ಶ್ವಾನಗಳಿಗೆ ಎ.ಸಿ. ಫ್ಲ್ಯಾಟ್‌ ನೀಡಿದ್ದ ಸಚಿವ ಪಾರ್ಥ ಚಟರ್ಜಿ


Team Udayavani, Jul 26, 2022, 7:20 AM IST

ಶ್ವಾನಗಳಿಗೆ ಎ.ಸಿ. ಫ್ಲ್ಯಾಟ್‌ ನೀಡಿದ್ದ ಸಚಿವ ಪಾರ್ಥ ಚಟರ್ಜಿ

ಕೋಲ್ಕತಾ/ಭುವನೇಶ್ವರ: ಶ್ವಾನಗಳಿಗೂ ಹವಾನಿ ಯಂತ್ರಿತ ಫ್ಲ್ಯಾಟ್‌- ಇದು ಅಚ್ಚರಿಯಾದರೂ, ಹುಬ್ಬೇರಿಸುವ ಸಮಾಚಾರವಂತೂ ಹೌದು. ಶಿಕ್ಷಕರ ನೇಮಕ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಲದ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶ ನಾಲಯ ತನಿಖೆಗೆ ಒಳಪಡಿಸಿದಾಗ ಬಹಿರಂಗ ಗೊಂಡಿರುವ ಸತ್ಯವಿದು.

ಕೋಲ್ಕತಾದ ಹಲವು ಪ್ರದೇಶಗಳಲ್ಲಿ ಅವರು ಫ್ಲ್ಯಾಟ್‌ಗಳನ್ನು ಹೊಂದಿದ್ದಾರೆ. ಈ ಪೈಕಿ ಡೈಮಂಡ್‌ ಡಿಸ್ಟ್ರಿಕ್ಟ್ ಎಂಬಲ್ಲಿ ಹೊಂದಿರುವ ಒಂದು ಫ್ಲ್ಯಾಟ್‌ನಲ್ಲಿ ಶ್ವಾನಗಳಿ ಗಾಗಿಯೇ ಸಂಪೂರ್ಣವಾಗಿ ಹವಾನಿಯಂತ್ರಣ ವ್ಯವಸ್ಥೆ ಇರುವ ಅದ್ದೂರಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂಬ ಅಂಶ ತನಿಖೆಯಿಂದ ಗೊತ್ತಾಗಿದೆ. ಅವರು ಶ್ವಾನ ಪ್ರಿಯರಾಗಿ ಇರುವುದರಿಂದ ಇಂಥ ಹವ್ಯಾಸ ಹೊಂದಿದ್ದರು ಎಂದು ತನಿಖಾಧಿಕಾರಿಗಳು ಕಂಡು ಕೊಂಡಿದ್ದರು. ಇಷ್ಟು ಮಾತ್ರ ವಲ್ಲದೆ, ಮತ್ತೊಂದು ಅಪಾರ್ಟ್‌ಮೆಂಟ್‌ ನಟಿ ಅರ್ಪಿತಾ ಮುಖರ್ಜಿ ಮತ್ತು ಸಚಿವ ಪಾರ್ಥ ಅವರ ಜಂಟಿ ಮಾಲಕತ್ವದಲ್ಲಿ ಇದೆ ಎಂಬ ಅಂಶವೂ ಗೊತ್ತಾಗಿದೆ. ಈ ಅಂಶಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

4 ಬಾರಿ ಸಿಎಂಗೆ ಫೋನ್‌: ಬಂಧನವಾದ ಬಳಿಕ ಸಚಿವ ಪಾರ್ಥ ಚಟರ್ಜಿ ಅವರು ಸಿಎಂ ಬ್ಯಾನರ್ಜಿ ಅವರಿಗೆ ನಾಲ್ಕು ಬಾರಿ ಫೋನ್‌ ಮಾಡಿದ್ದಾರೆ. ಶನಿವಾರ ಬೆಳಗ್ಗೆ 2.32, 2.33, 3.37 ಮತ್ತು 9.35ಕ್ಕೆ ಫೋನ್‌ ಮಾಡಿ ದ್ದಾರೆ. ಆದರೆ, ಅವರು ಕರೆ ಸ್ವೀಕರಿಸಲಿಲ್ಲ ಎಂದು ಇ.ಡಿ.ಯ ಟಿಪ್ಪಣಿಯಲ್ಲಿ ಉಲ್ಲೇಖೀಸಲಾಗಿದೆ. ಈ ಅಂಶ ವನ್ನು ಪಾರ್ಥ ಚಟರ್ಜಿ ಕೂಡ ಖಚಿತಪಡಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಬೆಂಬಲ ಇಲ್ಲ
“ನಾವು ಭ್ರಷ್ಟಾಚಾರಕ್ಕೆ ಬೆಂಬಲ ನೀಡುವುದಿಲ್ಲ. ಯಾರೇ ಆಗಲಿ ತಪ್ಪು ಎಸಗಿದ್ದು ಸಾಬೀತಾದರೆ, ಅವರಿಗೆ ಶಿಕ್ಷೆ ಆಗಲೇಬೇಕು’ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಶಿಕ್ಷಕರ ನೇಮಕ ಪ್ರಕರಣದಲ್ಲಿ ಕೈಗಾರಿಕ ಸಚಿವ ಪಾರ್ಥ ಚಟರ್ಜಿ ಬಂಧನವಾಗಿ 2 ದಿನಗಳ ಬಳಿಕ ಒಟ್ಟಾರೆ ಬೆಳವಣಿಗೆ ಬಗ್ಗೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಕೆ ಮಾಡಿ ತೃಣಮೂಲ ಕಾಂಗ್ರೆಸ್‌ ಅನ್ನು ಒಡೆಯಬಹುದು ಎಂದು ಬಿಜೆಪಿ ಯೋಚಿಸುತ್ತಿದ್ದರೆ ಅದು ಸಾಧ್ಯವಿಲ್ಲದ ಮಾತು. ನನ್ನ ವಿರುದ್ಧ ವಿನಾಕಾರಣ ಅಪಪ್ರಚಾರ ಮಾಡ ಲಾಗುತ್ತಿದೆ ಎಂದು ದೂರಿದ್ದಾರೆ.

ಪಾರ್ಥ ಚಟರ್ಜಿ ಅವರಿಗೆ ಅನಾರೋಗ್ಯ ಸಮಸ್ಯೆ ಇರುವುದು ನಿಜ. ಆದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕಾದ ಅಗತ್ಯ ಇಲ್ಲ .
-ಅಶುತೋಷ್‌ ಬಿಸ್ವಾಸ್‌, ಭುವನೇಶ್ವರ ಏಮ್ಸ್‌ ಕಾರ್ಯನಿರ್ವಾಹಕ ನಿರ್ದೇಶಕ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.