ಪ್ರವೀಣ್ ಹತ್ಯೆ ಖಂಡಿಸಿ ಹುಣಸೂರಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ


Team Udayavani, Jul 29, 2022, 9:36 AM IST

1

ಹುಣಸೂರು: ಮಂಗಳೂರು ಜಿಲ್ಲಾ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಗುರುವಾರದಂದು ಪ್ರತಿಭಟನೆ ನಡೆಸಿದರು.

ನಗರದ ಸಂವಿದಾನ ಸರ್ಕಲ್‌ನಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಬಂಧಿಸಬೇಕು. ಇತ್ತೀಚೆಗೆ ಮೂವರು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಹತ್ಯೆಗೈದವರನ್ನು ಗಲ್ಲಿಗೇರಿಸಬೇಕು. ಉತ್ತರ ಪ್ರದೇಶ ಮಾದರಿ ಕಠಿಣ ಕಾನೂನು ಜಾರಿಗೊಳಿಸಬೇಕು. ಪಿಎಫ್.ಐ, ಎಸ್.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆಗಳನ್ನು ನಿಷೇಧಿಸಬೇಕೆಂಬ ಘೋಷಣೆ ಕೂಗಿದರು.

ನಂತರ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದ ಕೊಪ್ಪಲು ನಾಗಣ್ಣ, ರಾಜ್ಯ ಮತ್ತು ರಾಷ್ಟ್ರದಲ್ಲಿ ಹಿಂದೂಗಳ ಹತ್ಯೆ ನಿರಂತರವಾಗಿದ್ದು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ಸಹ ಹಿಂದೂಗಳ ಹತ್ಯೆಗೆ ಮುಕ್ತಿ ಸಿಗುತ್ತಿಲ್ಲ. ಉಗ್ರವಾದ ಹೆಚ್ಚುತ್ತಲೇ ಇದ್ದು ಕಡಿವಾಣ ಹಾಕದಿದ್ದಲ್ಲಿ ಹಿಂದೂ ಯುವಕರಿಗೆ ಉಳಿಗಾಲವಿಲ್ಲ. ಹೀಗಾಗಿ ಯು.ಪಿ. ಮಾದರಿಯ ಕಾನೂನು ಜಾರಿಗೆ ಸರಕಾರ ಗಂಭೀರ ಚಿಂತನೆ ನಡೆಸಬೇಕೆಂದು ಒತ್ತಾಯಿಸಿದರು.

ನಗರ ಅಧ್ಯಕ್ಷ ಹಾಗೂ ಹೂಡ ಅಧ್ಯಕ್ಷ ಗಣೇಶ್‌ ಕುಮಾರ ಸ್ವಾಮಿ ಮಾತನಾಡಿ, ಕಳೆದ ಆರು ತಿಂಗಳಿನಿಂದಾಚೆಗೆ ಹಿಂದೂ ಸಂಘಟನೆಗಳ ಮೂವರ ಹತ್ಯೆಯಾಗಿದ್ದು, ನಮ್ಮ ಸರಕಾರಗಳು ಏನೂ ಮಾಡಲಾಗದೆ ಕೈಕಟ್ಟಿ ಕುಳಿತಿದ್ದು, ದುಶ್ಕೃತ್ಯ ಎಸಗಿರುವವರನ್ನು ಬಂಧಿಸುವುದರೊಂದಿಗೆ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.

ನಗರಸಭಾ ಸದಸ್ಯ ವಿವೇಕಾನಂದ ಮಾತನಾಡಿ, ಸರಣಿ ಮಾದರಿಯಲ್ಲಿ ಅಮಾಯಕ ಹಿಂದೂ ಯುವಕರ ಹತ್ಯೆ ನಡೆಯುತ್ತಲೇ ಇದ್ದು, ನಮ್ಮದೇ ಸರಕಾರವಿದ್ದರೂ ಏನೂ ಮಾಡಲಾಗದ ಸ್ಥಿತಿಗೆ ತಲುಪಿದ್ದೇವೆಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ರಮೇಶ್, ಶ್ರೀನಿವಾಸ್, ಅರುಣ್ ಚೌವಾಣ್ಹ್, ನಗರ ಮಹಿಳಾ ಅಧ್ಯಕ್ಷೆ ಕಮಲ ಪ್ರಕಾಶ್, ತಂಬಾಕು ಮಂಡಳಿ ಸದಸ್ಯ ದಿನೇಶ್, ಭೂ ನ್ಯಾಯಾ ಮಂಡಳಿ ಸದಸ್ಯ ಗಣಪತಿ, ಮುಖಂಡರಾದ ನಾಗರಾಜ ಮಲ್ಲಾಡಿ, ಹನಗೋಡು ಮಂಜುನಾಥ್, ಹರವೆ ಮಹೇಶ್, ನಾಗೇಂದ್ರ, ಗೋವಿಂದ ನಾಯಕ್, ನಾರಾಯಣ, ರವೀಶ್, ಸುರೇಗೌಡ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.