ಜು.29ರಂದು ರಾಸಾಯನಿಕ ವಿಪತ್ತು ಕುರಿತು ಅಣಕು ಪ್ರದರ್ಶನ
ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ನಿಗಾವಹಿಸಬೇಕು
Team Udayavani, Jul 28, 2022, 6:29 PM IST
ಚಿಕ್ಕಬಳ್ಳಾಪುರ: ರಾಸಾಯನಿಕ ವಿಪತ್ತು ನಿರ್ವಹಣೆಯ ಕುರಿತು ಜಿಲ್ಲೆಯಲ್ಲಿ ಜು.29ರಂದು ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಬಳಿ ಇರುವ ಯುಎಸ್ಕೆ, ಎಲ್ಪಿಜಿ ಪ್ರೈ.ಲಿ. ಆವರಣದಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾ ಧಿಕಾರಿ ಎಚ್.ಅಮರೇಶ್ ತಿಳಿಸಿದರು.
ಆನ್ಲೈನ್ ಮೂಲಕ ಬೆಂಗಳೂರಿನಿಂದ ನಡೆದ ರಾಜ್ಯ ಮಟ್ಟದ ರಾಸಾಯನಿಕ ವಿಪತ್ತು ನಿರ್ವಹಣೆ ಕುರಿತ ವಿಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿ, ರಾಜ್ಯ ಮಟ್ಟದ ಅ ಧಿಕಾರಿಗಳಿಂದ ನಿರ್ದೇಶನಗಳನ್ನು ಆಲಿಸಿ, ನಂತರ ನಗರ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿ ಕಾರಿಗಳಿಗೆ ನಿರ್ದೇಶನ ನೀಡುತ್ತಾ ಮಾತನಾಡಿದರು.
ರಾಸಾಯನಿಕ ದುರಂತಗಳು ಜಿಲ್ಲೆಯಲ್ಲಿ ಜರುಗದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಈ ರೀತಿಯ ಘಟನೆಗಳು ಆಕಸ್ಮಿಕವಾಗಿ ಜರುಗಿದಾಗ ಯಾವ ಇಲಾಖೆಗಳ ಪಾತ್ರ ಏನು? ಸಾರ್ವಜನಿಕರ ಪಾತ್ರ ಏನು? ಎಂಬುದನ್ನು ತಿಳಿದುಕೊಂಡರೆ, ಇಂತಹ ವಿಪತ್ತುಗಳಿಂದಾಗುವ ದೊಡ್ಡ ಅನಾಹುತಗಳನ್ನು ತಡೆಯಬಹುದಾಗಿದೆ ಎಂದು ಹೇಳಿದರು.
ಅಣಕು ಪ್ರದರ್ಶನ: ಈ ವಿಷಯಗಳನ್ನು ತಿಳಿದುಕೊಳ್ಳಲು ಜಿಲ್ಲಾಡಳಿತ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಖಾಸಗಿ ಕಾರ್ಖಾನೆಗಳ ಸಹಯೋಗದಲ್ಲಿ ರಾಸಾಯನಿಕ ವಿಪತ್ತು ನಿರ್ವಹಣೆ ಕುರಿತ ಅಣಕು ಪ್ರದರ್ಶನವನ್ನು ಏರ್ಪಡಿಸಲು ಸರ್ಕಾರ ನಿರ್ದೇಶನ ನೀಡಿದೆ. ಅದರಂತೆ ಜಿಲ್ಲೆಯಲ್ಲಿ ಜು.29ರಂದು ಬೆಳಗ್ಗೆ 9 ಗಂಟೆಗೆ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಬಳಿ ಇರುವ ಯುಎಸ್ಕೆ, ಎಲ್ ಪಿಜಿ ಪ್ರೈ. ಲಿ. ಆವರಣದಲ್ಲಿ ರಾಸಾಯನಿಕ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿಪತ್ತು ನಿರ್ವಹಣೆ ಕುರಿತು ತಿಳಿಸಿ: ಈ ಪ್ರದರ್ಶನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ, ತಮ್ಮ ಪಾತ್ರಗಳನ್ನು ಅರಿತುಕೊಂಡು, ತಮ್ಮ ಅಧೀನ ಅಧಿಕಾರಿಗಳು, ಸಿಬ್ಬಂದಿಗೆ ರಾಸಾಯನಿಕ ವಿಪತ್ತು ನಿರ್ವಹಣೆಯ ಕುರಿತು ತಿಳಿಸಿಕೊಡಬೇಕು. ಜೊತೆಗೆ ಇಂತಹ ವಿಪತ್ತು ನಡೆಯದಂತೆ ಕ್ರಮವಹಿಸಬೇಕು. ಈ ರೀತಿಯ ಘಟನೆಗಳು ಆಕಸ್ಮಿಕವಾಗಿ ಸಂಭವಿಸಿದರೆ ಅಂತಹ ಸಂದರ್ಭಗಳಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ನಿಗಾವಹಿಸಬೇಕು ಎಂದು ಹೇಳಿದರು.
ಈ ವೇಳೆ ಇಂಡಸ್ಟ್ರಿಯಲ್ ಸೇಫ್ಟಿ ಆ್ಯಂಡ್ ಹೆಲ್ತ್ (ಫ್ಯಾಕ್ಟ್ರಿಸ್ ಅಂಡ್ ಬಾಯ್ಲರ್ಸ್) ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಅವರು ಅಣಕು ಪ್ರದರ್ಶನ ಆಯೋಜಿಸುವ ಸಂಬಂಧ ಕೈಗೊಳ್ಳ ಬೇಕಾದ ಮುನ್ನೆಚ್ಚರಿಕಾ ವಿಧಾನಗಳ (ಪಿಪಿಟಿ ಪ್ರಸಂಟೇಷನ್ ಮೂಲಕ )ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿಕೊಟ್ಟರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಡಿ.ವೈ.ಎಸ್.ಪಿ ವಾಸುದೇವ್, ಶಿಡ್ಲಘಟ್ಟ ತಾಲೂಕಿನ ತಹಶೀಲ್ದಾರ್ ರಾಜೀವ್, ಜಿಲ್ಲಾ ಪರಿಸರ ಅಧಿಕಾರಿ ಸಿದ್ದೇಶ್ವರಪ್ಪ ಸೇರಿ ವಿವಿಧ ಇಲಾಖೆ ಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್ ಗುಂಡೂರಾವ್
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ratan Tata: ಕಳಚಿದ ಕೈಗಾರಿಕೆ ಕ್ಷೇತ್ರದ ಬೃಹತ್ ಕೊಂಡಿ: ಶಾಸಕ ಮೇಟಿ
Navratri Special: ಪ್ರೀತಿ ಒಂದೇ ಸಾಕು ಒಳಗಿನ ಭೋರ್ಗರೆವ ಯೋಚನೆಗಳ ತಣಿಸಲು
Ratan Tata: ಸಕಲ ಸರಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ… :ಮಹಾ ಸಿಎಂ
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Haryana Election: ಹರಿಯಾಣ ಬಿಜೆಪಿ ಗೆಲುವಿಗೆ ಶ್ರಮಿಸಿದ ವಾರ್ರೂಂನ “ತ್ರಿಶಕ್ತಿ’ ನಾಯಕರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.