ನಕಲಿ ರಸಗೊಬ್ಬರ ಮಾರಾಟ: ಐವರ ವಿಚಾರಣೆ
ವಿವಿಧ ಸ್ಥಳಗಳಲ್ಲಿ 130 ಬ್ಯಾಗ್ ನಕಲಿ ರಸಗೊಬ್ಬರ ವಶ; ಗೋಗಿ, ಯಡ್ರಾಮಿ, ಸಿಂದಗಿ ಹಾಗೂ ಗಂಗಾವತಿಯಲ್ಲಿ ತನಿಖೆ
Team Udayavani, Jul 19, 2022, 2:45 PM IST
ಗಂಗಾವತಿ: ನೆರೆಯ ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ನಡೆದ ನಕಲಿ ರಸಗೊಬ್ಬರ ಮಾರಾಟ ಪ್ರಕರಣಕ್ಕೆ ಸಂಬಂ ಧಿಸಿದಂತೆ ತಾಲೂಕಿನ ಬಸಾಪಟ್ಟಣ ಗ್ರಾಮದ ಚನ್ನಮಲ್ಲಿಕಾರ್ಜುನ ಅಗ್ರೋ ಏಜೆನ್ಸಿ ಮಾಲೀಕ ಪೀರಸಾಬ್ ಸೇರಿ ಐವರನ್ನು ಗೋಗಿ ಠಾಣೆಯ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಶಹಪುರ ತಾಲೂಕಿನ ಗೋಗಿ ಹೋಬಳಿಯ ಹೊಸ್ಕೇರಾ ಗ್ರಾಮದಲ್ಲಿ ಡಿಎಪಿ ಜೈ ಕಿಸಾನ್ ಹೆಸರಿನ ಬ್ಯಾಗ್ಗಳಲ್ಲಿ ಮರಳು (ಉಸುಗು) ಮಿಶ್ರಿತ ರಸಗೊಬ್ಬರ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ರೈತರು ಪ್ರಕರಣ ದಾಖಲಿಸಿದ್ದು, ಪೊಲೀಸ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಿದ್ದು ಗೋಗಿ ಗ್ರಾಮದಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡಿದ ಕುರಿತು ಅಲ್ಲಿಯ ಡೀಲರ್ ಯಡ್ರಾಮಿಯ ವ್ಯಾಪಾರಿ ಹೆಸರು ಹೇಳಿದ್ದಾರೆ. ಯಡ್ರಾಮಿಯ ಡೀಲರ್ ಸಿಂದಗಿ ವ್ಯಾಪಾರಿಯ ಹೆಸರು ಹೇಳಿದ್ದು ಸಿಂದಗಿ ಡೀಲರ್ನ್ನು ವಿಚಾರಿಸಿದಾಗ ಗಂಗಾವತಿಯ ಬಸಾಪಟ್ಟಣದ ಪೀರಸಾಬ್ ಎಂಬುವವರಿಂದ ರಸಗೊಬ್ಬರ ಖರೀದಿಸಿ ಮಾರಾಟ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ತನಿಖೆ ಕೈಗೊಂಡಿರುವ ಗೋಗಿ ಠಾಣೆಯ ಪೋಲಿಸರು ರವಿವಾರ ಸಂಜೆ ಗಂಗಾವತಿಯ ಬಸಾಪಟ್ಟಣಕ್ಕೆ ಆಗಮಿಸಿ ಚನ್ನಮಲ್ಲಿಕಾರ್ಜುನ ಆಗ್ರೋ ಏಜೇನ್ಸಿ ಮಾಲೀಕ ಪೀರಸಾಬ್, ಗೋಗಿ ಹೊಸ್ಕೇರಾ ಗ್ರಾಮದ ಬೀರಲಿಂಗಪ್ಪ, ಮಲ್ಲಪ್ಪ ನಾಗನಟಗಿ, ಪರಮಾನಂದ ಸಿಂದಗಿ, ಭೀಮಸಿಂಗ್ ರಾಠೊಡ್ ಎಂಬುವರನ್ನು ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ.
ಪ್ರಕರಣ ಕುರಿತು “ಉದಯವಾಣಿ’ ಜತೆ ಗೋಗಿ ಪೊಲೀಸ್ ಠಾಣೆಯ ಪಿಎಸ್ಐ ಅಯ್ಯಪ್ಪ ಮಾತನಾಡಿ, ನಕಲಿ ರಸಗೊಬ್ಬರ ಖರೀದಿಸಿದ ರೈತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳ ಜತೆಗೂಡಿ ವ್ಯಾಪಕ ತನಿಖೆ ನಡೆಸಲಾಗುತ್ತಿದೆ. ಗೋಗಿ, ಯಡ್ರಾಮಿ, ಸಿಂದಗಿ ಹಾಗೂ ಗಂಗಾವತಿಯ ಬಸಾಪಟ್ಟಣದಲ್ಲಿ ತನಿಖೆ ನಡೆಯುತ್ತಿದೆ. ರೈತರ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗೋಗಿ ಹೋಬಳಿಯ ಹೊಸ್ಕೇರಾ ಗ್ರಾಮದಲ್ಲಿ ನಕಲಿ ರಸಗೊಬ್ಬರ ಮಾರಾಟದ ಕುರಿತು ರೈತರ ದೂರಿನ ಹಿನ್ನೆಲೆಯಲ್ಲಿ ಗೋಗಿ ಠಾಣೆಯ ಪೊಲೀಸರಿಗೆ ಕೃಷಿ ಇಲಾಖೆಯಿಂದ ಕೇಸ್ ದಾಖಲು ಮಾಡಲಾಗಿದೆ. ವಿವಿಧ ಸ್ಥಳಗಳಲ್ಲಿ 130 ಬ್ಯಾಗ್ ನಕಲಿ ರಸಗೊಬ್ಬರ ಸೀಜ್ ಮಾಡಲಾಗಿದೆ. ನಕಲಿ ಗೊಬ್ಬರ ಮಾರಾಟ ದಂಧೆ ಯಾದಗಿರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಗಂಗಾವತಿ ಪ್ರದೇಶದಲ್ಲಿ ನಕಲಿ ಗೊಬ್ಬರ ಮಾರಾಟ ಮಾಡುವವರು ಅಧಿ ಕ ಸಂಖ್ಯೆಯಲ್ಲಿರುವ ಕುರಿತು ಸಂಶಯವಿದ್ದು, ಪೊಲೀಸರ ತನಿಖೆಯಿಂದ ಹೊರ ಬರಬೇಕಿದೆ. ಕಳೆದ ವರ್ಷವೂ ಗಂಗಾವತಿ ಮುಂತಾದ ಕಡೆಯಿಂದ ಡೀಲರ್ಗಳು ರಸಗೊಬ್ಬರ ತಂದು ಯಾದಗಿರಿ ಜಿಲ್ಲೆಯಲ್ಲಿ ಮಾರಾಟ ಮಾಡಿರುವ ಕುರಿತು ರೈತರು ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ. –ಸುನೀಲಕುಮಾರ, ಸಹಾಯಕ ಕೃಷಿ ಅಧಿಕಾರಿ ಶಹಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.