ಚಲಿಸುತ್ತಿದ್ದ ಲಾರಿಯಲ್ಲಿದ್ದ ದಿಮ್ಮಿಗಳು ಬಿದ್ದು ಬೈಕ್‌ ನಲ್ಲಿದ್ದ ಹಿಂಬದಿ ಸವಾರ ಸಾವು

7 ತಿಂಗಳ ಹಿಂದೆ ಮದುವೆ, ಪತ್ನಿ 5 ತಿಂಗಳ ಗರ್ಭಿಣಿ

Team Udayavani, Jul 23, 2022, 12:42 PM IST

ಚಲಿಸುತ್ತಿದ್ದ ಲಾರಿಯಲ್ಲಿದ್ದ ದಿಮ್ಮಿಗಳು ಬಿದ್ದು ಬೈಕ್‌ ನಲ್ಲಿದ್ದ ಹಿಂಬದಿ ಸವಾರ ಸಾವು

ಬೆಂಗಳೂರು: ನಾಗರಬಾವಿಯ ರಿಂಗ್‌ ರಸ್ತೆಯ ಮೇಲ್ಸೇತುವೆ ಬಳಿ ಚಲಿಸುತ್ತಿದ್ದ ಲಾರಿಯಿಂದ ಬೃಹತ್‌ ಗಾತ್ರದ ದಿಮ್ಮಿಗಳು ಬೈಕ್‌ ಮೇಲೆ ಬಿದ್ದು ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಸವಾರ ಗಾಯಗೊಂಡಿದ್ದಾನೆ.

ತಮಿಳುನಾಡು ಮೂಲದ ನಂದಿನಿ ಲೇಔಟ್‌ ನಿವಾಸಿ ಮುಕೇಶ್‌ (23) ಮೃತ ದುರ್ದೈ ವಿ. ಮುಕೇಶ್‌ ಬಾಮೈದ ಬೈಕ್‌ ಸವಾರ ಡೇವಿಡ್‌, ಮತ್ತೂಂದು ಬೈಕ್‌ನ ಸವಾರ ಶಿವು ಗಾಯಗೊಂಡಿದ್ದಾರೆ.

ಮುಕೇಶ್‌ ತಮಿಳುನಾಡಿ ತಿರುವಣ್ಣಾಮಲೆಯಲ್ಲಿರುವ ತಾಯಿ ಹಾಗೂ ಅಜ್ಜಿಯನ್ನು ನೋಡಿಕೊಂಡು ಶುಕ್ರವಾರ ಮುಂಜಾನೆ 4.30ಕ್ಕೆ ಸೆಟಲೈಟ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಬಸ್‌ ನಿಲ್ದಾಣದಿಂದ ಬಾಮೈದ ಡೇವಿಡ್‌ ತಮ್ಮ ಬೈಕ್‌ನಲ್ಲಿ ಮುಕೇಶ್‌ರನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಇತ್ತ ಸುಂಕದಕಟ್ಟೆಯಿಂದ ಟಿಂಬರ್‌ ಯಾರ್ಡ್‌ ಕಡೆಗೆ ಮರದ ದಿಮ್ಮಿಗಳನ್ನು ತೆಗೆದುಕೊಂಡು ಬರುತ್ತಿದ್ದ ಲಾರಿ ಮಾರ್ಗಮಧ್ಯೆ ನಾಗರಬಾವಿ ರಿಂಗ್‌ ರಸ್ತೆಯ ಮೇಲ್ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿತ್ತು.

ಅದೇ ರಸ್ತೆಯಲ್ಲಿ ಲಾರಿಯ ಮುಂಭಾಗದಿಂದ ಬರುತ್ತಿದ್ದ ಡೇವಿಡ್‌ ಬೈಕ್‌ ಮೇಲೆ ಬೃಹತ್‌ ಗಾತ್ರದ ಮರದ ದಿಮ್ಮಿಗಳು ಬಿದ್ದಿದ್ದವು. ಪರಿಣಾಮ ಮುಕೇಶ್‌ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡೇವಿಡ್‌ ಗಾಯಗೊಂಡಿದ್ದಾರೆ. ಲಾರಿ ಪಕ್ಕದಲ್ಲಿ ಬೈಕ್‌ ಚಲಾಯಿಸಿಕೊಂಡು ಬರುತ್ತಿದ್ದ ಶಿವು ಎಂಬುವವರಿಗೂ ಗಾಯಗಳಾಗಿವೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

7 ತಿಂಗಳ ಹಿಂದೆ ಮದುವೆ ಪತ್ನಿ 5 ತಿಂಗಳ ಗರ್ಭಿಣಿ: ಕೂಲಿ ಕೆಲಸ ಮಾಡುತ್ತಿದ್ದ ಮುಕೇಶ್‌ 7 ತಿಂಗಳ ಹಿಂದೆ ಮದುವೆಯಾಗಿದ್ದರು. ಇವರ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದು, ನಾಗರ ಬಾವಿಯ ಖಾಸಗಿ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂ ದನ ಮುಗಿಲು ಮುಟ್ಟಿದೆ. ಆಂಧ್ರ ಪ್ರದೇಶ ಮೂಲದ ಲಾರಿಯಾಗಿದ್ದು, ಟಿಂಬರ್‌ ಯಾರ್ಡ್‌ಗೆ ಮರದ ದಿಮ್ಮಿಗಳನ್ನು ತರುತ್ತಿತ್ತು. ಮುಂಜಾನೆಕಡಿಮೆ ವಾಹನಗಳಿದ್ದ ಹಿನ್ನೆಲೆಯಲ್ಲಿ ಚಾಲಕ ಅತೀ ವೇಗವಾಗಿ ಲಾರಿ ಚಲಾಯಿಸಿದ್ದ. ದುರ್ಘ‌ಟನೆ ನಡೆದ ಸ್ಥಳದ ಬಳಿ ತಿರುವಿದ್ದು, ಅಲ್ಲಿ ಏಕಾಏಕಿ ಬ್ರೇಕ್‌ ಹಾಕಿರುವ ಕಾರಣ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರ ಬಹುದು ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.