ಮಹಿಳೆಯರು ಪ್ರಶ್ನೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು: ಉಮಾಶ್ರೀ

ಜಾತಿ ಧರ್ಮಗಳು ಮುಖ್ಯವಾದರೆ ದೇಶದ ಅಭಿವೃದ್ಧಿ ಕುಂಠಿತ

Team Udayavani, Jul 27, 2022, 7:16 PM IST

1-asdsdsa

ರಬಕವಿ-ಬನಹಟ್ಟಿ: ಮಹಿಳೆಯರು ತಮ್ಮ ಹಕ್ಕುಗಳ ಮೊಟಕುಗೊಳಿಸುವ ನಿಟ್ಟಿನಲ್ಲಿ ನಾವು ಹೋರಾಡಬೇಕಾಗಿದೆ ಮತ್ತು ಹೆಚ್ಚಿನ ಹಕ್ಕುಗಳಿಗೆ ಮಹಿಳೆಯರು ಬೇಡಿಕೆಯನ್ನು ಸಲ್ಲಿಸಬೇಕಾಗಿದೆ. ಮಹಿಳೆಯರು ಪ್ರಶ್ನೆ ಮಾಡುವ ಮನೋಭಾವನೆಯನ್ನು ಬೆಳೆಸಿಕೊಳ್ಳದೆ ಹೋದರೆ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

ಬನಹಟ್ಟಿಯ ಎಸ್‌ಟಿಸಿ ಕಾಲೇಜಿನ ಮಹಿಳಾ ವೇದಿಕೆಯ ಆಶ್ರಯದಲ್ಲಿ ನಡೆದ ಸಮಾಜದಲ್ಲಿಯ ಮಹಿಳೆ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ,ಸೃಷ್ಟಿಯ ನಿಯಮದಲ್ಲಿ ಪುರುಷ ಮತ್ತು ಮಹಿಳೆಯರು ಸಮಾನರು. ಆದರೂ ಮಹಿಳೆ ಶೋಷಣೆ ಮತ್ತು ತುಳಿತಕ್ಕೆ ಒಳಗಾಗುತ್ತಿದ್ದಾಳೆ. ಮೂಢ ನಂಬಿಕೆ, ಧಾರ್ಮಿಕ, ಸಂಪ್ರದಾಯಿಕ ಆಚರಣೆಯಿಂದಾಗಿ ಮಹಿಳೆ ತೊಂದರೆಯನ್ನು ಅನುಭವಿಸುತ್ತಿದ್ದಾಳೆ. ಮಹಿಳೆಯರ ಮೇಲೆ ಕಟ್ಟು ನಿಟ್ಟಿನ ಕ್ರಮಗಳನ್ನು ಹಾಕದೆ ಅವಳನ್ನು ಸಮಾನವಾಗಿ ಗುರುತಿಸಬೇಕಾಗಿದೆ. ಶಿಕ್ಷಣದಿಂದ ಮಹಿಳೆ ವಂಚಿರಾಗಬಾರದು. ಕೇವಲ ಪ್ರಮಾಣ ಪತ್ರಕ್ಕಾಗಿ ಶಿಕ್ಷಣ ಪಡೆಯದೆ ಜೀವನಾನುಭವದ ವಿದ್ಯೆ, ಸಮಾಜ ಮುಖಿಯಾಗಿ ಚಿಂತನೆ ಮಾಡುವ ಸಾಮರ್ಥ್ಯವನ್ನು ಮಹಿಳೆಯರು ಬೆಳೆಸಿಕೊಳ್ಳಬೇಕು. ದೇಶವನ್ನು ಬದಲಾಯಿಸಲು ಮಹಿಳೆಯರಿಂದ ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಗಮನ ನೀಡಬೇಕು ಸಮಾಜದಲ್ಲಿ ಮಹಿಳೆಯರ ಪರವಾಗಿರುವ ಮನಸ್ಸುಗಳು ಇದ್ದರೆ ಮಾತ್ರ ಮಹಿಳೆ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಡಾ.ರೇಶ್ಮಾ ಗಜಾಕೋಶ ಮತ್ತು ರಶ್ಮಿ ಕೊಕಟನೂರ ಮಾತನಾಡಿದರು.ವೇದಿಕೆಯ ಮೇಲೆ ಪ್ರೊ.ಗೀತಾ ಸಜ್ಜನ, ಶೋಭಾ ಪಿಟಗಿ, ಶ್ವೇತಾ ಮಠದ ಇದ್ದರು.ಮಧು ಗುರುವ ಪ್ರಾರ್ಥಿಸಿದರು. ಕಾವೇರಿ ಜಗದಾಳ ಸ್ವಾಗತಿಸಿದರು. ಆರತಿ ಅಡವಿತೋಟ ನಿರೂಪಿಸಿದರು. ಲಕ್ಷ್ಮಿ ಖವಾಸಿ ವಂದಿಸಿದರು.ಮಹಾವಿದ್ಯಾಲಯದ ಉಪನ್ಯಾಸಕಿಯರು ಮತ್ತು ವಿದ್ಯಾರ್ಥಿನಿಯರು ಇದ್ದರು.

ಸಿದ್ಧರಾಮಯ್ಯನವರ ಹುಟ್ಟು ಹಬ್ಬದಲ್ಲಿ ಭಾಗವಹಿಸುವೆ

ಸಿದ್ಧರಾಮಯ್ಯನವರು ಈ ದೇಶ ಕಂಡ ಅದ್ಭುತ ರಾಜಕೀಯ ಧುರೀಣರು. ಸಿದ್ಧರಾಮಯ್ಯವರ ಹುಟ್ಟಿದ ಹಬ್ಬ ಒಂದು ಸಂಭ್ರಮ. ಈ ಸಂದರ್ಭದಲ್ಲಿ ಅವರನ್ನು ಪ್ರೀತಿಸುವಂತಹ, ಗೌರವಿಸುವಂತಹ ಮತ್ತು ಅವರ ನಿಲವುಗಳನ್ನು, ಆಡಳಿತವನ್ನು ಮೆಚ್ಚುವಂತಹ ಎಲ್ಲ ಜನರು ಕೂಡಿಕೊಂಡು ಮಾಡುವ ಸಂಭ್ರಮವಾಗಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಉಮಾಶ್ರೀ ಅವರು ಎಸ್‌ಟಿಸಿ ಕಾಲೇಜಿನ ಬಳಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.

ಅವರ ಹುಟ್ಟು ಹಬ್ಬದ ಸಂಭ್ರಮದ ಸಾಂಸ್ಕೃತಿಕ ಸಮಿತಿ ಸದಸ್ಯೆಯಾಗಿದ್ದೇನೆ. ಹುಟ್ಟು ಹಬ್ಬದ ಸಂದರ್ಭದ ನಿಮಿತ್ತವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಬಹಳಷ್ಟು ಕಾರ್ಯಗಳನ್ನು ಮಾಡಿ ಬಂದಿದ್ದೇನೆ. ಮಹಿಳಾ ಸಂಘಟನೆಯಲ್ಲೂ ಕೂಡಾ ಜಯಮಾಲಾ, ಲಕ್ಷ್ಮಿ ಹೆಬ್ಬಾಳ್ಕರ್ ಜತೆ ಕೂಡಿಕೊಂಡು ಜಬಾಬ್ದಾರಿಗಳನ್ನು ನಿರ್ವಹಿಸುತ್ತಿದ್ಧೇನೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.