ಕಡಬ: ರಸ್ತೆಯಲ್ಲೇ ಹರಿವ ಮಳೆನೀರು
ಪಾದಚಾರಿಗಳಿಗೆ ಸಿಡಿಯುವ ಕೆಸರು ನೀರು ;ನಿರ್ಲಕ್ಷ್ಯಕ್ಕೆ ಆಕ್ರೋಶ
Team Udayavani, Jul 19, 2022, 10:38 AM IST
ಕಡಬ: ಕಡಬದ ಮೂಲಕ ಹಾದು ಹೋಗುವ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರದಿಂದ ಮರ್ದಾಳದ ತನಕ ರಸ್ತೆಯ ಬದಿಯ ಚರಂಡಿಯಲ್ಲಿ ಹರಿದು ಹೋಗಬೇಕಾದ ಮಳೆನೀರು ರಸ್ತೆಯಲ್ಲಿಯೇ ಹರಿದು ಹೋಗುತ್ತಿದೆ. ಈ ಮೂಲಕ ಕೋಟಿಗಟ್ಟಲೆ ರೂ. ವೆಚ್ಚದಲ್ಲಿ ನಿರ್ಮಾಣವಾದ ರಸ್ತೆ ಹಾನಿಗೊಳ್ಳುತ್ತಿದೆ.
ಕಳಾರ, ತಹಶೀಲ್ದಾರ್ ಕಚೇರಿ ಮುಂಭಾಗ, ಕಡಬದ ಕೆರೆಯ ಬಳಿ, ಕ್ನಾನಾಯ ಜ್ಯೋತಿ ಶಾಲೆಯ ಬಳಿ ಯಲ್ಲಂತೂ ಜೋರಾಗಿ ಮಳೆ ಬಂದಾಗ ಮಳೆ ನೀರೆಲ್ಲ ರಸ್ತೆಗೆ ಬಂದು ಜನರು ನಡೆದು ಹೋಗುವುದಕ್ಕೂ ಸಾಧ್ಯವಾಗುತ್ತಿಲ್ಲ. ಪಾದಚಾರಿಗಳಿಗೆ ಇಲ್ಲಿ ನಿತ್ಯ ಕೆಸರು ನೀರ ಅಭಿಷೇಕ. ಚರಂಡಿ ಸರಿಪಡಿಸಲು ಕ್ರಮ ಕೈಗೊಳ್ಳಬೇಕಾದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರ ತಮಗೂ ಈ ಸಮಸ್ಯೆಗೂ ಸಂಬಂಧವಿಲ್ಲದಂತೆ ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕರು ತಮ್ಮ ಅಂಗಡಿ ಹಾಗೂ ಮನೆಗಳನ್ನು ಸಂಪರ್ಕಿಸುವ ದಾರಿಯಲ್ಲಿ ರಸ್ತೆ ಬದಿಯ ಚರಂಡಿಗಳನ್ನು ಮುಚ್ಚುತ್ತಾರೆ. ಆ ಮೂಲಕ ಚರಂಡಿಯಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗದಂತೆ ತಡೆಯೊಡ್ಡುತ್ತಿದ್ದಾರೆ. ಇದ ರಿಂದ ಮಳೆನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಕೆಲವು ಕಡೆ ಮನೆಗಳನ್ನು ಸಂಪರ್ಕಿಸುವ ದಾರಿಗೆ ಹಾಕಲಾಗಿರುವ ಮೋರಿ ಯಿಂದಾಗಿ ನೀರು ಸರಾಗವಾಗಿ ಹರಿಯಲು ಸಮಸ್ಯೆ ಉಂಟಾಗುತ್ತಿದೆ. ಚರಂಡಿಗಳನ್ನು ಮುಚ್ಚಿ ರಸ್ತೆ ಹಾನಿಗೊಳ್ಳುವಂತೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈ ಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹ.
ಸೂಕ್ತ ಕ್ರಮ ಕೈಗೊಳ್ಳಲಾಗುವುದು: ಕಡಬ ಭಾಗದ ಸಹಾಯಕ ಎಂಜಿನಿಯರ್ಗೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ ರಸ್ತೆಯಲ್ಲಿ ಮಳೆನೀರು ಹರಿಯುವ ಕಡೆ ಚರಂಡಿಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. –ರಾಜಾರಾಮ್, ಎಇಇ, ಲೋಕೋಪಯೋಗಿ ಇಲಾಖೆ, ಪುತ್ತೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.