ಕದಂಬ ಶೈಲಿಯಲ್ಲಿ ಸಿದ್ದವಾಗ್ತಿದೆ ಏಲಾಂಬಿಕೆ ದೇಗುಲ


Team Udayavani, Jul 18, 2022, 12:32 PM IST

8temple

ವಾಡಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಏಲಾಂಬಿಕೆ ದೇವಿಯ ಶಿಲಾದೇವಸ್ಥಾನದ ನಿರ್ಮಾಣದಲ್ಲಿ ಕದಂಬರ ಶೈಲಿಯ ಪ್ರಭಾವ ಹೆಚ್ಚಿದೆ.

ಭಾರತದ ಏಕೈಕ ದಕ್ಷಿಣಾಭಿಮುಖೀ ದೇವಸ್ಥಾನ ಎನ್ನಲಾದ ಈ ದೇವಸ್ಥಾನಕ್ಕೆ ಏಳು ನೂರು ವರ್ಷಗಳ ಐತಿಹಾಸಿಕ ಹಿನ್ನೆಲೆಯಿದೆ ಎಂದು ಹೇಳಲಾಗಿದ್ದು, ಮೂಲ ದೇವಸ್ಥಾನದ ಗರ್ಭಗುಡಿಯನ್ನು ನೆಲದಾಳದಲ್ಲೇ ಉಳಿಸಿಕೊಂಡು ನೂತನ ದೇಗುಲ ನಿರ್ಮಿಸಲಾಗುತ್ತಿದೆ. ರಾಜ್ಯ ಮುಜುರಾಯಿ ಇಲಾಖೆಯಿಂದ ಘೋಷಣೆಯಾದ ಐದು ಕೋಟಿ ರೂ. ಅನುದಾನದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕೈಗೊಳ್ಳಲಾಗಿದ್ದು, ಶಾಸಕ ಪ್ರಿಯಾಂಕ್‌ ಖರ್ಗೆ ಸಚಿವರಿದ್ದಾಗ 50 ಲಕ್ಷ ರೂ., ಸದಾನಂದಗೌಡ ಸರ್ಕಾರದಲ್ಲಿ 30 ಲಕ್ಷ ರೂ., ನಂತರ ಆರು ಲಕ್ಷ ರೂ. ಅಲ್ಲದೇ ಶೃಂಗೇರಿ ಮಠದಿಂದ ಎರಡು ಲಕ್ಷ ರೂ., ಧರ್ಮಸ್ಥಳ ಟ್ರಸ್ಟ್‌ದಿಂದ 10 ಲಕ್ಷ ರೂ. ಸೇರಿದಂತೆ ಸದ್ಯ ಒಂದು ಕೋಟಿ ರೂ. ದೇವಸ್ಥಾನ ಸಮಿತಿಯ ಕೈಸೇರಿದೆ. ಭಕ್ತರ ದೇಣಿಗೆ ಹಣ ಪ್ರತ್ಯೇಕವಾಗಿದೆ. ಬಾಕಿ ಅನುದಾನ ಬಿಡುಗಡೆಗೆ ವಿಘ್ನಗಳು ಎದುರಾಗಿದ್ದರಿಂದ ದೇಗುಲ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ಸಾಗಿದ್ದು, ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.

2012ರಲ್ಲಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮಾಧಿಕಾರಿ ಶ್ರೀ ಭೀಮೇಶ್ವರ ಜೋಶಿ ಅವರಿಂದ ಭೂಮಿಪೂಜೆ ನೆರವೇರಿದ್ದು, ಉಡುಪಿಯ ಹೆಸರಾಂತ ಶಿಲ್ಪಿ ರಾಜಶೇಖರ ಹೆಬ್ಟಾರ ಈ ದೇಗುಲ ನಿರ್ಮಿಸುತ್ತಿದ್ದಾರೆ. ಹೆಚ್ಚಿನ ಅಲಂಕಾರವಿಲ್ಲದೇ ಪಿರಾಮಿಡ್‌ ಆಕಾರದಲ್ಲಿ ಶಿಖರ ನಿರ್ಮಿಸಲಾಗಿದೆ. ಅದರ ತುದಿಯಲ್ಲಿ ಶಿಲಾ ಕಲಶ ಕೆತ್ತಲಾಗಿದೆ. ಚತುರ್ಭುಜ ಲಂಬ ಪ್ರಕ್ಷೇಪಗಳ ಏಕರೂಪದ ಸರಣಿಯಿಂದ ಅಲಂಕರಿಸಲ್ಪಟ್ಟಿದೆ. ಶೇ.90ರಷ್ಟು ಶಿಲ್ಪಕಲೆ ಕೆತ್ತನೆ ಮತ್ತು ಜೋಡಣೆ ಕಾರ್ಯ ಪೂರ್ಣಗೊಂಡಿದ್ದು, ಬಾದಾಮಿ ಮತ್ತು ಐಹೊಳೆ ದೇವಸ್ಥಾನಗಳನ್ನು ಹೋಲುತ್ತಿದೆ. ಅತ್ಯಾಕರ್ಷಕ ಶೈಲಿಯಲ್ಲಿ ಸಿದ್ಧವಾಗಿರುವ ಈ ದೇಗುಲ ಭಕ್ತರ ಕಣ್ಮನ ಸೆಳೆಯುತ್ತಿದೆ. 2023ರ ಫೆಬ್ರುವರಿ ತಿಂಗಳಲ್ಲಿ ದೇವಸ್ಥಾನವನ್ನು ಅದ್ಧೂರಿಯಾಗಿ ಉದ್ಘಾಟನೆ ನೆರವೇರಿಸಲು ಗ್ರಾಮದ ಮುಖಂಡರು ಈಗಿನಿಂದಲೇ ಸಿದ್ಧತೆ ನಡೆಸುತ್ತಿದ್ದಾರೆ.

ಶ್ರೀ ಏಲಾಂಬಿಕೆಯ ಹಳೆಯ ದೇಗುಲದ ಜೀರ್ಣೋದ್ಧಾರ ಕಾರ್ಯ ಬಹುತೇಕ ಪೂರ್ಣವಾಗಿದೆ. ಸರ್ಕಾರ ಮತ್ತು ಭಕ್ತರ ದೇಣಿಗೆ ಜತೆಗೆ ಶೃಂಗೇರಿ ಪೀಠ ಮತ್ತು ಧರ್ಮಸ್ಥಳ ಟ್ರಸ್ಟ್‌ ವತಿಯಿಂದಲೂ ಅನುದಾನ ಬಂದಿದೆ. ಹೀಗಾಗಿ ಶಿಲಾ ದೇಗುಲ ಆಕರ್ಷಕವಾಗಿ ನಿರ್ಮಾಣವಾಗಲು ಸಾಧ್ಯವಾಗಿದೆ. ದೇವಿಯ ಮೂಲ ಮೂರ್ತಿಯನ್ನೇ ಮರು ಪ್ರತಿಷ್ಠಾಪಿಸಲಾಗುತ್ತಿದೆ. 2023ರ ಜನವರಿ ಅಥವಾ ಫೆಬ್ರುವರಿ ತಿಂಗಳಲ್ಲಿ ದೇವಸ್ಥಾನ ಲೋಕಾರ್ಪಣೆಗೊಳಿಸುವ ಚಿಂತನೆ ನಡೆದಿದೆ. ಶೃಂಗೇರಿ, ಧರ್ಮಸ್ಥಳ, ಹೊರನಾಡು ಪೂಜ್ಯರು ಸೇರಿದಂತೆ ಜಿಲ್ಲೆಯ ವಿವಿಧ ಮಠಾಧಿಪತಿಗಳನ್ನು ಆಹ್ವಾನಿಸಲು ತೀರ್ಮಾನಿಸಿದ್ದೇವೆ. -ಮಲ್ಲಣ್ಣಗೌಡ ಪೊಲೀಸ್‌ ಪಾಟೀಲ, ಅಧ್ಯಕ್ಷ ಶ್ರೀಏಲಾಂಬಿಕೆ ದೇವಿ ದೇವಸ್ಥಾನ ಟ್ರಸ್ಟ್‌, ಬಳವಡಗಿ

-ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.