ರಾಜ್ಯದಲ್ಲಿ ಸ್ಮಶಾನಕ್ಕಾಗಿ ಜಮೀನು ಖರೀದಿಗೆ 6 ಕೋಟಿ ಬಿಡುಗಡೆ
Team Udayavani, Jul 24, 2022, 9:41 PM IST
ಬೆಂಗಳೂರು: ರಾಜ್ಯದಲ್ಲಿ ಸ್ಮಶಾನಕ್ಕಾಗಿ ಖಾಸಗಿಯವರಿಂದ ಜಮೀನು ಖರೀದಿಸುವ ಸಂಬಂಧ ಸರ್ಕಾರ ಆರು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ನೂರಾರು ಗ್ರಾಮಗಳಲ್ಲಿ ಈಗಲೂ ಸ್ಮಶಾನಗಳು ಇಲ್ಲ. ಈ ಪೈಕಿ ಅನೇಕ ಕಡೆ ಸರ್ಕಾರಿ ಜಮೀನು ಕೂಡ ಇಲ್ಲ. ಅಂತಹ ಗ್ರಾಮಗಳಲ್ಲಿ ಖಾಸಗಿ ಭೂ ಮಾಲಿಕರಿಂದ ಅಗತ್ಯ ಜಮೀನು ಖರೀದಿಸಿ, ಸ್ಮಶಾನಕ್ಕಾಗಿ ಅವುಗಳನ್ನು ಕಾಯ್ದಿರಿಸುವಂತೆ ಕಂದಾಯ ಇಲಾಖೆ (ಭೂ ಮಂಜೂರಾತಿ-1) ಅಧೀನ ಕಾರ್ಯದರ್ಶಿ ಈಚೆಗೆ ಆದೇಶಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಾರ್ವಜನಿಕ ಸ್ಮಶಾನ ಸೌಲಭ್ಯ ಕಲ್ಪಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದ ಗ್ರಾಮಗಳು ಅಗತ್ಯ ಜಮೀನು ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ. ನೂರಾರು ಗ್ರಾಮಗಳಲ್ಲಿ ಸ್ಮಶಾನಗಳಿಲ್ಲದ ಬಗ್ಗೆ ಈ ಹಿಂದೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ವಿಚಾರಣೆಯಲ್ಲಿ ಹೈಕೋರ್ಟ್ ಈ ಸಂಬಂಧ ಆದೇಶ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.