ಬರೋಬ್ಬರಿ 200 ಕೋಟಿ ಕೋವಿಡ್ ಲಸಿಕೆ; ಭಾರತ ಅದ್ಭುತ ಸಾಧನೆ

ಶೇ.98 ಮಂದಿಗೆ ಮೊದಲ ಡೋಸ್‌ : ಶೇ.90 ಜನರಿಗೆ ಎರಡೂ ಡೋಸ್‌ ಲಸಿಕೆ

Team Udayavani, Jul 18, 2022, 7:25 AM IST

ಬರೋಬ್ಬರಿ 200 ಕೋಟಿ ಕೋವಿಡ್ ಲಸಿಕೆ; ಭಾರತ ಅದ್ಭುತ ಸಾಧನೆ

ನವದೆಹಲಿ: ಬರೋಬ್ಬರಿ 200 ಕೋಟಿ ಡೋಸ್‌ ಲಸಿಕೆ! ದೇಶದಲ್ಲಿ ಕೋವಿಡ್ ಸೋಂಕಿನ ವಿರುದ್ಧ ಲಸಿಕೆ ಹೋರಾಟ ನಡೆಸಲು ಶುರು ಮಾಡಿದ ಬಳಿಕ ಒಂದು ದಿನದಲ್ಲಿ ನೀಡಲಾಗಿರುವ ಲಸಿಕೆಯ ಡೋಸ್‌ಗಳ ಸಂಖ್ಯೆ ಇದು. 2021ರ ಜ.18ರಂದು ಪ್ರಧಾನಿ ನರೇಂದ್ರ ಮೋದಿಯವರು 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಶುರು ಮಾಡಿದ ಬಳಿಕದ ಅತ್ಯಧಿಕ ಸಾಧನೆ ಇದಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಶೇ.98 ಮಂದಿ ಪ್ರಾಪ್ತ ವಯಸ್ಕರಿಗೆ ಕನಿಷ್ಠ ಒಂದು ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. ಇನ್ನು ಶೇ.90 ಮಂದಿಗೆ ಎರಡೂ ಡೋಸ್‌ಗಳು ಪೂರ್ತಿಯಾಗಿದೆ.

15ರಿಂದ18 ವರ್ಷ ವಯೋಮಿತಿಯವರಿಗೆ ಜ.3ರಿಂದ ಲಸಿಕೆ ನೀಡಲು ಪ್ರಾರಂಭಿಸಲಾಗಿತ್ತು. ಈ ಪೈಕಿ ಶೇ.82 ಮಂದಿಗೆ ಮೊದಲ ಡೋಸ್‌, ಶೇ.68 ಮಂದಿಗೆ ಎರಡೂ ಡೋಸ್‌ಗಳನ್ನು ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ದೇಶಕ್ಕೆ ಸ್ವಾಂತಂತ್ರ್ಯ ಲಭಿಸಿ 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಅಮೃತಮಹೋತ್ಸವ ಆಚರಿಸಲಾಗುತ್ತಿದ್ದು ಈ ಸಂಬಂಧ ಜು.15ರಿಂದಲೇ ಎಲ್ಲ ಅರ್ಹ ವಯಸ್ಕರಿಗೆ ಬೂಸ್ಟರ್‌ ಡೋಸ್‌ ನೀಡುವ ಕೆಲಸ ಆರಂಭವಾಗಿದೆ. ಇದು 75 ದಿನಗಳ ಕಾಲ ಮುಂದುವರಿಯಲಿದೆ.

ಪ್ರಧಾನಿ, ಆರೋಗ್ಯ ಸಚಿವರ ಶ್ಲಾಘನೆ:
ದೇಶ ಇಂಥ ಸಾಧನೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಸಾರ್ವಜನಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ, “200 ಕೋಟಿ ಡೋಸ್‌ ಲಸಿಕೆ ನೀಡುವ ಮೂಲಕ ದೇಶ ಮತ್ತೊಂದು ಇತಿಹಾಸ ಸೃಷ್ಟಿಸಿದೆ.

ಶರವೇಗದಲ್ಲಿ ಇಂಥ ಸಾಧನೆ ಮಾಡುವಲ್ಲಿ ನೆರವಾದವರಿಗೆ ತುಂಬು ಹೃದಯದ ಅಭಿನಂದನೆಗಳು. ಇದರಿಂದಾಗಿ ಜಗತ್ತಿನಲ್ಲಿ ಕೋವಿಡ್ ವಿರುದ್ಧ ಹೋರಾಟ ಮಾಡುವುದಕ್ಕೆ ಮತ್ತಷ್ಟು ಸ್ಫೂರ್ತಿ ತುಂಬಿದಂತೆ ಆಗಿದೆ. ದೇಶಾದ್ಯಂತ ಲಸಿಕೆ ನೀಡಲು ಶುರು ಮಾಡಿದ ಬಳಿಕ ಜನರು ಉತ್ತಮವಾಗಿಯೇ ಸ್ಪಂದಿಸಿದ್ದಾರೆ. ನಮ್ಮ ವಿಜ್ಞಾನಿಗಳು, ವೈದ್ಯರು, ದಾದಿಯರು, ಮುಂಚೂಣಿ ಕಾರ್ಯಕರ್ತರು, ಸಂಶೋಧಕರು, ಉದ್ಯಮಿಗಳು ಸೇರಿದಂತೆ ಹಲವು ಈ ನಿಟ್ಟಿನಲ್ಲಿ ಪ್ರಮುಖ ಕೊಡುಗೆ ನೀಡಿದ್ದಾರೆ. ಅವರ ಸಾಧನೆ ಮತ್ತು ಸ್ಫೂರ್ತಿಯನ್ನು ಗೌರವಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

“2022 ಜು.17 ನೆನಪಿನಲ್ಲಿ ಇರಿಸುವಂಥ ದಿನ’ ಎಂದು ಆರೋಗ್ಯ ಸಚಿವ ಮನಸುಖ ಮಾಂಡವಿಯಾ ಟ್ವೀಟ್‌ ಮಾಡಿದ್ದಾರೆ.

ಯಾರಿಗೆ ಎಷ್ಟು?
ಕೇಂದ್ರ ಸರ್ಕಾರದ ಮಾಹಿತಿ ಪ್ರಕಾರ ಶೇ.48.9 ಮಂದಿ ಪುರುಷರಿಗೆ, ಶೇ.51.5 ಮಹಿಳೆಯರಿಗೆ, ಶೇ.0.02 ಇತರರಿಗೆ ಲಸಿಕೆ ನೀಡಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಿ ಸಾಧನೆ ಮಾಡಿವೆ.

ದಿನ ಡೋಸ್‌ ಸಂಖ್ಯೆ (ಕೋಟಿಗಳಲ್ಲಿ)
2021 ಆ.21- 50 ಕೋಟಿ
2021 ಸೆ.14- 75 ಕೋಟಿ
2021 ಅ.21 100 ಕೋಟಿ
ಮೂರರ ನಡುವಿನ ಅಂತರ 9 ತಿಂಗಳು
2022 ಜ.7 150 ಕೋಟಿ
2022 ಫೆ.19 175 ಕೋಟಿ
2022 ಜು.17 200 ಕೋಟಿ
ಮೂರರ ನಡುವಿನ ಅಂತರ 9 ತಿಂಗಳು
278 ದಿನಗಳು- 100 ಕೋಟಿ ಡೋಸ್‌ ನೀಡಲು ಬೇಕಾದ ದಿನಗಳು
269 ದಿನಗಳು- 200 ಕೋಟಿ ಡೋಸ್‌ ನೀಡಲು ಬೇಕಾದ ದಿನಗಳು

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.