![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 18, 2022, 8:42 PM IST
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಈಚೆಗೆ ನಡೆದಿದ್ದ ಜೋಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಸವರಾಜ್ ರಿಂದ 10 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೆಎಸ್ ಸಿಎಸ್ ಸಿ ಗೋಡೌನ್ ನಲ್ಲಿ 7282 ಕ್ವಿಂಟಲ್ ಜೋಳ ದುರುಪಯೋಗವಾಗಿರುವ ಕುರಿತು ಕಳೆದ ಜುಲೈ 6 ರಂದು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಕೆಎಸ್ ಸಿಎಸ್ ಸಿ ಗೋಡೌನ್ ಮ್ಯಾನೇಜರ್ ಬಸವರಾಜ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ತನಿಖೆ ಕೈಗೊಂಡ ಸಿರುಗುಪ್ಪ ಠಾಣೆಯ ಸಿಪಿಐ ಪ್ರಕರಣ ಪ್ರಮುಖ ಆರೋಪಿ ಗೋಡೌನ್ ಮ್ಯಾನೇಜರ್ ಬಸವರಾಜ್ ಅವರಿಂದ 10 ಲಕ್ಷ ರೂ.ಗಳನ್ನು ಸೋಮವಾರ ವಶಪಡಿಸಿಕೊಂಡಿದ್ದಾರೆ ಎಂದು ಎಸ್ ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೇ ಇವರೊಂದಿಗೆ ಅಕ್ರಮದಲ್ಲಿ ಭಾಗಿಯಾಗಿದ್ದ ಇನ್ನು ನಾಲ್ವರನ್ನು ಬಂಧಿಸಲಾಗಿದೆ. ಜೋಳವನ್ನು ಸಾರ್ವಜನಿಕರಿಗೆ ವಿತರಣೆ ಮಾಡದೆ ಎ1 ಆರೋಪಿ ಬಸವರಾಜ್ ಅವರೊಂದಿಗೆ ಸೇರಿ ಅವ್ಯವಹಾರಕ್ಕೆ ಸಹಕರಿಸಿ ಸರ್ಕಾರಕ್ಕೆ ಮೋಸ ಮಾಡಿರುವ ಹಿನ್ನೆಲೆಯಲ್ಲಿ ಎಪಿಎಂಸಿ ಗೋಡೌನ್ ಮ್ಯಾನೇಜರ್ ಅನುಪಮ, ಮಲ್ಲಿಕಾರ್ಜುನ, ರೈತರ ಹೆಸರಲ್ಲಿ ನಕಲಿ ದಾಖಲೆ, ಬಿಲ್ ಸೃಷ್ಟಿಸಿ 1680 ಕ್ವಿಂಟಲ್ ಜೋಳ ಖರೀದಿಸಿರುವ ವ್ಯಾಪಾರಿ ವಿರೂಪಾಕ್ಷಿ, ಆರೋಪಿಗಳೊಂದಿಗೆ ಶಾಮೀಲಾಗಿ ಅವ್ಯವಹಾರಕ್ಕೆ ಸಹಕಾರ ನೀಡಿರುವ ಗೋಡೌನ್ ಡಾಟಾ ಎಂಟ್ರಿ ಆಪರೇಟರ್ ಬಾಲಾಜಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.