ಹಾಡಹಗಲೇ ಕಳ್ಳರ ಕೈಚಳಕ: ಮನೆ ಬೀಗ ಮುರಿದು ಕುರಿ ಶೆಡ್ ಗಾಗಿ ಸಂಗ್ರಹಿಸಿಟ್ಟ ಹಣವನ್ನೇ ದೋಚಿದರು


Team Udayavani, Jul 30, 2022, 8:01 PM IST

ಹಾಡಹಗಲೇ ಕಳ್ಳರ ಕೈಚಳಕ: ಮನೆ ಬೀಗ ಮುರಿದು ಕುರಿ ಶೆಡ್ ಗಾಗಿ ಸಂಗ್ರಹಿಸಿಟ್ಟ ಹಣವನ್ನೇ ದೋಚಿದರು

ಕೊರಟಗೆರೆ : ಹಾಡ ಹಗಲೇ ಮನೆಯ ಬೀಗ ಒಡೆದು ಮನೆಯಲ್ಲಿದ್ದ 80 ಸಾವಿರ ನಗದು ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳವು ಮಾಡಿದ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ ಬೈಚಾಪುರ ಗ್ರಾಮದ‌ ಬೈಚಾಪುರ ಕ್ರಾಸ್ ನ ವೆಂಕಟಶಾಮಯ್ಯ ಅವರ ಮಗ ನಾಗರಾಜಪ್ಪ ಎಂಬುವರ ಮನೆಯಲ್ಲಿ ಬೀಗ ಮುರಿದ ಕಳ್ಳರು ಕಳ್ಳತನ ನಡೆಸಿದ್ದಾರೆ.

ಕಳ್ಳರು ಪ್ರಮುಖ ರಾಜ್ಯ ಹೆದ್ದಾರಿ ಗೌರಿಬಿದನೂರು-ಬೈರೇನಳ್ಳಿ ಮಾರ್ಗದಿಂದ ತೊಂಡೆಬಾವಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಹೊಂದಿಕೊಂಡಂತಿರುವ ಒಂಟಿ ಮನೆಯಲ್ಲಿ ಕಳ್ಳತನ ಮಾಡಿದ್ದು, ಸಾವಿರಾರು ಜನ ಓಡಾಡುವ ಪ್ರಮುಖ ರಸ್ತೆಯಲ್ಲಿ ಅದು ಹಾಡ ಹಗಲೇ ಕಳ್ಳರು ತಮ್ಮ ಕೈಚಳಕ ತೋರಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮನೆಯ ಕುಟುಂಬಸ್ಥರು ಜಮೀನಿನಲ್ಲಿ ಕೆಲಸಕ್ಕೆಂದು ಹೋಗಿದ್ದು ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೋಡಿ ಮನೆಯ ಬಾಗಿಲ ಬೀಗವನ್ನು ಯಾವುದೋ ಕಬ್ಬಿಣ ಸಲಾಕೆಯಿಂದ ಮೀಟಿ ಒಳ ಹೊಕ್ಕ ಕಳ್ಳರು 80 ಸಾವಿರ ನಗದು ಹಾಗೂ ಇನ್ನಿತರೆ ಸಣ್ಣಪುಟ್ಟ ವಸ್ತುಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಬಾರಾಬಂಕಿ : ಬೈಕ್ ಗಳು ಢಿಕ್ಕಿಯಾದಾಗ ಟ್ರಕ್ ಹರಿದು ಐವರ ಸಾವು

ಕುರಿ ಶೆಡ್ ಮಾಡಲು ಕೂಡಿಟ್ಟ ಹಣ :
ನಾಗರಾಜಪ್ಪ ಅವರ ಮಗ ಬೆಂಗಳೂರಿನಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು ಊರಿನಲ್ಲಿ ಕುರಿ ಶೆಡ್ ಮಾಡಲೆಂದು ಒಂದೊಂದು ರೂಪಾಯಿ ಸೇರಿಸಿ 80 ಸಾವಿರ ಸಂಗ್ರಹಿಸಿ ಇಟ್ಟಿದ್ದರು ಆದರೆ ಅದು ಕಳ್ಳರ ಪಾಲಾಗಿದೆ, ಮತ್ತೊಂದು ಆಶ್ಚರ್ಯಕರ ಸಂಗತಿ ಎಂದರೆ ಮನೆಯಲ್ಲಿದ್ದ ಎರಡು ಬೆಳ್ಳಿ ದೀಪ ಕಂಬ, ಎರಡು ಬೆಳ್ಳಿ ಬಟ್ಟಲು ಒಂದು ಬೆಳ್ಳಿತಟ್ಟೆಯನ್ನು ಕಳ್ಳರು ಬಿಟ್ಟು ಹೋಗಿದ್ದು ಕೇವಲ ಹಣವನ್ನಷ್ಟೇ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜು ಸೇರಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.