೀಪಾದ ಹೆಗಡೆ ನಿಸ್ರಾಣಿ ಮತ್ತು ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದ 27 ಆರೋಪಿಗಳ ವಿರುದ್ಧ ನಾಲ್ಕು ತಿಂಗಳ ನಂತರ ಎಫ್‌ಐಆರ್ ದಾಖಲಾಗಿದೆ. ನಮ್ಮ ನಿರಂತರ ಹೋರಾಟಕ್ಕೆ ಸಿಕ್ಕ ಮೊದಲ ಜಯ. ನಿಂತು ಹಲ್ಲೆ ಮಾಡಿಸಿದ ಶಾಸಕ ಹಾಲಪ್ಪ ವಿರುದ್ಧ ಎಫ್‌ಐಆರ್ ದಾಖಲು ಮಾಡಿಲ್ಲ. ವಿಡಿಯೋ ಸಾಕ್ಷಿ ಇದ್ದರೂ ಸಾಗರದ ಪೊಲೀಸರಲ್ಲಿ ಭಯ ಇದೆ. ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಪ್ರಕರಣ ದಾಖಲು ಮಾಡಿಲ್ಲ. ಇಷ್ಟಾಗಿಯೂ ಎಂಡಿಎಫ್ ಹಲ್ಲೆ ಪ್ರಕರಣ ಹೊರಗಡೆ ನಡೆದಿದ್ದು, ನನಗೆ ಸಂಬಂಧ ಇಲ್ಲ ಎಂದು ಶಾಸಕರು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಪ್ರತಿಕ್ರಿಯಿಸಿದರು.

ಎಂಡಿಎಫ್ ಆಡಳಿತದ ವಿಚಾರದಲ್ಲಿ ನಾನು ಯಾರ ಪರವೂ ಇಲ್ಲ. ಹರನಾಥರಾವ್ ಅಧ್ಯಕ್ಷರಾದರೂ ಸರಿ, ಸ್ವತಃ ಶಾಸಕ ಹಾಲಪ್ಪ ಆದರೂ ಆಕ್ಷೇಪಿಸುವುದಿಲ್ಲ. ಆದರೆ ಹಲ್ಲೆ ನಡೆಸಿದವರಿಗೆ ಶಿಕ್ಷೆಯಾಗಬೇಕು, ಮುಂದೆ ಇಂತಹ ಘಟನೆ ನಡೆಯಬಾರದು ಎನ್ನುವ ಉದ್ದೇಶದಿಂದ ಪ್ರತಿಭಟನೆ ನಡೆಸಿದ್ದೇನೆ. ನಮ್ಮೂರಿನ ವಿದ್ಯಾಸಂಸ್ಥೆ ಸುಲಲಿತವಾಗಿ ನಡೆಯಬೇಕು. ಅಂತಹ ವಿದ್ಯಾಸಂಸ್ಥೆಯ ನಿರ್ವಹಣೆಯ ವಿಚಾರದಲ್ಲಿ ನಾನು ವ್ಯತಿರಿಕ್ತವಾಗಿ ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಗರ, ಹೊಸನಗರದಲ್ಲಿ ವಿಪರೀತ ಮಳೆಯಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಬ್ಯಾಕೋಡಿನಲ್ಲಿ ತೋಟದ ಮೇಲೆ ಧರೆ ಕುಸಿದು ಹದಿನೈದು ದಿನ ಆಗಿದೆ. ಈತನಕ ಶಾಸಕರಾಗಲಿ, ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ತಾಲೂಕಿನಲ್ಲಿ ಶೇ. ೪೦ಕ್ಕೂ ಹೆಚ್ಚು ಶಾಲೆಗಳು ತೀರ ದುಸ್ಥಿತಿಯಲ್ಲಿದ್ದು, ವಿದ್ಯಾರ್ಥಿಗಳು ಆತಂಕದಿಂದಲೇ ಕುಳಿತು ಪಾಠ ಕೇಳುವಂತಾಗಿದೆ. ಲ್ಯಾವಿಗೆರೆ ಶಾಲೆಯೊಳಗೆ ನೀರು ನುಗ್ಗಿದೆ. . ಕಳೆದ ವರ್ಷ ಮಳೆಯಿಂದ ಬಿದ್ದು ಹೋದ ಮನೆಗಳಿಗೆ ಈತನಕ ಪರಿಹಾರ ಕೊಟ್ಟಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನರಿಗೆ ಕಷ್ಟ ಬಿಟ್ಟರೆ ಇನ್ನೇನು ಸಿಕ್ಕಿಲ್ಲ ಎಂದು ದೂರಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್.ಸುರೇಶಬಾಬು ಮಾತನಾಡಿ, ಸರ್ಕಾರಿ ಆಸ್ಪತ್ರೆ, ತಾಯಿಮಗು ಆಸ್ಪತ್ರೆಯಲ್ಲಿ ಪಥ್ಯಾಹಾರದ ಗುತ್ತಿಗೆ ಪಡೆದವರ ಕುರಿತು ನಾವು ಮಾತನಾಡುತ್ತಿಲ್ಲ. ಕಾನೂನಿನ ಪ್ರಕಾರ ಆಸ್ಪತ್ರೆಯಲ್ಲಿ ಅಡುಗೆ ಮನೆ ಸುಸ್ಥಿತಿಯಲ್ಲಿರುವಾಗ, ಅಡುಗೆಯವರಿರುವಾಗ, ಡಿ ದರ್ಜೆ ನೌಕರರನ್ನು ಕೊಟ್ಟಿರುವಾಗ, ನೀರು ಸರಬರಾಜು ಸರಿಯಿರುವಾಗ ಆಹಾರವನ್ನು ಇಲ್ಲಿಯೇ ತಯಾರಿಸುವುದರ ಬದಲು ಗುತ್ತಿಗೆ ಕೊಡುವಂತೆ ಯಾವ ಕಾರಣಕ್ಕಾಗಿ ಮಾಡಲಾಗಿದೆ ಎಂಬ ಪ್ರಶ್ನೆ ವೈದ್ಯಾಧಿಕಾರಿಗಳ ಕುರಿತು ಮೂಡುತ್ತದೆ. ಈ ವಿಷಯದಲ್ಲಿ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಹೋರಾಟ ನಡೆಸಲಿದ್ದೇವೆ ಎಂದರು.

ಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಬೇಳೂರು, ಪ್ರಮುಖರಾದ ಮಹಾಬಲ ಕೌತಿ, ತಾರಾಮೂರ್ತಿ, ಸೋಮಶೇಖರ ಲ್ಯಾವಿಗೆರೆ, ಎಲ್.ಚಂದ್ರಪ್ಪ, ಆನಂದ್ ಭೀಮನೇರಿ, ರಾಘವೇಂದ್ರ, ಶ್ರೀನಾಥ್ ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.