ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕೇರಳದ ಯುವಕನಲ್ಲಿ ಮಂಕಿಪಾಕ್ಸ್‌ ಲಕ್ಷಣ?


Team Udayavani, Jul 18, 2022, 6:25 AM IST

ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕೇರಳದ ಯುವಕನಲ್ಲಿ ಮಂಕಿಪಾಕ್ಸ್‌ ಲಕ್ಷಣ?

ಕಣ್ಣೂರು: ವಿದೇಶದಿಂದ ಬಂದ ಯುವಕನೋರ್ವನಲ್ಲಿ ಮಂಕಿಪಾಕ್ಸ್‌ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪರಿಯಾರಂ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ವಿದೇಶದಿಂದ ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಇಲ್ಲಿಗೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಾಣಿಸಿದ್ದರಿಂದ ಆತ ಸ್ವತಃ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಆರೋಗ್ಯಾಧಿಕಾರಿ ತಿಳಿಸಿದರು.

ಯುವಕನ ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಫ‌ಲಿತಾಂಶ ಬಂದ ಬಳಿಕವಷ್ಟೇ ಆತನಿಗೆ ಮಂಕಿಪಾಕ್ಸ್‌ ತಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ. ಪ್ರಸ್ತುತ ಯುವಕನನ್ನು ಐಸೋಲೇಶನ್‌ನಲ್ಲಿರಿಸಿ ನಿಗಾ ಇರಿಸಲಾಗಿದೆ ಎಂದು ಅವರು ವಿವರಿಸಿದರು. ಕೇರಳದಲ್ಲಿ ಮೊದಲ ಮಂಕಿಪಾಕ್ಸ್‌ ಪ್ರಕರಣ ಜು. 12ರಂದು ದಾಖಲಾಗಿತ್ತು.

ವೆನ್ಲಾಕ್‌ನಲ್ಲಿ ಪ್ರತ್ಯೇಕ ವಾರ್ಡ್‌
ಮಂಗಳೂರು: ನೆರೆಯ ಕೇರಳದಲ್ಲಿ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್‌ ದೃಢಪಡುತ್ತಿದ್ದಂತೆ ದ.ಕ. ಜಿಲ್ಲೆಯಲ್ಲಿಯೂ ವಿಶೇಷ ನಿಗಾ ಇಡಲಾಗಿದೆ.

ಮುನ್ನೆಚ್ಚರಿಕೆ ದೃಷ್ಟಿಯಿಂದ ವೆನ್ಲಾಕ್‌ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಒಂದು ವಾರ್ಡ್‌ ಅನ್ನು ಮಂಕಿಪಾಕ್ಸ್‌ ಸೋಂಕಿತ ರೋಗಿಗಳಿಗೆಂದು ಮೀಸಲಿಡಲಾಗಿದೆ. ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಆಗಮಿಸುವ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅವರಲ್ಲಿ ಜ್ವರದ ಲಕ್ಷಣ ಕಂಡುಬಂದರೆ ವಿಶೇಷ ನಿಗಾ ಇರಿಸಲಾಗುತ್ತಿದೆ. ಶಂಕಿತ ಪ್ರಕರಣಗಳಿಂದ ಮಾದರಿಯನ್ನು ಸಂಗ್ರಹಿಸಿ ಪುಣೆಯ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ವೈರಾಲಜಿ ಅಥವಾ ಎನ್‌ಐವಿ ಬೆಂಗಳೂರಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ದ.ಕ. ಜಿಲ್ಲೆಯಲ್ಲಿ ಮಂಕಿಪಾಕ್ಸ್‌ಗೆ ಸಂಬಂಧಪಟ್ಟಂತೆ ಯಾರಲ್ಲೂ ಯಾವುದೇ ಲಕ್ಷಣ ಕಂಡುಬಂದಿಲ್ಲ. ಮುನ್ನೆಚ್ಚರಿಕೆ ದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ನಡೆಸಲಾಗುತ್ತಿದೆ. ಕೋವಿಡ್‌ ರೀತಿ ಇದು ವೇಗವಾಗಿ ಹರಡುವ ಸಾಧ್ಯತೆ ಕಡಿಮೆ’ ಎಂದರು.

ಮಂಕಿಪಾಕ್ಸ್‌ ಸೋಂಕಿತರಿಗೆ ಸಾಮಾನ್ಯವಾಗಿ ಜ್ವರ, ಸ್ನಾಯು ನೋವು, ಗಾಯ, ಮತ್ತು ಶೀತ ಕಂಡುಬರುವ ಸಾಧ್ಯತೆ ಇರುತ್ತದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.