ದಕ್ಷಿಣ ಕನ್ನಡ-ಉಡುಪಿ: ಉತ್ತಮ ಮಳೆ; ಕೆಲವೆಡೆ ಹಾನಿ
Team Udayavani, Jul 17, 2022, 12:35 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಕೆಲವು ಕಡೆ ಹಾನಿಯಾದ ಬಗ್ಗೆ ವರದಿಯಾಗಿದೆ.
ಮಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ಜಿಲ್ಲೆಯ ಪುತ್ತೂರು, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಸುಳ್ಯ, ಕಲ್ಮಕಾರು, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಮಡಂತ್ಯಾರು, ಬಂಟ್ವಾಳ, ಕನ್ಯಾನ, ಸುರತ್ಕಲ್, ಉಳ್ಳಾಲ, ಮೂಡುಬಿದಿರೆ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಮುಂದುವರಿದಿದೆ.
ವೃದ್ಧೆಗೆ ಗಾಯ
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಆದರ್ಶ ನಗರದಲ್ಲಿ ಹಂಚಿನ ಮನೆಯೊಂದರ ಮೇಲೆ ಮರ ಬಿದ್ದು ವೃದ್ಧೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಶನಿವಾರ ನಡೆದಿದೆ.ಮರ ಬಿದ್ದುದರಿಂದ ಕಮಲಾ (75) ಅವರ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದು ಸ್ಥಳೀಯರ ನೆರವಿನೊಂದಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಪುತ್ತೂರು: ಮನೆಗೆ ಹಾನಿ
ಪುತ್ತೂರು: ಭಾರೀ ಗಾಳಿಗೆ ಸೆಂಟ್ಯಾರು ಕೂರೇಲು ಸಮೀಪ ಹಂಚಿನ ಮನೆಯೊಂದಕ್ಕೆ ತೆಂಗಿನ ಮರವೊಂದು ಬಿದ್ದು ಮನೆ ಸಂಪೂರ್ಣ ಹಾನಿಗೊಂಡ ಘಟನೆ ಶನಿವಾರ ಸೆಂಟ್ಯಾರು ಸಮೀಪದ ಕೂರೇಲು ಎಂಬಲ್ಲಿ ನಡೆದಿದೆ.
ಕೂರೇಲು ಬಾಲಕೃಷ್ಣ ಎಂಬವರ ಮನೆಗೆ ತೆಂಗಿನ ಮರ ಬಿದ್ದಿದ್ದು, ಮರ ಬೀಳುವ ಸಂದರ್ಭ ಅವರು ಮೊಮ್ಮಕ್ಕಳೊಂದಿಗೆ ಮನೆಯಲ್ಲಿದ್ದರು. ತೆಂಗಿನ ಮರ ಮನೆಯ ಮೇಲೆ ಬಿದ್ದಾಗ ಹಂಚಿನ ತುಂಡು ಬಾಲಕೃಷ್ಣ ಅವರ ತಲೆಗೆ ಬಿದ್ದು ಗಾಯವಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಮನೆ ಸಂಪೂರ್ಣ ಹಾನಿಗೊಂಡಿದ್ದರಿಂದ ಮನೆ ಮಂದಿಯನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ. ಆರ್ಯಾಪು ಗ್ರಾಮದ ಗ್ರಾಮಕರಣಿಕ ಅಶ್ವಿನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜು.17 ಮತ್ತು 18ರಂದು ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದ್ದು, ಎಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ ಗಾಳಿ-ಮಳೆ ಇರಲಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಿರುವ ನಿರೀಕ್ಷೆ ಇದೆ.
ಉಡುಪಿ: ಮತ್ತೆ ಬಿರುಸುಗೊಂಡ ಮಳೆ
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ, ಶನಿವಾರ ಧಾರಕಾರ ಮಳೆಯಾಗಿದೆ. ಕಳೆದ ಎರಡು ದಿನ
ಗಳಿಂದ ಕ್ಷೀಣಗೊಂಡಿದ್ದ ಮಳೆ ಮತ್ತೆ ಬಿರುಸುಗೊಂಡಿದೆ. ಕಾಪು, ಪಡುಬಿದ್ರಿ, ಕುಂದಾಪುರ, ಕಾರ್ಕಳ, ಹೆಬ್ರಿ, ಅಜೆಕಾರು, ಸಿದ್ದಾಪುರ, ಬೈಂದೂರು, ಕುಂದಾಪುರ, ಉಡುಪಿ ಭಾಗದಲ್ಲಿ ಬಿಟ್ಟುಬಿಟ್ಟು ನಿರಂತರ ಮಳೆ ಸುರಿದಿದೆ. ಬ್ರಹ್ಮಾವರ ತಾಲೂಕಿನಲ್ಲಿ 4, ಕಾರ್ಕಳ 4, ಹೆಬ್ರಿ 4, ಬೈಂದೂರಿನಲ್ಲಿ 4 ಮನೆಗಳಿಗೆ ಹಾನಿ ಸಂಭವಿಸಿದೆ.
ಮಳೆಗಾಳಿಯಿಂದಾಗಿ ಗ್ರಾಮೀಣ ಭಾಗದಲ್ಲಿ ವಿದ್ಯುತ್, ಟಿಸಿಗಳಿಗೆ ಹಾನಿ ಮುಂದುವರಿದ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಶನಿವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ ಉಡುಪಿ 31.3, ಬ್ರಹ್ಮಾವರ 57.4, ಕಾಪು 25.4, ಕುಂದಾಪುರ 119.9 ಬೈಂದೂರು 143.4, ಕಾರ್ಕಳ 49.8, ಹೆಬ್ರಿ 105.1ಮಿ .ಮೀ ಮಳೆಯಾಗಿದೆ.
ಕುಂದಾಪುರ: ಸಾಲ್ಬುಡದಲ್ಲಿ ಮತ್ತೆ ನೆರೆ
ಕುಂದಾಪುರ: ಕುಂದಾಪುರದಾದ್ಯಂತ ಶನಿವಾರ ದಿನವಿಡೀ ಭಾರೀ ಮಳೆಯಾಗಿದೆ. ಇದಲ್ಲದೆ ಘಾಟಿ ಪ್ರದೇಶದಲ್ಲಿ ನಿರಂತರ ಮಳೆ ಯಾ ಗಿದ್ದರಿಂದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ ಪರಿಸರದಲ್ಲಿ ಮತ್ತೆ ನೆರೆಯಾಗಿದೆ ಮಾತ್ರ ವಲ್ಲದೇ ಎಕರೆಗಟ್ಟಲೆ ಗದ್ದೆಗಳು ಜಲಾವೃತ ಗೊಂಡಿವೆ.
ಇದರಿಂದ ನಾವುಂದ ಕಡೆಗೆ ಬಂದಿದ್ದ ಜನ ಮನೆಗಳಿಗೆ ತೆರಳಲು ದೋಣಿ ಯನ್ನು ಆಶ್ರಯಿಸುವಂತಾಯಿತು. ಅರೆಹೊಳೆ – ನಾವುಂದ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಡಕಾಗಿದೆ. ಭಾರೀ ಮಳೆಯಿಂದ ಕುಂದಾಪುರ, ಬೈಂದೂರು ತಾಲೂಕಿನ 7 ಮನೆಗಳಿಗೆ ಹಾನಿಯಾಗಿದೆ. ಕಿರಿಮಂಜೇಶ್ವರ ಸರಕಾರಿ ಹಿ.ಪ್ರಾ. ಶಾಲೆಯ ಒಂದು ಬದಿಯ ಆವರಣ ಗೋಡೆಯು ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Vijayapura: ತಿರುಪತಿ ಲಡ್ಡು ಪಾವಿತ್ರ್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್
Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.