ಚಿಕ್ಕಬಳ್ಳಾಪುರ: ಚಿನ್ನದ ಸರ ದೋಚಿದ ಕಳ್ಳರು ಜೈಲುಪಾಲು


Team Udayavani, Jul 30, 2022, 7:05 PM IST

ಚಿಕ್ಕಬಳ್ಳಾಪುರ: ಚಿನ್ನದ ಸರ ದೋಚಿದ ಕಳ್ಳರು ಜೈಲುಪಾಲು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ಅಂಗಡಿ ಮುಂಭಾಗದಲ್ಲಿ ಕುಳಿತುಕೊಂಡಿದ್ದ ಮಹಿಳೆಯ ಕತ್ತಿನಿಂದ ಚಿನ್ನದ ಸರವನ್ನು ದೋಚಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಕುಖ್ಯಾತ ಕಳ್ಳರನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಬಂಧಿಸುವುದರಲ್ಲಿ ಯಶಸ್ವಿಯಾಗಿ, ಆರೋಪಿಗಳಿಂದ 5 ಲಕ್ಷ 50 ಸಾವಿರ ರೂ.ಗಳ ಮೌಲ್ಯದ 110 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆಯ ನೆಲಮಂಗಲದ ಇಮ್ರಾನ್ ಪಾಷ ಅಲಿಯಾಸ್ ಬೋಡ್ಕೆ (27), ನೆಲಮಂಗದ ಸಿಕಂದರ್ ಖುರೇಷಿ ಅಲಿಯಾಸ್ ಸಿಕ್ಕು (24) ಹಾಗೂ ಬೆಂಗಳೂರಿನ ಜೆಜೆ ನಗರ (ಗೌರಿಪಾಳ್ಯ) ಶಬರೀಶ್ ಅಲಿಯಾಸ್ ಅಪ್ಪು ಅಪ್ಪಿ (26) ಬಂಧಿತ ಆರೋಪಿಗಳು.

ತಾಲೂಕಿನ ಅಣಕನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ್ ಮಾತನಾಡಿ ,ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಕಾಡಿಗಾನಹಳ್ಳಿ ಗ್ರಾಮದ ವೆಂಕಟಲಕ್ಷ್ಮಮ್ಮ ಎಂಬುವವರು 15.07.2022 ರಂದು ಬೆಳಗ್ಗೆ 9:30 ಗಂಟೆ ಸಮಯದಲ್ಲಿ ಚಿಕ್ಕಬಳ್ಳಾಪುರ ನಗರದ ತನ್ನ ಸಂಬಂಧಿ ಶ್ರೀನಿವಾಸ್ ಅವರ ಅಂಗಡಿಯ ಮುಂಬಾಗದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ತನ್ನ ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ಇದನ್ನೂ ಓದಿ: ಫಾಝಿಲ್ ಹತ್ಯೆ ಪ್ರಕರಣ: ಮತ್ತೆ 16 ಮಂದಿ ಶಂಕಿತರು ಪೊಲೀಸ್ ವಶಕ್ಕೆ

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿ ಚಿಕ್ಕಬಳ್ಳಾಪುರ ನಗರ, ಚಿಂತಾಮಣಿ ನಗರ, ಶಿಡ್ಲಘಟ್ಟ ಗ್ರಾಮಾಂತರ, ದೊಡ್ಡಬೆಳವಂಗಲ ಹಾಗೂ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನದ ಪ್ರಕರಣಗಳು ಖುಲಾಸೆಯಾಗಿದೆ. ಆರೋಪಿಗಳು 5 ಪ್ರಕರಣಗಳಲ್ಲಿ ಭಾಗಿಯಾಗಿದ್ದು ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಇಮ್ರಾನ್ ಪಾಷ ಅಲಿಯಾಸ್ ಬೋಡ್ಕೆ ವಿರುದ್ದ ಈಗಾಗಲೇ 31 ಪ್ರಕರಣಗಳು, ಆರೋಪಿ ಶಬ್ರೀಶ್ ವಿರುದ್ದ 28 ಪ್ರಕರಣಗಳು ಹಾಗೂ ಸಿಕಂದರ್ ವಿರುದ್ದ 02 ಪ್ರಕರಣಗಳು ದಾಖಲಾಗಿರುತ್ತದೆ ಎಂದು ವಿವರಣೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆರೋಪಿಗಳು ಕೊಲೆ, ಸುಲಿಗೆ, ದರೋಡೆ, ಕೊಲೆ ಯತ್ನ, ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದರು.

ಸುದ್ದಿಗೋಷ್ಟಿಯಲ್ಲಿ ಚಿಕ್ಕಬಳ್ಳಾಪುರ ಡಿವೈಎಸ್‍ಪಿ ವಾಸುದೇವ್, ಸಿಪಿಐ ಟಿ.ರಾಜು, ಪಿಎಸ್‍ಐ ಪ್ರದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.