ಮೂಲ ಸೌಕರ್ಯ ವಂಚಿತ ಬಡಾವಣೆಗೆ ಕಾಯಕಲ್ಪ ಯಾವಾಗ?


Team Udayavani, Jul 24, 2022, 5:06 PM IST

15

ಶಿರಹಟ್ಟಿ: ಸ್ಥಳೀಯ ಪಟ್ಟಣ ಪಂಚಾಯಿತಿಗೆ ಬೆದರೆ ಬಡಾವಣೆ, ಸಿದ್ದರಾಮೇಶ್ವರ ನಗರ ಹಾಗೂ ಶಿವಲಿಂಗಪ್ಪ ಕಪ್ಪತ್ತನವರ ಬಡಾವಣೆಗಳಿಂದ ಎಲ್ಲ ರೀತಿಯ ತೆರಿಗೆ ಸಂದಾಯವಾಗಬೇಕು. ಆದರೆ, ಅಲ್ಲಿಯ ನಿವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗದ ಪಪಂ ಕಾರ್ಯವೈಖರಿಗೆ ಜನ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

ಕಳೆದ ಎರಡು ದಶಕಗಳಿಂದ ಆ ಬಡಾವಣೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ನರಕ ಯಾತನೆಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸುತ್ತಿಲ್ಲ. ಶುದ್ಧ ಕುಡಿಯುವ ನೀರು, ಚರಂಡಿ, ಉತ್ತಮ ರಸ್ತೆ, ಬೀದಿ ದೀಪ ಇವುಗಳನ್ನು ಹೊಂದುವುದು ಪ್ರತಿಯೊಬ್ಬ ಪ್ರಜೆಯ ಸಾಮಾನ್ಯ ಹಕ್ಕಾಗಿದೆ. ಈ ಹಕ್ಕನ್ನು ಪ್ರತಿಯೊಬ್ಬ ಪ್ರಜೆ ಹೊಂದಬೇಕು ಎಂಬುವುದಕ್ಕಾಗಿ ಸರ್ಕಾರ ಅನುದಾನವನ್ನು ನೀರನಂತೆ ವ್ಯಯಿಸುತ್ತಿದೆ. ಆದರೆ ಆ ಬಡಾವಣೆಯ ಜನರು ಮಾತ್ರ ಇವುಗಳಿಂದ ಕಳೆದ 20 ವರ್ಷಗಳಿಂದ ವಂಚಿತರಾಗಿದ್ದಾರೆ. ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಅಲ್ಲಿಯ ನಿವಾಸಿಗಳು ಲಿಖೀತವಾಗಿ, ಮೌಕಿಖವಾಗಿ ಪಪಂ ಕಚೇರಿಗೆ, ಆಡಳಿತ ಮಂಡಳಿಗೆ ಮನವಿ ಸಲ್ಲಿಸುತ್ತ ಬಂದಿದ್ದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂಬುವುದು ಜನರ ಅಂತರಾಳದ ಧ್ವನಿಯಾಗಿದೆ.

ತೆರಿಗೆ ಮಾತ್ರ ಬೇಕು: ವಾರ್ಡ್‌ ನಂ.18ಕ್ಕೆ ಒಳಪಡುವ ಸಿದ್ದರಾಮೇಶ್ವರ ನಗರ, ಬೆದರೆ ಬಡಾವಣೆ ಹಾಗೂ ಶಿವಲಿಂಗಪ್ಪ ಕಪ್ಪತ್ತನವರ ಬಡಾವಣೆಗಳಲ್ಲಿ ಸೂಮಾರು 500ಕ್ಕೂ ಹೆಚ್ಚು ಮನೆಗಳಿದ್ದು, ಪ್ರತಿ ವರ್ಷ ಪಪಂ ನಿಗದಿಪಡಿಸಿರುವ ಎಲ್ಲ ರೀತಿಯ ತೆರಿಗೆಗಳನ್ನು ಇಲ್ಲಿನ ನಿವಾಸಿಗಳು ತಪ್ಪದೆ ಕಟ್ಟುತ್ತಾ ಬರುತ್ತಿದ್ದಾರೆ. ಜನರಿಂದ ತೆರಿಗೆ ಭರಿಸಿಕೊಳ್ಳುವ ಪಪಂ ಪ್ರತಿ ವರ್ಷ ಸಿದ್ಧಪಡಿಸುವ ಕ್ರಿಯಾಯೋಜನೆಯಲ್ಲಿ ಮಾತ್ರ ಈ ಎಲ್ಲ ಬಡಾವಣೆಗಳ ಅಭಿವೃದ್ಧಿಗೆ ಅನುದಾನ ಮೀಸಲಿಡುತ್ತಿಲ್ಲ ಎಂಬುವುದು ಜನರ ಅಳಲಾಗಿದೆ.

ಬಡಾವಣೆಯ ಪಕ್ಕದಲ್ಲಿಯೇ ಸರ್ಕಾರಿ ಶಾಲೆಯಿದೆ. ಅಲ್ಲದೇ, ನವೋದಯ ತರಬೇತಿ ಕೇಂದ್ರವೂ ಇದೆ. ಅಲ್ಲಿಗೆ ಮಕ್ಕಳು ಹೋಗಲು ಆಗದಷ್ಟು ರಸ್ತೆ ಹದಗೆಟ್ಟಿದ್ದು, ಬೀದಿ ದೀಪಗಳಿಲ್ಲದೇ ಇರುವುದರಿಂದ ಸಂಜೆ ವೇಳೆ ಮಕ್ಕಳು, ವೃದ್ಧರು ಸಂಚರಿಸುವುದು ಕಷ್ಟವಾಗಿದೆ.

ಜಿಲ್ಲಾಧಿಕಾರಿಗಳು ಸೂಚಿಸಿದ್ದರಂತೆ: -2018ರಲ್ಲಿ ಅಂದಿನ ಜಿಲ್ಲಾಧಿಕಾರಿ ಮನೋಜ ಜೈನ್‌ ಅವರು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ, ಬಡಾವಣೆಯ ನಿವಾಸಿಗಳು ಪಟ್ಟಣ ಪಂಚಾಯಿತಿಯವರು ಪೂರೈಕೆ ಮಾಡುತ್ತಿರುವ ಅಶುದ್ಧ ನೀರನ್ನು ತೆಗೆದುಕೊಂಡು ಹೋಗಿ. ಇಂಥ ನೀರನ್ನು ನಿತ್ಯ ನಾವು ಹೇಗೆ ಕುಡಿಯಬೇಕು? ಒಮ್ಮೆ ಕಣ್ತೆರೆದು ನೋಡಿ. ನಿಮ್ಮ ಹಾಗೆ ನಾವು ಮನುಷ್ಯರೇ ಎಂದು ಅಳಲು ತೋಡಿಕೊಂಡಿದ್ದರಂತೆ. ಆಗ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ ನಾಲ್ಕು ವರ್ಷ ಕಳೆದರೂ ಯಾವುದೇ ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ ಎಂದು ಶ್ರೀನಿವಾಸ ಬಾರಬರ, ಶರಣಪ್ಪ ಹರ್ತಿ, ಬಸವರಾಜ ಪೂಜಾರ, ಹನಮವ್ವ ಪೂಜಾರ, ಸಲೀಮಾ ಹಣಗಿ ಆರೋಪಿಸುತ್ತಾರೆ.

ತುರ್ತು ಮೂಲಭೂತ ಸೌಲಭ್ಯ ಕಲ್ಪಿಸಲು ಪಟ್ಟಣ ಪಂಚಾಯತಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಕ್ರಮ ತೆಗೆದುಕೊಳ್ಳದಿದ್ದರೆ ಪಂಚಾಯತಿ ಎದುರು ಪ್ರತಿಭಟನೆ ನಡೆಸುವುದಾಗಿ ನಿವಾಸಿಗಳು ಎಚ್ಚರಿಸಿದ್ದಾರೆ.

ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸೌಲಭ್ಯ ಕಲ್ಪಿಸಿ ಕೊಡುವಂತೆ ಚರ್ಚೆ ಮಾಡಲಾಗಿದೆ. ಬಡಾವಣೆಯ ನಿವಾಸಿಗಳು ನಾವು ಸೇರಿ ಲಿಖೀತ ಮನವಿ ಸಲ್ಲಿಸಲಾಗಿದೆ. ಎಲ್ಲ ಬಗೆಯ ತೆರಿಗೆ ಹಣವನ್ನು ಭರಣಾ ಮಾಡಲಾಗುತ್ತಿದ್ದು, ನಮ್ಮ ಬಡಾವಣೆಗಳಿಗೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸಿಲ್ಲ. ನನಗೆ ಮತಹಾಕಿ ಆರಿಸಿ ಕಳಿಸಿದ ಜನ ನಿತ್ಯ ಛೀಮಾರಿ ಹಾಕುತ್ತಿದ್ದಾರೆ. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಬೇಕು. –ಅನಿತಾ ಬಾರಬರ, 18ನೇ ವಾರ್ಡ್‌ ಸದಸ್ಯೆ

-ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.