ದೇವದಾಸಿ ಮಹಿಳೆಯರಿಗೆ ವಿಶೇಷ ಅನುದಾನ ನೀಡಿ

ಮಾಸಿಕ ಸಹಾಯಧನವನ್ನು ಕನಿಷ್ಟ 5 ಸಾವಿರ ರೂ. ಗೆ ಹೆಚ್ಚಿಸಬೇಕು.

Team Udayavani, Jul 16, 2022, 6:13 PM IST

ದೇವದಾಸಿ ಮಹಿಳೆಯರಿಗೆ ವಿಶೇಷ ಅನುದಾನ ನೀಡಿ

ಗದಗ: ದೇವದಾಸಿ ಮಹಿಳೆಯರ ಬದುಕು ಹಸನಾಗಿಸಲು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಡಳಿತ ಭವನದ ಎದುರು ಭಾರೀ ಪ್ರತಿಭಟನೆ ನಡೆಸಿದರು.

ಶುಕ್ರವಾರ ಸ್ಥಳೀಯ ಗದಗ-ಬೆಟಗೇರಿ ನಗರಸಭೆ ಆವರಣದಿಂದ ನಗರದ ಪ್ರಮುಖ ಬೀದಿಗಳ ಮೂಲಕ ಜಿಲ್ಲಾಡಳಿತ ಭವನವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ರಾಜ್ಯ ಗೌರವಾಧ್ಯಕ್ಷ ಬಸವರಾಜ ಮಾತನಾಡಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಗಳು ಜಂಟಿಯಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ, ಪ್ರತಿಭಟನೆಗಳನ್ನು ನಡೆಸಿದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾದ ಅನುದಾನ ಪ್ರತಿ ವರ್ಷ ಸುಮಾರು 30,000 ಕೋಟಿ ರೂ.ಗಳಿಷ್ಟಿದೆ. ಆದರೂ ಅದನ್ನು ನಮ್ಮಂತಹ ಅಗತ್ಯ ಜನಸಮುದಾಯಗಳಿಗೆ ಬಳಕೆ ಮಾಡದೇ ಪ್ರತಿ ವರ್ಷ ಸುಮಾರು 3,000 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಉಳಿಸುತ್ತಿರುವುದು ಖಂಡನೀಯ ಎಂದರು.

ರಾಜ್ಯ ಕಾರ್ಯದರ್ಶಿ ಬಿ. ಮಾಳಮ್ಮ ಮಾತನಾಡಿ, ಎಲ್ಲಾ ದೇವದಾಸಿ ಮಹಿಳೆಯರಿಗೆ ನೀಡಲಾಗುವ ಮಾಸಿಕ ಸಹಾಯಧನವನ್ನು ಕನಿಷ್ಟ 5 ಸಾವಿರ ರೂ. ಗೆ ಹೆಚ್ಚಿಸಬೇಕು. ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ತಕ್ಷಣವೇ ದೇವದಾಸಿ ಮಹಿಳೆಯರ ಮಕ್ಕಳ ಮತ್ತು ಕುಟುಂಬದ ಸದಸ್ಯರ ಗಣತಿ ಮಾಡಿ ಅವರಿಗೂ ಪುನರ್ವಸತಿ ಕಲ್ಪಿಸಬೇಕು.

ರಾಜ್ಯಾದ್ಯಂತ ನಿರುಪಯೋಗಿಯಾಗಿರುವ ರಾಜ್ಯ ಸರಕಾರದ ವಿವಿಧ ಇಲಾಖೆಗಳಡಿ ಕೃಷಿ ಮತ್ತಿತರ ಫಾರಂಗಳ ಜಮೀನುಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಮುಖಂಡ ಬಾಲು ರಾಠೊಡ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ದೇವಮ್ಮ ಜೋಗಣ್ಣವರ, ಹುಲಿಗೆಮ್ಮ ಮಾತಿನ, ನಿಂಗಮ್ಮ ತಡಹಾಳ, ಗೀತಾ ತೆಗ್ಗಿನಮನಿ, ಕರಿಯಪ್ಪ ಚಲವಾದಿ, ನಾಗಪ್ಪ ಮಾದರ, ಅಡಿವೆಮ್ಮ ಬೆಳಗಟ್ಟಿ, ಹನುಮವ್ವ ಚಲವಾದಿ, ದುರಗಮ್ಮ ಮಾದರ, ಶಿವವ್ವ ನಿಡಗುಂದಿ, ಮಾದೇವಿ ದೊಡ್ಡಮನಿ, ಮಲ್ಲಿಕಾರ್ಜುನ ಮಾದರ, ಮುತ್ತಪ್ಪ ಮುದೇನಗುಡಿ, ಕೆಂಚಪ್ಪ ಮಾದರ, ನಾಗರಾಜ ಮುಂಡರಗಿ, ವಿಜಯ ಗಲಗಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.