ವೀರ ಯೋಧರನ್ನು ನಿತ್ಯವೂ ಸ್ಮರಿಸಿ: ಮೇಟಿ
ನಾವೆಲ್ಲ ಅವರನ್ನು ನಿತ್ಯವೂ ಸ್ಮರಿಸಬೇಕು. ಅವರ ಸೇವೆ ಮರೆಯಲಾಗದು
Team Udayavani, Jul 27, 2022, 6:19 PM IST
ಬಾಗಲಕೋಟೆ: ದೇಶ ರಕ್ಷಣೆಗಾಗಿ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರಯೋಧರ ಬಲಿದಾನ ಮತ್ತು ಅವರ ಕುಟುಂಬದ ತ್ಯಾಗಕ್ಕೆ ಭಾರತೀಯರೆಲ್ಲರೂ ಸದಾ ಋಣಿಗಳು ಎಂದು ಮಾಜಿ ಸಚಿವ ಎಚ್.ವೈ. ಮೇಟಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಗಡಿಯಲ್ಲಿ ಸೈನಿಕರು ತಮ್ಮ ಜೀವದ ಹಂಗು ತೊರೆದು, ನಮ್ಮೆಲ್ಲರ ರಕ್ಷಣೆ ಮಾಡುತ್ತಾರೆ. ನಾವೆಲ್ಲ ಅವರನ್ನು ನಿತ್ಯವೂ ಸ್ಮರಿಸಬೇಕು. ಅವರ ಸೇವೆ ಮರೆಯಲಾಗದು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಹದ್ಲಿ ಮಾತನಾಡಿ, ಪಾಕಿಸ್ತಾನವನ್ನು ಸದೆಬಡಿದು ಕಾರ್ಗಿಲ್ನಲ್ಲಿ ಸಂಭ್ರಮದ ವಿಜಯಪತಾಕೆ ಹಾರಿಸಿದ ಸ್ಮರಣೀಯ ದಿನ. ನಮ್ಮ ದೇಶದ ಸೈನಿಕರು ತಮ್ಮ ಶೌರ್ಯ, ಸಾಹಸವನ್ನು ಮೆರೆದ ದಿನ. ಈ ಹೋರಾಟದಲ್ಲಿ ಮಡಿದು ಹುತಾತ್ಮರಾದ ನಮ್ಮ ಜಿಲ್ಲೆಯ ಯೋಧ ಶಿವಬಸಯ್ಯ ಕುಲಕರ್ಣಿ ಅವರು ನಮ್ಮ ಹೆಮ್ಮೆ. ಕಾರ್ಗಿಲ್ ಯುದ್ಧದಲ್ಲಿ ತನ್ನೆರಡು ಕೈಕಾಲು ಕಳೆದುಕೊಂಡ ವೀರ ಯೋಧ ರಂಗಪ್ಪ ಆಲೂರ ನಮ್ಮ ಮಧ್ಯೆಯೇ ಇರುವುದು ಮರೆಯಲಾಗದ ಅನುಭವ ಎಂದರು.
ಜಿಲ್ಲಾ ಮಾಧ್ಯಮ ವಕ್ತಾರ ಸಿಕಂದರ ಅಥಣಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಬ್ಲಾಕ್ ಅಧ್ಯಕ್ಷ ರಜಾಕ ಬೆಣೂರ, ಹಾಜಿಸಾಬ ದಂಡಿನ, ಚೆನ್ನವೀರ ಅಂಗಡಿ, ಬಾಬು ಇಟಗಿ, ಪ್ರೇಮನಾಥ ಗರಸಂಗಿ, ಮಲ್ಲು ಲಮಾಣಿ, ರೇಣುಕಾ ನ್ಯಾಮಗೌಡ, ಶೈಲಾ ಪಾಟೀಲ, ರೇಣುಕಾ ನಾರಾಯಣಕರ, ಜಮೇಲಾ ಮನಿಯಾರ, ಜೈಬುನಿ ಇಲಕಲ್ಲ, ಶಮಶಾದ ಗೋಡೆಸವಾರ, ಇಬ್ರಾಹಿಂ ಕಲಾದಗಿ, ಶಫೀಕ ದೊಡಕಟ್ಟಿ, ರಮೇಶ ಕೋಳಾರ, ಶಬ್ಬೀರ ನದಾಪ, ಅಮೀನಸಾಬ ರಕ್ಕಸಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.