ಇಂದಿನಿಂದ ಸಂತ ಸಾಹಿತ್ಯ ಅಧ್ಯಯನ ಶಿಬಿರ

ಶಿವಯೋಗ ಮಂದಿರದಲ್ಲಿ 5 ದಿನಗಳ ಕಾಲ ಆಯೋಜನೆ ; ಹಲವು ಗೋಷ್ಠಿ; ಸಂತ ಪರಂಪರೆ ಬಗ್ಗೆ ಚರ್ಚೆ

Team Udayavani, Jul 28, 2022, 5:47 PM IST

17

ಬಾದಾಮಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ಹಾಗೂ ಶಿವಯೋಗ ಮಂದಿರದ ಶ್ರೀ ಮದ್ವೀರಶೈವ ಶಿವಯೋಗ ಮಂದಿರ ಸಂಸ್ಥೆ ಸಹಯೋಗದಲ್ಲಿ ಜು.28ರಿಂದ ಆ.1ರವರೆಗೆ 5 ದಿನಗಳ ಕಾಲ ಸಂತ ಸಾಹಿತ್ಯ ಅಧ್ಯಯನ ಶಿಬಿರವನ್ನು ಸುಕ್ಷೇತ್ರ ಶಿವಯೋಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕಮ್ಮಟದ ನಿರ್ದೇಶಕ ಡಾ| ಕರಿಯಪ್ಪ ಮಾಳಿಗೆ ಹೇಳಿದರು.

ಪಟ್ಟಣದ ಕಾನಿಪ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಯೋಗ ಮಂದಿರ ಸಂಸ್ಥೆ ಅಧ್ಯಕ್ಷ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ, ಹೊಸಪೇಟಿ-ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನಮಠದ ಶ್ರೀ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸುವರು.

ಹಿರಿಯ ಸಾಹಿತಿ ಪ್ರೊ| ಕೆ.ಜಿ. ನಾಗರಾಜಪ್ಪ ರಾಜ್ಯಮಟ್ಟದ ಶಿಬಿರ ಉದ್ಘಾಟಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಬಿ.ವಿ. ವಸಂತಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಕಮ್ಮಟದ ಡಾ| ಕರಿಯಪ್ಪ ಮಾಳಿಗೆ, ಡಾ| ಎ. ರಘುರಾಂ, ಡಾ| ಶೀಲಾದಾಸ್‌ ಹಾಗೂ ಸದಸ್ಯ ಸಂಚಾಲಕರಾಗಿ ಡಾ| ಬಿ.ಎಂ. ಶರಭೇಂದ್ರಸ್ವಾಮಿ, ಮಾರುತಿ ಕಟ್ಟಿಮನಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್‌ ಕರಿಯಪ್ಪ ಎನ್‌. ಉಪಸ್ಥಿತರಿರುವರು. ನಿರ್ದೇಶಕರಾಗಿ ಮೊದಲನೇ ದಿನ “ಕರ್ನಾಟಕದ ಸಂತರು’ ವಿಷಯ ಕುರಿತು ಡಾ| ಬಸವರಾಜ ಕೊಡಗುಂಟಿ, “ಭಾರತದ ಸಂತರು 1′ ಬಗ್ಗೆ ಅರುಣಕುಮಾರ್‌ ಬಿ.ವಿ ಹಾಗೂ ಸಂತರ ಬಗ್ಗೆ ಬಂದಿರುವ ಸಾಹಿತ್ಯ ಕುರಿತು ಡಾ| ಎಫ್‌.ಟಿ. ಹಳ್ಳಿಕೇರಿ ಮಾತನಾಡಲಿದ್ದಾರೆ ಎಂದರು.

ಎರಡನೇ ದಿನದ ಗೋಷ್ಠಿಗಳಲ್ಲಿ ಸಂತರು ಬರೆದಿರುವ ಸಾಹಿತ್ಯ ಕುರಿತು ಡಾ| ಬಿ. ಗಂಗಾಧರ, ಉತ್ತರ ಕರ್ನಾಟಕದಲ್ಲಿ ಸಂತ ಪರಂಪರೆ ಬಗ್ಗೆ ಡಾ| ವಾಲಿ.ಎ.ಸಿ, ಕರ್ನಾಟಕದ ಬಯಲು ಸೀಮೆಯಲ್ಲಿ ಸಂತ ಪರಂಪರೆ ಬಗ್ಗೆ ಡಾ| ಮೀರಾಸಾಬಿಹಳ್ಳಿ ಶಿವಣ್ಣ ಮಾತನಾಡಲಿದ್ದಾರೆ. ಮೂರನೇ ದಿನದ ಗೋಷ್ಠಿಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ಸಂತ ಸಾಹಿತ್ಯ ಕುರಿತು ಡಾ| ಕಾತ್ಯಾಯಿನಿ ಕುಂಜಿಬೆಟ್ಟು, ಕಲ್ಯಾಣ ಕರ್ನಾಟಕದಲ್ಲಿ ಸಂತ ಪರಂಪರೆ ಬಗ್ಗೆ ಡಾ| ಅಮರೇಶ ನುಗಡೋಣಿ, ಶಿವಯೋಗ ಮಂದಿರ ಸಂಸ್ಥೆ ಪರಂಪರೆ ಕುರಿತು ಡಾ| ಜಿ.ಜಿ. ಹಿರೇಮಠ ವಿಚಾರ ಮಂಡಿಸಲಿದ್ದಾರೆ. ಇವುಗಳ ಜೊತೆಗೆ ವಿವಿಧ ವಿಷಯಗಳ ಬಗ್ಗೆ ಶಿಬಿರಾರ್ಥಿಗಳಿಂದ ಪ್ರಬಂಧ ಮಂಡನೆ-ಚರ್ಚೆ ನಡೆಯಲಿದೆ. ಕಮ್ಮಟದ ನಿರ್ದೇಶಕರು ಶಿಬಿರಾರ್ಥಿಗಳಿಗೆ ಪ್ರಾಯೋಗಿಕ ತರಗತಿ ನಡೆಸಲಿದ್ದಾರೆ ಎಂದರು.

ನಾಲ್ಕನೇ ದಿನದ ಗೋಷ್ಠಿಗಳಲ್ಲಿ ಮಲೆನಾಡು ಕರ್ನಾಟಕದ ಸಂತ ಪರಂಪರೆ ಕುರಿತು ಜಿ.ಬಿ. ಚನ್ನೇಶ್‌ ಹೊನ್ನಾಳಿ, ಸಿದ್ಧ, ನಾಥ, ಜೋಗಿ- ಪರಂಪರೆ ಕುರಿತು ಕೆಳಗಿನಮನಿ, ಅವಧೂತ, ಆರೂಢ ಪರಂಪರೆ ಕುರಿತು ಡಾ| ಕರಿಯಪ್ಪ ಮಾಳಿಗೆ, ಸೂಫಿಗಳು, ಶರಣರು ಕುರಿತು ಡಾ| ಎ. ರಘುರಾಂ ವಿಚಾರ ಮಂಡಿಸಲಿದ್ದಾರೆ. ಐದನೇ ದಿನದ ಗೋಷ್ಠಿಗಳಲ್ಲಿ ದಾಸರು, ತತ್ವಪದಕಾರರು ವಿಷಯದ ಬಗ್ಗೆ ಡಾ| ಶೀಲಾದಾಸ್‌, ದಕ್ಷಿಣ ಕರ್ನಾಟಕದಲ್ಲಿ ಸಂತ ಪರಂಪರೆ ಕುರಿತು ಡಾ| ಮೈಲಹಳ್ಳಿ ರೇವಣ್ಣ ಅವರು ವಿಚಾರ ಮಂಡಿಸಲಿದ್ದಾರೆ.

ನಾಲ್ಕು ದಿನಗಳು ಶಿಬಿರಾರ್ಥಿಗಳಿಗೆ ಯೋಗ-ಧ್ಯಾನ ಕುರಿತು ಯೋಗ ತರಬೇತುದಾರ ಕಾರ್ತಿಕ್‌ ಬೆಲ್ಲದ್‌ ತರಬೇತಿ ನೀಡಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಡಾ| ರಘುರಾಮ, ಕುಮಾರ ಯಡಪ್ಪನವರ, ಸೈಯದ ಜಾವೇದ್‌ ಇತರರಿದ್ದರು. ಆ.1ರಂದು ಸಮಾರೋಪ ಆ.1ರಂದು ಮಧ್ಯಾಹ್ನ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಿವಯೋಗಮಂದಿರ ಸಂಸ್ಥೆ ಉಪಾಧ್ಯಕ್ಷ ಶ್ರೀ ಸದಾಶಿವ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದು, ಡಾ| ಮೈಲಹಳ್ಳಿ ರೇವಣ್ಣ ಸಮಾರೋಪ ನುಡಿಯಾಡಲಿದ್ದಾರೆ.

ಈ ಸಂದರ್ಭದಲ್ಲಿ ಡಾ| ಕರಿಯಪ್ಪ ಮಾಳಿಗೆ, ಡಾ| ಎ. ರಘುರಾಂ, ಡಾ| ಶೀಲಾದಾಸ್‌, ಸದಸ್ಯ ಸಂಚಾಲಕ ಡಾ| ಬಿ.ಎಂ. ಶರಭೇಂದ್ರಸ್ವಾಮಿ, ಮಾರುತಿ ಕಟ್ಟಿಮನಿ, ಅಕಾಡೆಮಿ ರಿಜಿಸ್ಟ್ರಾರ್‌ ಕರಿಯಪ್ಪ ಎನ್‌. ಉಪಸ್ಥಿತರಿರಲಿದ್ದಾರೆ. ಅಕಾಡೆಮಿ ಅಧ್ಯಕ್ಷ ಡಾ| ಬಿ.ವಿ. ವಸಂತಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಮ್ಮಟದ ನಿರ್ದೇಶಕ ಡಾ| ಕರಿಯಪ್ಪ ಮಾಳಿಗೆ ತಿಳಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.