ಯೋಗಾಥಾನ್‌ಗೆ ಸೂಕ್ತ ಸಿದ್ಧತೆ ಕೈಗೊಳ್ಳಿ 


Team Udayavani, Jul 20, 2022, 2:41 PM IST

ಯೋಗಾಥಾನ್‌ಗೆ ಸೂಕ್ತ ಸಿದ್ಧತೆ ಕೈಗೊಳ್ಳಿ 

ರಾಮನಗರ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಗಸ್ಟ್‌28ರಂದು ರಾಮನಗರ ಜಿಲ್ಲೆಯಲ್ಲಿ ಯೋಗಾಥಾನ್‌ ಕಾರ್ಯಕ್ರಮ ಆಯೋಜನೆಗೆ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಜವರೇಗೌಡ.ಟಿ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಯೋಗಥಾನ್‌ ಕಾರ್ಯಕ್ರಮವನ್ನು ಆಯೋಜಿಸುವಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು ಮಾತನಾಡಿ, ಯೋಗಥಾನ್‌ ಕಾರ್ಯಕ್ರಮಕ್ಕಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆನಡೆಸಲಾಗಿದ್ದು, 15 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲು ಅಗತ್ಯ ಕ್ರಮ ವಹಿಸಬೇಕು. ಕಾರ್ಯಕ್ರಮದ ವೇದಿಕೆ, ಶಾಲೆ, ಕಾಲೇಜುವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಕುಡಿಯುವ ನೀರು,ಉಪಹಾರ, ಸ್ವತ್ಛತೆ, ಭದ್ರತೆ, ಆ್ಯಂಬುಲೆನ್ಸ್‌ ವ್ಯವಸ್ಥೆಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸಲು,ಸಂಬಂಧಪಟ್ಟ ಇಲಾಖೆಗಳಿಗೆ ಜವಬ್ದಾರಿಯನ್ನು ಹಂಚಿಕೆ ಮಾಡಿ, ಸಮರ್ಪಕವಾಗಿ ಯೋಗಥಾನ್‌ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ತಿಳಿಸಿದರು.

ರೋಗ ಮುಕ್ತ ರಾಷ್ಟ್ರ ನಿರ್ಮಾಣದ ಸಂಕಲ್ಪ: ಯೋಗವು ಜೀವನದ ಒಂದು ಅವಿಭಾಜ್ಯ ಅಂಗವಾಗಿ ಅಳವಡಿಸಿಕೊಳ್ಳುವುದರ ಮೂಲಕ ರೋಗ ಮುಕ್ತ ರಾಷ್ಟ್ರ ನಿರ್ಮಾಣದ ಸಂಕಲ್ಪದ ಮುಖ್ಯ ಉದ್ದೇಶದಿಂದ ಯೋಗಾಥಾನ್‌ ಕಾರ್ಯಕ್ರಮದಲ್ಲಿ ಸುಮಾರು 15ಸಾವಿರ ಜನರು ಏಕಕಾಲದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಲಿಮ್ಕಾ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ ಮತ್ತು ವಿಶ್ವದಾಖಲೆ ಮಾಡಲು ಸರ್ಕಾರ ಉದ್ದೇಶಿಸಿದೆ. ಅದರ ಭಾಗವಾಗಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್‌, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಮತ್ತು ಆಯುಷ್‌ ಇಲಾಖೆ, ನೆಹರೂ ಯುವ ಕೇಂದ್ರ, ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನಾ (ಎನ್‌.ಎಸ್‌.ಎಸ್‌) ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಯೋಗಥಾನ್‌ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಯುವಜನತೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಸಂಘ- ಸಂಸ್ಥೆಗಳ ಸಹಕಾರ ಪಡೆಯಿರಿ: ಯುವಕ, ಯುವತಿಯರು, ಯೋಗಾಪಟುಗಳು, ಕಾಲೇಜುವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ,ಸಾರ್ವಜನಿಕರು ಜಿಲ್ಲೆಯ ಯೋಗ ಸಂಸ್ಥೆಗಳುಭಾಗವಹಿಸಲು ಅನುಕೂಲವಾಗುವಂತೆ ಸ್ವಯಂ ಸೇವಾ ಸಂಘಟನೆಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಉಚಿತ ಯೋಗ ತರಬೇತಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಮಾತನಾಡಿ, ಯೋಗಾಥಾನ್‌ ಕಾರ್ಯಕ್ರಮದ ಪೂರ್ವ ಸಿದ್ಧತೆಯ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿದಿನ ಬೆಳಗ್ಗೆ ಉಚಿತವಾಗಿ ಯೋಗ ತರಬೇತಿಯನ್ನು ಈಗಾಗಲೇ ನೀಡಲಾಗುತ್ತಿದೆ ಎಂದರು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಥಾನ್‌ ಕಾರ್ಯಕ್ರಮದಲ್ಲಿ ನೋಂದಣಿಮಾಡಿಸಿಕೊಳ್ಳಲು ಆನ್‌ಲೈನ್‌ ವ್ಯವಸ್ಥೆ ಮಾಡಲಾಗಿದ್ದು, ಕುಶಲ ಕೋಶ ತಂತ್ರಾಂಶದ ಮೂಲಕನೋಂದಾಯಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌ ಬಾಬು ಟಿ.ಜಿ, ಜಿಲ್ಲಾಕೌಶಲ್ಯಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಸಿ.ಎನ್‌. ಲತಾ, ಜಿ.ಪಂ ಎ.ಎಸ್‌ ಮಮತಾ, ನೆಹರು ಯುವ ಕೇಂದ್ರದ ಶ್ರೀವಾಣಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಯೋಗಾಥಾನ್‌ ಕಾರ್ಯಕ್ರಮದ ಪೂರ್ವ ಸಿದ್ಧತೆಯ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿದಿನ ಬೆಳಗ್ಗೆ ಉಚಿತವಾಗಿ ಯೋಗ ತರಬೇತಿಯನ್ನುಈಗಾಗಲೇ ನೀಡಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಥಾನ್‌ ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಸಿಕೊಳ್ಳಲು ಆನ್‌ಲೈನ್‌ ವ್ಯವಸ್ಥೆ ಮಾಡಲಾಗಿದೆ. -ಜಯಲಕ್ಷ್ಮೀ, ಸಹಾಯಕ ನಿರ್ದೇಶಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.