ತಾ.ಕಚೇರಿ ಕಾರ್ಯ ವಿಳಂಬ ಖಂಡಿಸಿ ಪ್ರತಿಭಟನೆ


Team Udayavani, Jul 19, 2022, 4:30 PM IST

ತಾ.ಕಚೇರಿ ಕಾರ್ಯ ವಿಳಂಬ ಖಂಡಿಸಿ ಪ್ರತಿಭಟನೆ

ಆಲೂರು: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಕೆಲಸ ಆಗುತ್ತಿಲ್ಲವೆಂದು ಆರೋಪಿಸಿ ಬಿಜೆಪಿ ಮುಖಂಡ ಸಿಮೆಂಟ್‌ ಮಂಜುನಾಥ್‌ ಅವರ ನೇತೃತ್ವದಲ್ಲಿ ತಾಲೂಕು ರೈತ ಸಂಘದ ಮುಖಂಡರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಸೌಮ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಅಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಕಚೇರಿಯಲ್ಲಿ ಹಣ ಇಲ್ಲದೇ ಸಾರ್ವಜನಿಕರ ಯಾವುದೇ ಕೆಲಸಗಳಾಗುತ್ತಿಲ್ಲ ತಮ್ಮ ಕೆಲಸ ಕಾರ್ಯ ಬಿಟ್ಟು ಕಚೇರಿ ಅಲೆಯುವಂತಾಗಿದ್ದು,ತಾಲೂಕಿನ ಕೆಲವು ಕಚೇರಿಗಳಲ್ಲಿ ಅಸಮರ್ಥಅಧಿಕಾರಿಗಳಿದ್ದು ಜೆಡಿಎಸ್‌ ಅಧ್ಯಕ್ಷ ಮಂಜೇಗೌಡರ ಅಣತಿಯಂತೆ ಎಲ್ಲ ಕೆಲಸ ಕಾರ್ಯ ನಡೆಯುತ್ತಿವೆ.

ಶಾಸಕ ಕುಮಾರಸ್ವಾಮಿ ಅಸಮರ್ಥರಾಗಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಬಿಡುಗಡೆಯಾದ ಹಣಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತುಕೇಳುತ್ತಿಲ್ಲವೆಂದು ರೈತ ಮುಖಂಡರು ಅಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಮಿತಿಮೀರಿದೆ: ಭೂ ಮಾಪನ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಸರ್ವೆಯರ್‌ ಆಗಿ ಕಾರ್ಯ ನಿರ್ವಹಿಸುವ ಶಕೀಲ್‌ ಅಹಮದ್‌ ಎನ್ನುವ ವ್ಯಕ್ತಿ ಸುಮಾರು ಇಪ್ಪತ್ತು ವರ್ಷಗಳಿಂದ ಭೂ ಮಾಪನ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹಣಕ್ಕಾಗಿ ಒಂದೆರಡು ವರ್ಷಗಳಿಂದ ರೈತರನ್ನ ಕಚೇರಿಗೆ ಅಲೆಸುತ್ತಿರುವ ಇವರನ್ನು ತಕ್ಷಣ ವರ್ಗಾವಣೆ ಮಾಡಬೇಕು ಎಂದು ತಹಶೀಲ್ದಾರ್‌ ಅವರಿಗೆ ಒತ್ತಾಯಿಸಿದರು.

ವರ್ಗಾವಣೆ ಮಾಡಿ: ಬಿಜೆಪಿ ಮುಖಂಡ ಸಿಮೆಂಟ್‌ ಮಂಜುನಾಥ್‌ ಮಾತನಾಡಿ, ತಾಲೂಕು ಕಚೇರಿ ಸೇರಿದಂತೆ ಇತರೆ ಇಲಾಖೆಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಕೆಲ ಅಧಿಕಾರಿಗಳು 2 ದಶಕಗಳಿಂದ ಠಿಕಾಣಿ ಹೂಡಿದ್ದು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಶಾಸಕರು ಇವೆಲ್ಲವನ್ನೂ ನೋಡಿಯೂ ಕಣ್ಮುಚ್ಚಿ ಕುಳಿತ್ತಿದ್ದಾರೆ. ಸರ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಶಕೀಲ್‌ ಅವರನ್ನು ತಕ್ಷಣ ವರ್ಗಾವಣೆಮಾಡಬೇಕು. ಯಾವೆಲ್ಲ ಅಧಿಕಾರಿಗಳು ಹೆಚ್ಚು ವರ್ಷ ಒಂದೆ ಕಡೆ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನುಗುರುತಿಸಿ ವರ್ಗಾವಣೆ ಮಾಡಬೇಕು. ಈ ಬಗ್ಗೆ ಜಿÇÉಾಉಸ್ತುವಾರಿ ಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ದುಡ್ಡಿಗಾಗಿ ರೈತರನ್ನು ಕಾಡಬೇಡಿ: ಆಲೂರಿನ ರಾಧಮ್ಮ ಜನಸ್ಪಂಧನ ಸಂಸ್ಥೆ ಮುಖ್ಯಸ್ಥ ಹೇಮಂತ್‌ ಕುಮಾರ್‌ ಮಾತನಾಡಿ, ಕೆಲವು ಕಚೇರಿಗಳಲ್ಲಿಸಣ್ಣಪುಟ್ಟ ಕೆಲಸಕ್ಕೂ ರೈತರನ್ನು ಕಚೇರಿಗಳಿಗೆ ಈಗ ಬನ್ನಿ,ನಾಳೆ ಬನ್ನಿ, ಮೇಲಾಧಿಕಾರಿಗಳಿಲ್ಲ, ಮುಂದಿನ ವಾರಬನ್ನಿ ಎಂದು ಅಲೆಸುತ್ತಿದ್ದಾರೆ.

ರೈತರು ಕೆಲಸ ಕಾರ್ಯಬಿಟ್ಟು ಚಳಿ-ಗಾಳಿ-ಮಳೆ ಎನ್ನದೇ ಕಚೇರಿಗೆ ಬಂದು ಬರಿಗೈಯಲ್ಲಿ ವಾಪಸ್‌ ಆಗುತ್ತಿದ್ದಾರೆ. ಈ ಎಲ್ಲಅಂಶಗಳು ನನ್ನ ಗಮನಕ್ಕೆ ಬಂದಿದ್ದು ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮರೆತಿದ್ದಾರೆ. ಕೆ.ಹೊಸಕೋಟೆ ಹಾಗೂ ಕುಂದೂರು ಹೋಬಳಿಗಳಿಂದ ಸುಮಾರು ನಲವತ್ತು ಐವತ್ತು ಕಿ. ಮೀ.ನಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ತಮ್ಮ ಕೆಲಸ ಬಿಟ್ಟು ಕಚೇರಿಗೆ ಅಲೆಯುತ್ತಿದ್ದಾರೆ. ಅಧಿಕಾರಿಗಳ ಭಂಡಾಟ, ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ರೈತರು ನಮ್ಮ ಕಚೇರಿಗೆ ಬಂದು ದೂರು ನೀಡಿದ್ದಾರೆ. ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಕೆಲಸ ಮಾಡಬೇಕು. ಇದೇ ರೀತಿ ರೈತರಿಗೆ ಕಿರುಕುಳ ನೀಡಿದರೆ ಉಗ್ರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

 ರೈತರು ಬದುಕೋದೇಗೆ?: ರೈತ ಸಂಘದ ಮುಖಂಡ ಮೋಹನ್‌ ಮಾತನಾಡಿ ತಾಲೂಕಿನಲ್ಲಿ ರೈತರು ಕಾಡಾನೆ ಹಾವಳಿಯಿಂದ ಕಂಗಾಲಾಗಿದ್ದಾರೆ. ಅದರಲ್ಲಿ ಅಧಿಕಾರಿಗಳ ಕಾಟ ಬೇರೆ. ಇದರಿಂದ ರೈತರು ಹೇಗೆ ಬದುಕಬೇಕು? ತಾಲೂಕಿನಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಿದ್ದು, ಕೂಲಿ ಕೆಲಸ ಬಿಟ್ಟು ದುಡಿದ ಅರ್ಧಹಣವನ್ನು ಅಧಿಕಾರಿಗಳಿಗೆ ನೀಡಬೇಕು. ಅದರೂಕೆಲಸ ಮಾಡಿಕೊಡುತ್ತಿಲ್ಲ. ಇದೇ ರೀತಿ ಮುಂದುವರಿದರೇ ಜನ ಧಂಗೆ ಏಳುತ್ತಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ವರ್ಗಾವಣೆ ಮಾಡಿ: ತಾಲೂಕು ರೈತ ಸಂಘದ ಉಪಾಧ್ಯಕ್ಷ ದಾಸೇಗೌಡ ಮಾತನಾಡಿ,ತಾಲೂಕು ಕಛೇರಿಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ.ಅದರಲ್ಲೂ ಸರ್ವೆ ಇಲಾಖೆಯಲ್ಲಿ ಎರಡ್ಮೂರು ವರ್ಷಗಳಿಂದ ಅರ್ಜಿ ಕೊಟ್ಟು ಕಚೇರಿಗೆಅಲೆಯುತ್ತಿದ್ದಾರೆ. ಅದರೂ ಕೆಲಸ ಮಾಡುತ್ತಿಲ್ಲ.ಸರ್ವೆ ಇಲಾಖೆ ಸೇರಿದಂತೆ ಹಲವು ವರ್ಷಗಳಿಂದಝಂಡವುರಿರುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ಸ್ಥಳೀಯ ಶಾಸಕರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಅಧ್ಯಕ್ಷ ತಿಮ್ಮೇಗೌಡ,ರೈತ ಮುಖಂಡ ಹೈದೂರು ಜಯಣ್ಣ,ಮೋಹನ್‌, ರಾಧಮ್ಮ ಜನಸ್ಪಂಧನ ಸಂಸ್ಥೆ ಮುಖ್ಯಸ್ಥಹೇಮಂತ್‌ ಕುಮಾರ್‌, ಚಿಗಳೂರು ದಾಸೇಗೌಡ, ಹನುಮಂತೇಗೌಡ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.