![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 17, 2022, 6:28 PM IST
ಮೈಸೂರು: ಆಪರೇಷನ್ ಕಮಲದ ಮೂಲಕ ಸರಕಾರ ಮಾಡಿರುವುದೇ ಲೂಟಿ ಮಾಡಲು. ಜನರ ಸಮಸ್ಯೆ ಬಗ್ಗೆ ಇವರಿಗೆ ಕಾಳಜಿ ಇದೆಯಾ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾನುವಾರ ಕಿಡಿ ಕಾರಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಸಚಿವರು ಹೋಗುತ್ತಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಚಿವರು ಲೂಟಿ ಹೊಡೆಯುವುದರಲ್ಲಿ ಮುಳುಗಿದ್ದಾರೆ.ಇನ್ನೆಲ್ಲಿ ಜನರ ಸಮಸ್ಯೆ ಆಲಿಸುತ್ತಾರೆ ಎಂದರು.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ನಾನು ಮಳೆಹಾನಿ ಪ್ರದೇಶಗಳ ಪ್ರವಾಸ ಮುಂದೂಡಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರ ಕೂಡಲೇ ಪರಿಹಾರ ಘೋಷಿಸಬೇಕು. ಅಂದಾಜು 500ಕೋಟಿಯಷ್ಟು ನಷ್ಟವಾಗಿರುವ ಸಾಧ್ಯತೆ ಇದೆ ಎಂದರು.
2019ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯೂ ಪ್ರವಾಹ ಉಂಟಾಗಿ ಮನೆಗಳಿಗೆ ಹಾನಿಯಾಗಿತ್ತು. ಅಂದು ಮನೆ ಕಳೆದುಕೊಂಡವರಿಗೆ ಇನ್ನೂ ಮನೆ ಕೊಟ್ಟಿಲ್ಲ. 2020ರಲ್ಲಿ ಮತ್ತೆ ಪ್ರವಾಹ ಬಂತು. ಆಗಲೂ ಪರಿಹಾರ ನೀಡಲಿಲ್ಲ. ಈಗ ಮತ್ತೆ ಪ್ರವಾಹ ಬಂದಿದೆ. ಈಗಲಾದರೂ ಸರ್ಕಾರ ಪರಿಹಾರ ನೀಡಬೇಕು.ಕೇವಲ ಭರವಸೆ ಕೊಟ್ಟು ಮುಂದೂಡಬಾರದು ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.