ಒಂದೇ ಬೆರಳಿನಿಂದ 15 ಸೆಕೆಂಡುಗಳಲ್ಲಿ 4 ಪುಷ್‌ಅಪ್ ; ಸಾಗರದ ಯುವಕನ ವಿಶ್ವದಾಖಲೆ


Team Udayavani, Jul 20, 2022, 9:35 PM IST

ಒಂದೇ ಬೆರಳಿನಿಂದ 15 ಸೆಕೆಂಡುಗಳಲ್ಲಿ 4 ಪುಷ್‌ಅಪ್ ; ಸಾಗರದ ಯುವಕನ ವಿಶ್ವದಾಖಲೆ

ಸಾಗರ: ಇಲ್ಲಿನ ಎಲ್‌ಬಿ ಕಾಲೇಜಿನ ದ್ವಿತೀಯ ಬಿಎ ವ್ಯಾಸಂಗ ಮಾಡುತ್ತಿರುವ ಜಿ.ಬಿ. ಆಕಾಶ್ ಒಂದು ಕೈನ ಒಂದೇ ಬೆರಳನ್ನು ನೆಲಕ್ಕೆ ಊರಿಕೊಂಡು 15 ಸೆಕೆಂಡುಗಳಲ್ಲಿ 4 ಪುಷ್‌ಅಪ್‌ಗಳನ್ನು ಮಾಡುವ ಮೂಲಕ ವಿಶ್ವ ದಾಖಲೆ ಮಾಡಿದ್ದಾರೆ. ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಿ.ಬಿ.ಆಕಾಶ್ ಅವರ ಈ ಸಾಹಸವನ್ನು 15 ಸೆಕೆಂಡ್‌ಗಳಲ್ಲಿ ಏಕ ಬೆರಳಿನ ಅತಿ ಹೆಚ್ಚು ಪುಷ್‌ಅಪ್ ಎಂಬ ದಾಖಲೆಗೆ ಪರಿಗಣಿಸಿ, ಪ್ರಮಾಣಪತ್ರ ನೀಡಲಿದೆ.

ಮೂಲತಃ ಶಿಕಾರಿಪುರ ತಾಲೂಕಿನ ಕಣವಿಮನೆ ಗ್ರಾಮದ ಬಿ.ಜಿ.ಗಂಗಾಧರ ಮತ್ತು ಜಿ.ಬಿ.ಭಾಗ್ಯ ಅವರ ಕಿರಿಯ ಪುತ್ರ ಆಕಾಶ್ ಇಲ್ಲಿನ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದಾರೆ. ಬಾಲ್ಯದಿಂದಲೇ ತುಂಟ ಹುಡುಗನಾಗಿರುವ ಆಕಾಶ್ ಕರಾಟೆ ಮತ್ತು ಜೂಡೋ ಕ್ರೀಡಾಪಟುವಾಗಿದ್ದು, ವಿವಿ ಮಟ್ಟದಲ್ಲಿ ಪದಕ ಗಳಿಸಿದ್ದಾರೆ. ಕರಾಟೆಯ ಬ್ಲ್ಯಾಕ್ ಬೆಲ್ಟ್ ಮತ್ತು ಜೂಡೋದಲ್ಲಿ ರಾಷ್ಟ್ರಮಟ್ಟದ ಸಾಧನೆ ಮಾಡಿದ್ದಾರೆ.

ಕೃಷಿಕ ಪೋಷಕರ ಮಗನಾಗಿದ್ದರೂ ಆಕಾಶ್ ಸ್ಟಂಟ್‌ಗಳ ಬಗ್ಗೆ ಬಹಳ ಆಸಕ್ತಿ ಹೊಂದಿದ್ದು, ಕೇವಲ ಭುಜಗಳನ್ನು ಮಾತ್ರ ಬಳಸಿ ಎರಡು ಕೈಗಳಿಂದ ಅಡಕೆ ಮರ ಏರುವ ಸ್ಟಂಟ್ ಮಾಡಿ ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಪುಷ್‌ಅಪ್ ತೆಗೆಯುವ ದಾಖಲೆ ಬಗ್ಗೆ ಆಸಕ್ತಿ ಮೂಡಿದ್ದರಿಂದ ಎರಡು ಬೆರಳು, ಒಂದು ಬೆರಳು ಬಳಸಿ ಪುಷ್‌ಅಪ್‌ಗಳನ್ನು ವೇಗವಾಗಿ ತೆಗೆಯುವ ಯತ್ನ ಮಾಡಿದ್ದಾರೆ. ಬ್ರೂಸ್ಲಿಯವರು 15 ಸೆಕೆಂಡ್‌ಗಳಲ್ಲಿ 3 ಪುಷ್‌ಅಪ್ ತೆಗೆದಿರುವುದನ್ನು ಗಮನಿಸಿದ್ದರಿಂದ, ಆಕಾಶ್ 4 ಪುಷ್‌ಅಪ್‌ಗಳನ್ನು ತೆಗೆಯುವ ಸಾಹಸಕ್ಕೆ ಯತ್ನಿಸಿದ್ದಾರೆ.

ಇದನ್ನೂ ಓದಿ : ಆತ್ಮಹತ್ಯೆಗೆ ಯತ್ನಿಸುವ ವೇಳೆ ಬುದ್ಧಿವಾದ: ಯುವಕನಿಂದ ರಾಡ್‌ನಿಂದ ದಾಳಿ

ಬಸ್ ಪ್ರಯಾಣದಲ್ಲಿ ಜತೆಯಾದ ಧಾರವಾಡದ ಸರ್ವೋತ್ತಮ ಎಂಬುವವರ ಸಲಹೆಯಿಂದಾಗಿ ಏಕ ಬೆರಳಿನ ಪುಷ್‌ಅಪ್ ಸಾಧನೆಯ ಕುರಿತು ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಮಾಹಿತಿ ನೀಡಿದ್ದಾರೆ. ಸರ್ವೋತ್ತಮ ಅವರೇ ಅಗತ್ಯ ಅರ್ಜಿ ಇನ್ನಿತರ ಮಾಹಿತಿ ನೀಡಿದ್ದಾರೆ. ವಿಡಿಯೋ ಕಳುಹಿಸಿದ ಹಿನ್ನೆಲೆಯಲ್ಲಿ ಜಿ.ಬಿ. ಆಕಾಶ್ ಸಾಧನೆ ವಿಶ್ವ ದಾಖಲೆ ಎಂಬ ಮನ್ನಣೆ ಪಡೆದುಕೊಂಡಿದೆ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.