ಸಕಾಲ ಅರ್ಜಿ ವಿಳಂಬವಾದ್ರೆ ದಂಡ ಕಡ್ಡಾಯ

ಸಕಾಲದಡಿ 45 ಇಲಾಖೆಗಳ ವಿವಿಧ ಸೇವೆ ; ಅರ್ಜಿಯೊಂದಿಗೆ ಅಗತ್ಯ ದಾಖಲೆ ಲಗತ್ತಿಸಿ

Team Udayavani, Jul 26, 2022, 5:41 PM IST

19

ಕೊಪ್ಪಳ: ಸಕಾಲದಡಿ ಬರುವ ಎಲ್ಲ ಇಲಾಖೆಗಳು ನಿಗದಿಪಡಿಸಿದ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ, ಅನಗತ್ಯ ವಿಳಂಬ ಮಾಡಿದರೆ ನಿಯಮಾನುಸಾರ ಸಂಬಂಧಿಸಿದ ಅಧಿಕಾರಿ, ವಿಷಯ ನಿರ್ವಾಹಕರು ದಂಡ ಪಾವತಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಕಾಲ ಹಾಗೂ ಐಪಿಜಿಆರ್‌ಎಸ್‌ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲದಡಿ ಒಟ್ಟು 45 ಇಲಾಖೆಗಳು ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಸೇವೆ ಒದಗಿಸುತ್ತವೆ. ಪ್ರತಿ ಇಲಾಖೆಯ ಒಪ್ಪಿಗೆ ಹಾಗೂ ಕಾರ್ಯನಿರ್ವಹಣೆಯ ಅವಧಿಯನುಸಾರ ಪ್ರತಿ ಅರ್ಜಿ ವಿಲೇವಾರಿಗೂ ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಿದೆ. ಆದಾಗ್ಯೂ ಕೆಲ ಇಲಾಖೆಗಳು ಅರ್ಜಿ ವಿಲೇವಾರಿಗೆ ಹಾಗೂ ಅರ್ಜಿ ತಿರಸ್ಕಾರಕ್ಕೆ ಕೊನೆಯ ದಿನಾಂಕದವರೆಗೆ ಕಾಯುತ್ತವೆ. ಇದರಿಂದ ಅರ್ಜಿದಾರರ ಸಮಯ ವ್ಯರ್ಥವಾಗುವುದರೊಂದಿಗೆ ಜಿಲ್ಲೆಯ ಪ್ರಗತಿಯಲ್ಲೂ ಕುಂಠಿತಗೊಳ್ಳುತ್ತದೆ. ಆದ್ದರಿಂದ ಅರ್ಜಿದಾರರಿಗೆ ಸೇವೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ನೀಡುವಂತೆ ಅರ್ಜಿ ಸ್ವೀಕಾರ ಸಮಯದಲ್ಲಿ ತಿಳಿಸಿ. ಕೊನೆಯ ದಿನಾಂಕದವರೆಗೂ ಕಾದು ದಾಖಲಾತಿಗಳ ಕೊರತೆಯ ಕಾರಣ ನೀಡಿ ಅರ್ಜಿ ತಿರಸ್ಕರಿಸಬೇಡಿ. ಇದರಿಂದ ಅನಗತ್ಯ ವಿಳಂಬ ಉಂಟಾಗಿ, ಅರ್ಜಿದಾರರಿಗೂ ಸಮಸ್ಯೆಯಾಗುವುದರ ಜೊತೆಗೆ ಸಂಬಂಧಿಸಿದ ಅಧಿಕಾರಿ, ವಿಷಯ ನಿರ್ವಾಹಕರು ದಂಡ ಪಾವತಿಸಬೇಕಾಗಬಹುದು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಸಕಾಲ ಯೋಜನೆಯಡಿ ಜಾರಿಯಾಗಿ ಹಲವು ವರ್ಷಗಳೇ ಕಳೆದರು ಇದುವರೆಗೂ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ. ಆದ್ದರಿಂದ ಇನ್ಮುಂದೆ ಸಕಾಲ ನಿರ್ವಹಣೆಗಾಗಿಯೇ ಎಲ್ಲ ಇಲಾಖೆಗಳ ಅಧಿಕಾರಿಗಳು ಒಬ್ಬ ಅಧೀನ ಅಧಿಕಾರಿ ಅಥವಾ ಸಿಬ್ಬಂದಿ ನಿಯೋಜಿಸಿ. ಕಂದಾಯ, ಜಿಪಂನಡಿ ಬರುವ ಎಲ್ಲ ಇಲಾಖೆಗಳು ಅರ್ಜಿಯನ್ನು ಕಡ್ಡಾಯವಾಗಿ ಸ್ವೀಕರಿಸಬೇಕು. ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಯಾವುದೇ ಸೂಕ್ತ ಕಾರಣಗಳಿಲ್ಲದೇ ಅರ್ಜಿ ತಿರಸ್ಕಾರ ಮಾಡುವಂತಿಲ್ಲ. ಸಕಾಲದಲ್ಲಿ ಬರಿ ಅರ್ಜಿ ವಿಲೇವಾರಿಗಳಷ್ಟೇ ಅಲ್ಲ, ಬಾಕಿ ಉಳಿದ, ತಿರಸ್ಕರಿಸಿದ ಅರ್ಜಿಗಳ ಸಂಖ್ಯೆಯನ್ನು ಸಹ ಪರಿಗಣಿಸಲಾಗುವುದರಿಂದ ಜಿಲ್ಲೆಯ ಸೂಚ್ಯಂಕದಲ್ಲಿ ಇದು ಋಣಾತ್ಮಕ ಅಂಶವನ್ನು ತೋರಿಸುತ್ತದೆ. ಆದ್ದರಿಂದ ಸಕಾಲ ಅರ್ಜಿಗಳ ವಿಲೇವಾರಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಸಕಾಲದಂತೆ ಸಾರ್ವಜನಿಕರ ಅಹವಾಲು ಸ್ವೀಕಾರಕ್ಕಾಗಿ ಐಪಿಜಿಆರ್‌ಎಸ್‌ ತಂತ್ರಾಂಶವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಇದು ನೇರವಾಗಿ ಸಿಎಂ ಡ್ಯಾಶ್‌ಬೋರ್ಡ್‌ನಲ್ಲಿ ಕಾರ್ಯನಿರ್ವಹಿಸುವುದರಿಂದ ಜಿಲ್ಲೆಯಲ್ಲಿ ಸ್ವೀಕೃತವಾಗುವ ಅರ್ಜಿಗಳು, ಅವುಗಳ ವಿಲೇವಾರಿ ಕುರಿತ ಮಾಹಿತಿಯು ಸಿಎಂ ಗಮನಕ್ಕೆ ಬರುತ್ತದೆ. ಆದ್ದರಿಂದ ಇದರಲ್ಲಿ ಸ್ವೀಕೃತವಾಗುವ ಎಲ್ಲ ಅರ್ಜಿಗಳಿಗೆ ಸೂಕ್ತ ಹಿಂಬರಹದೊಂದಿಗೆ ಅರ್ಜಿಯನ್ನು ಸಂಬಂಧಿ ಸಿದ ಇಲಾಖೆಗೆ ವರ್ಗಾಯಿಸಿ. ಸಕಾಲದಂತೆ ಕಾಲಮಿತಿಯೊಳಗೆ ಕಾರ್ಯನಿರ್ವಹಿಸಿ, ಮುಂದಿನ ಮಾಹೆಯಲ್ಲಿ ಸಕಾಲ ಹಾಗೂ ಐಜಿಪಿಆರ್‌ಎಸ್‌ ಕುರಿತು ಒಂದು ಕಾರ್ಯಾಗಾರ ಆಯೋಜಿಸಲಾಗುತ್ತಿದ್ದು, ಅಷ್ಟರೊಳಗೆ ಸಕಾಲ ನಿರ್ವಹಣೆಗೆ ಎಲ್ಲ ಇಲಾಖೆಗಳು ಸಿಬ್ಬಂದಿ ನಿಯೋಜಿಸಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಸಮೀರ್‌ ಮುಲ್ಲಾ, ಎಸಿ ಬಸವಣಪ್ಪ ಕಲಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಾಣೇಶ, ಸಕಾಲ ಕನ್ಸಲ್ಟೆಂಟ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.