ಸ್ವಚ್ಛತೆಗೆ ರಜೆ ಮೀಸಲಿಟ್ಟ ನಗರಸಭೆ

ನಗರ ನಿರ್ಮಲಕ್ಕೆ ಹೊಸ ಪರಿಕಲ್ಪನೆ ; ಸ್ವಚ್ಛತೆ ನಡೆಗೆ ಒಂದು ದೃಢ ಹೆಜ್ಜೆ ; ಪೌರಾಯುಕ್ತರಿಂದ ಚಾಲನೆ

Team Udayavani, Jul 25, 2022, 5:23 PM IST

17

ರಬಕವಿ-ಬನಹಟ್ಟಿ: ಸರ್ಕಾರಿ ರಜೆಗಳಾದ ತಿಂಗಳ ಎರಡನೇ, ನಾಲ್ಕನೇ ಶನಿವಾರ ಹಾಗೂ ರವಿವಾರದಂದು ರಬಕವಿ-ಬನಹಟ್ಟಿ ನಗರಸಭೆ ನಗರ ಸ್ವಚ್ಛತೆಗೆ ಹೊಸ ಪರಿಕಲ್ಪನೆಯೊಂದಿಗೆ ಮುಂದಾಗಿದೆ.

ರಬಕವಿ-ಬನಹಟ್ಟಿ ನಗರಸಭೆಯ ವಾರ್ಡ್‌ ನಂ.3 ರಲ್ಲಿ ನಗರ ಸ್ವಚ್ಛತೆಯ ಹೊಸ ಪರಿಕಲ್ಪನೆಗೆ ಚಾಲನೆ ನೀಡಿ ಮಾತನಾಡಿದ ಪೌರಾಯುಕ್ತ ಅಶೋಕ ಗುಡಿಮನಿ, ಸ್ವಚ್ಛತೆ ಮಾಡೋದು ಕೇವಲ ಪೌರಕಾರ್ಮಿಕರ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೀಮಿತವಲ್ಲ. ಸ್ವಚ್ಛತೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಪ್ರತಿಯೊಬ್ಬರಿಗೂ ಸ್ವಚ್ಛತೆ ಅರಿವು ಬಂದಾಗಲೇ ಸ್ವಚ್ಛ ಭಾರತ ಅಭಿಯಾನ ಸಫಲವಾಗುವುದು. ಸ್ವಚ್ಛತೆ ನಡೆಗೆ ಒಂದು ದೃಢ ಹೆಜ್ಜೆ ಇಡೋಣ ಎಂದರು.

ನಗರದಲ್ಲಿ ಹಸಿಕಸ ಮತ್ತು ಒಣಕಸದ ಬಗ್ಗೆ ಜನರಿಗೆ ತಿಳಿವಳಿಕೆಯಿದೆ. ಆದರೆ, ಇದನ್ನು ಬೇರ್ಪಡಿಸಿ ಹಾಕುವುದಕ್ಕೆ ಮನೆ-ಮನೆಗೆ ತೆರಳಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದರು.

ಪ್ರತಿ ವಾರ್ಡ್‌ಗಳ ಸದಸ್ಯರು ತಮ್ಮ ವಾರ್ಡ್‌ಗಳನ್ನು ದತ್ತು ತೆಗೆದುಕೊಳ್ಳುವ ಮುಖಾಂತರ ಸ್ವಚ್ಛತೆ ಮತ್ತು ಕಸ ವಿಂಗಡಣೆ ಬಗ್ಗೆ ನಗರಸಭೆ ಸಿಬ್ಬಂದಿಗೆ ಕೈ ಜೋಡಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದರು.

ಇದೀಗ ತಿಂಗಳ ನಾಲ್ಕು ದಿನಗಳ ಸರ್ಕಾರಿ ರಜೆಗಳಲ್ಲಿ ನಗರ ಸ್ವಚ್ಛತೆಗೆ ಎಲ್ಲ 31 ವಾರ್ಡ್‌ ಗಳಲ್ಲಿ 122 ಸಿಬ್ಬಂದಿ, 3 ಆರೋಗ್ಯ ಅಧಿಕಾರಿಗಳು ಹಾಗೂ 3 ಮೇಲ್ವಿಚಾರಕರ ತಂಡವಾಗಿ ನಿರಂತರ ಕಾರ್ಯ ನಡೆಯಲಿದೆ ಎಂದರು.

ನಗರಸಭೆಯ 125 ಎಲ್ಲ ವರ್ಗದ ಕಾರ್ಮಿಕರನ್ನು ಒಂದೆಡೆ ಬಳಕೆ ಮಾಡಿಕೊಂಡು 31 ವಾರ್ಡ್‌ಗಳನ್ನು ಸ್ವಚ್ಛತೆಯ ಪರಿಕಲ್ಪನೆಯೊಂದಿಗೆ ಶನಿವಾರ ಸ್ವಚ್ಛತೆಗೆ ಚಾಲನೆ ನೀಡಿದೆ. ಜನರ ಸಹಕಾರದಿಂದ ನಿರ್ಮಲ ನಗರವನ್ನಾಗಿಸುವ ಗುರಿಯಿದೆ. –ಅಶೋಕ ಗುಡಿಮನಿ, ಪೌರಾಯುಕ್ತ, ನಗರಸಭೆ

ಸ್ವಚ್ಛತೆಗೆ ಒಂದೇ ಸೂರಿನಲ್ಲಿ ನೂರಕ್ಕೂ ಅಧಿಕ ಸಿಬ್ಬಂದಿ ರಜೆ ದಿನಗಳನ್ನು ಮೀಸಲಿರಿಸಿದ್ದು ಖುಷಿ ತಂದಿದ್ದು, ಇವರೊಂದಿಗೆ ನಗರಸಭೆ ಸರ್ವ ಸದಸ್ಯರೂ ಬೆಂಬಲವಿದೆ. -ಸಂಜಯ ತೆಗ್ಗಿ, ಅಧ್ಯಕ್ಷ, ನಗರಸಭೆ, ರಬಕವಿ-ಬನಹಟ್ಟಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.