ಭೂಗತ ವಿದ್ಯುತ್‌ ಕೇಬಲ್‌ ಯೋಜನೆ ಪ್ರಸ್ತಾವನೆ

ಹೆಸ್ಕಾಂ ಸಹಯೋಗದಲ್ಲಿ ವಿದ್ಯುತ್‌ ಮಹೋತ್ಸವ ; ರೈತರ ಪಂಪ್‌ಸೆಟ್‌ಗಳ ಸಮಸ್ಯೆಗೆ ತ್ವರಿತ ಸ್ಪಂದನೆ: ಬೆಲ್ಲದ

Team Udayavani, Jul 30, 2022, 3:58 PM IST

15

ಧಾರವಾಡ: ಹು-ಧಾ ಭೂ ಅಂತರ್ಗತ ವಿದ್ಯುತ್‌ ಕೇಬಲ್‌ ಅಳವಡಿಸುವ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರ ಅಗತ್ಯ ಅನುದಾನ ನೀಡಲಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಕವಿಸಂನಲ್ಲಿ ಭಾರತ ಸರ್ಕಾರದ ವಿದ್ಯುತ್‌ ಸಚಿವಾಲಯ, ಇಂಧನ ಇಲಾಖೆ, ಜಿಲ್ಲಾಡಳಿತ, ಕರ್ನಾಟಕ ವಿದ್ಯುತ್ಛಕ್ತಿ ಪ್ರಸರಣ ನಿಗಮ ನಿಯಮಿತ ಹಾಗೂ ಹೆಸ್ಕಾಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್‌ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ವಿದ್ಯುತ್‌ ಪರಿವರ್ತಕ ಬ್ಯಾಂಕುಗಳ ಸ್ಥಾಪನೆ ಮೂಲಕ ರೈತರ ಪಂಪ್‌ಸೆಟ್‌ಗಳ ಸಮಸ್ಯೆಗೆ ತ್ವರಿತ ಸ್ಪಂದನೆ ಸಾಧ್ಯವಾಗಿದೆ. ರಸ್ತೆ, ಒಳಚರಂಡಿ, ಮನೆ ಮನೆಗೆ ಕುಡಿಯುವ ನೀರು ಪೂರೈಸುವ ನಳಗಳ ಜೋಡಣೆ ಮೊದಲಾದ ಮೂಲ ಸೌಕರ್ಯಗಳ ಕಾರ್ಯ ದೇಶಾದ್ಯಂತ ಭರದಿಂದ ನಡೆಯುತ್ತಿವೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಈವರೆಗೆ ವಿದ್ಯುತ್‌ ಸಂಪರ್ಕವೇ ಇಲ್ಲದಿದ್ದ 30 ಹಳ್ಳಿಗಳಿಗೆ ವಿದ್ಯುತ್‌ ಪೂರೈಸಲಾಗುತ್ತಿದೆ. ಸೌಭಾಗ್ಯ ಯೋಜನೆಯಡಿ ಹೆಚ್ಚು ದಾಖಲೆಗಳನ್ನು ಗ್ರಾಹಕರಿಂದ ಪಡೆಯದೇ ಆಧಾರ್‌ ಕಾರ್ಡ್‌ ಪಡೆದು ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾರ್ಯ ಜನ ಮನ್ನಣೆಗಳಿಸಿದೆ ಎಂದರು.

ಕಲ್ಲಿದ್ದಲು ಗಣಿಗಳ ಸಮರ್ಪಕ ಬಳಕೆಯಿಂದ ದೇಶದಲ್ಲಿ ವಿದ್ಯುತ್‌ ಸ್ವಾವಲಂಬನೆ ಸಾಧ್ಯವಾಗಿದೆ. ಕಲ್ಲಿದ್ದಲು ಗಣಿಗಳ ಹರಾಜಿನಲ್ಲಿ ನಡೆದ ಅಕ್ರಮ ತಡೆದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ವಿದ್ಯುತ್‌ ಸ್ವಾವಲಂಬಿಯಾಗಿಸಲು ಸಾಧ್ಯವಾಗಿದೆ. ದೇಶದಲ್ಲಿ ಹೇರಳವಾಗಿ ಕಲ್ಲಿದ್ದಲು ಸಂಪನ್ಮೂಲವಿದ್ದು, ಈ ನೈಸರ್ಗಿಕ ಸಂಪನ್ಮೂಲ ಬಳಸಿಕೊಂಡು ನೆರೆ ದೇಶಗಳಿಗೂ ವಿದ್ಯುತ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಭಾರತಿ ಡಿ. ಮಾತನಾಡಿ, ನೀರಾವರಿ ಪಂಪ್‌ಸೆಟ್‌ ಹೊಂದಿರುವ ರೈತರು ಎದುರಿಸುತ್ತಿದ್ದ ವಿದ್ಯುತ್‌ ಪರಿವರ್ತಕಗಳ ಸಮಸ್ಯೆ ನಿವಾರಿಸಲು ಟಿ.ಸಿ.ಬ್ಯಾಂಕ್‌ಗಳ ಮೂಲಕ ಕೃಷಿಕರಿಗೆ ತ್ವರಿತ ಸ್ಪಂದನೆ ನೀಡಲಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಹೆಸ್ಕಾಂ ಅಧಿಕಾರಿಗಳು ಪ್ರತಿ ತಿಂಗಳು ಮೂರನೇ ಶನಿವಾರ ಭೇಟಿ ನೀಡಿ ವಿದ್ಯುತ್‌ ಅದಾಲತ್‌ ಮೂಲಕ ಜನಸ್ಪಂದನೆ ನೀಡಿ ಇಂಧನ ಇಲಾಖೆಯನ್ನು ಗ್ರಾಹಕ ಹಾಗೂ ಜನಸ್ನೇಹಿಯನ್ನಾಗಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಹೆಸ್ಕಾಂ ಅಧಿಕಾರೇತರ ನಿರ್ದೇಶಕ ಸುನೀಲ ಸರೂರ ಮಾತನಾಡಿದರು.

ಪ್ರಕಾಶ ಪಾಟೀಲ, ರಮೇಶ ಬೆಂಡಿಗೇರಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ವಿನಾಯಕ ಪಾಲನಕರ್‌, ವೆಂಕಟರೆಡ್ಡಿ, ವಿಚಕ್ಷಣಾ ದಳದ ಎಸ್‌.ಪಿ.ಶಂಕರ ಮಾರಿಹಾಳ ಇದ್ದರು.

ಕಿರುಚಿತ್ರಗಳ ಪ್ರದರ್ಶನ: ಗ್ರಾಮ ವಿದ್ಯುದೀಕರಣ, ಮನೆಗಳ ವಿದ್ಯುದೀಕರಣ ಜಾಗತಿಕ ಅವಕಾಶಗಳ ಕುರಿತು ಕಿರುಚಿತ್ರ; ಉತ್ಪಾದನೆ ಸಾಮರ್ಥ್ಯ ಹೆಚ್ಚಿಸುವುದು, ಒಂದೇ ರಾಷ್ಟ್ರ ಒಂದೇ ವಿದ್ಯುತ್‌ ಜಾಲ ಸಾಕ್ಷ್ಯಚಿತ್ರ ಪ್ರದರ್ಶನ; ವಿತರಣಾ ಜಾಲ ಬಲಪಡಿಸುವುದು, ನವೀಕರಿಸಬಹುದಾದ ಇಂಧನ ಉತ್ಪಾದನೆ, ಗ್ರಾಹಕರ ಹಕ್ಕುಗಳ ಕುರಿತು ಕಿರುಚಿತ್ರ ಪ್ರದರ್ಶನ; ವಿದ್ಯುತ್‌ ಉಳಿತಾಯ ಹಾಗೂ ಕುಸುಮ ಯೋಜನೆಗಳ ಬಗ್ಗೆ ನುಕ್ಕಡ ನಾಟಕಗಳ ಪ್ರದರ್ಶನ ಹಾಗೂ ಫಲಾನುಭವಿಗಳ ಅನಿಸಿಕೆಗಳು ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.