![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 19, 2022, 1:06 PM IST
ಬೆಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಮಾರಾಟ ಪ್ರತಿನಿಧಿ ಸೇರಿ ಇಬ್ಬರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯಶವಂತಪುರದ ಚೇತನ್ ನಾಯ್ಡು (22) ಮತ್ತು ಆತನ ಸ್ನೇಹಿತ ವಿಜಯ್(29) ಬಂಧಿತರು. ಆರೋಪಿಗಳಿಂದ 26.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಹಾಗೂ ಚಿನ್ನ ಮಾರಿದ ಹಣದಲ್ಲಿ ಖರೀದಿಸಿದ್ದ ಒಂದು ಕಾರು, 1 ದ್ವಿಚಕ್ರ ವಾಹನ ವಶಕ್ಕೆಪಡೆಯಲಾಗಿದೆ.ಯಶವಂತಪುರದಒಂದನೇ ಮುಖ್ಯರಸ್ತೆಯ “ದಿ ಬೆಸ್ಟ್ ಜ್ಯುವೆಲ್ಲರಿ’ ಅಂಗಡಿಯಲ್ಲಿ ಆರೋಪಿ ಚಿನ್ನಾಭರಣ ಕಳವು ಮಾಡಿದ್ದರು.
ಆರೋಪಿಗಳ ಪೈಕಿ ಚೇತನ್ ನಾಯ್ಡು ಕಳೆದ 4 ವರ್ಷಗಳಿಂದ ಜ್ಯುವೆಲ್ಲರಿ ಶಾಪ್ನಲ್ಲಿ ಮಾರಾಟ ಪ್ರತಿನಿಧಿಯಾಗಿದ್ದ. ಇತ್ತೀಚೆಗೆ ಗ್ರಾಹಕರೊಬ್ಬರು ಚಿನ್ನದ ಸರಕ್ಕೆ ಆರ್ಡರ್ ಕೊಟ್ಟಿದ್ದರು. ಚಿನ್ನದ ಸರ ಸಿದ್ಧಪಡಿಸಿ ಅಂಗಡಿಯ ಡಿಸ್ಪ್ಲೇ ಬೋರ್ಡ್ನಲ್ಲಿ ಹಾಕಲಾಗಿತ್ತು. ಗ್ರಾಹಕರು ಅಂಗಡಿಗೆ ಬಂದಾಗ ಸರ ನೀಡಲು ಡಿಸ್ಪ್ಲೇ ಬೋರ್ಡ್ ನೋಡಿದಾಗ ಸರ ಇರಲಿಲ್ಲ. ಎಲ್ಲ ಕಡೆ ಹುಡುಕಾಡಿದರೂ ಕಾಣಿಸಿಲ್ಲ. ಈ ವೇಳೆ ಅಂಗಡಿ ಮಾಲೀಕರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಚೇತನ್ ನಾಯ್ಡು ಸರವನ್ನು ಎತ್ತಿಕೊಂಡು ಜೇಬಿಗೆ ಹಾಕಿಕೊಳ್ಳುವುದು ಸೆರೆಯಾಗಿತ್ತು. ಬಳಿಕ ಅಂಗಡಿ ಪರಿಶೀಲಿಸಿದಾಗ ಕೆಲ ಚಿನ್ನಾಭರಣಗಳು ಇಲ್ಲದಿರುವುದು ಕಂಡು ಬಂದಿದೆ.
ಈ ವೇಳೆ ಅಂಗಡಿ ಮಾಲೀಕರು ಯಶವಂತಪುರ ಠಾಣೆಗೆ ಚೇತನ್ ನಾಯ್ಡು ವಿರುದ್ಧ ದೂರುನೀಡಿದ್ದರು. ಈ ಹಿನ್ನೆಲೆ ಆರೋಪಿಯನ್ನು ಬಂಧಿಸಿ ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದು, ಈತನ ಮಾಹಿತಿ ಮೇರೆಗೆ ಆತನ ಸ್ನೇಹಿತ ವಿಜಯ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಒಂದು ವರ್ಷದಿಂದ ಒಂದೊಂದೇ ಅಭರಣ ಕಳವು! :
ಕಳೆದ ಒಂದು ವರ್ಷದಿಂದ ಆರೋಪಿ ಜ್ಯುವೆಲ್ಲರಿ ಶಾಪ್ನಲ್ಲಿ ಸಣ್ಣ ಪ್ರಮಾಣದಲ್ಲಿ ಒಂದೊಂದೆ ಚಿನ್ನಾಭರಣ ಕಳವು ಮಾಡುತ್ತಿದ್ದು, ಬಳಿಕ ಈ ಆಭರಣವನ್ನು ಬೇರೆಡೆ ಮಾರಲಾಗಿದೆ ಎಂದು ಪುಸ್ತಕದಲ್ಲಿ ನೋಂದಾಯಿಸುತ್ತಿದ್ದ. ಆದರೆ, ಆಭರಣವನ್ನು ಸ್ನೇಹಿತ ವಿಜಯ್ಗೆ ಕೊಟ್ಟು ಬೇರೆಡೆ ಗಿರವಿ ಅಥವಾ ಮಾರಾಟ ಮಾಡಿ ಬಂದ ಹಣವನ್ನು ಇಬ್ಬರು ಹಂಚಿಕೊಳ್ಳುತ್ತಿದ್ದರು. ಈ ರೀತಿಯ ಕಳ್ಳತನ ಕೃತ್ಯದಿಂದ ಚೇತನ್ ನಾಯ್ಡು ಮೋಜು-ಮಸ್ತಿ ಮಾಡುತ್ತಿದ್ದು, 6 ಲಕ್ಷ ರೂ. ಮೌಲ್ಯದ ಸೆಕೆಂಡ್ ಹ್ಯಾಂಡ್ ಕಾರು, ಒಂದು ಬೈಕ್ ಖರೀದಿಸಿದಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.