![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 31, 2022, 8:16 AM IST
ಬರ್ಮಿಂಗಂ: ಕಾಮನ್ವೆಲ್ತ್ ಗೇಮ್ಸ್ನ ಮಹಿಳೆಯರ 55 ಕೆಜಿ ವಿಭಾಗದಲ್ಲಿ ಭಾರತದ ವೇಟ್ಲಿಫ್ಟರ್ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕವನ್ನು ಗೆದ್ದು ದೇಶಕ್ಕೆ ಕೀರ್ತಿ ತಂದರು. ಇದು ಈ ಬಾರಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ನಾಲ್ಕನೇ ಪದಕ.
ತನ್ನ ಮೊದಲ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಒಟ್ಟು 202 ಕೆಜಿ ಎತ್ತುವ 23 ವರ್ಷದ ಬಿಂದ್ಯಾರಾಣಿ ದೇವಿ, 55 ಕೆಜಿ ವಿಭಾಗದಲ್ಲಿ 116 ಕೆಜಿಯ ಪ್ರಯತ್ನದೊಂದಿಗೆ ಅತ್ಯಧಿಕ ‘ಕ್ಲೀನ್ ಮತ್ತು ಜರ್ಕ್’ ಲಿಫ್ಟ ಮಾಡಿ ಗೇಮ್ಸ್ ದಾಖಲೆಯನ್ನು ಮುರಿದರು.
ಬಿಂದ್ಯಾರಾಣಿಯ ಈ ಯಶಸ್ವಿ ಪ್ರದರ್ಶನದ ಪರಿಣಾಮ ಭಾರತವು ಕಾಮನ್ವೆಲ್ತ್ ಕ್ರೀಡಾಕೂಟದ ಎರಡನೇ ದಿನದಲ್ಲಿ ನಾಲ್ಕು ಪದಕಗಳನ್ನು ಗೆದ್ದಿತು. ಎಲ್ಲಾ ನಾಲ್ಕು ಪದಕಗಳು ವೇಟ್ಲಿಫ್ಟಿಂಗ್ ನಲ್ಲಿ ಬಂದವೆನ್ನುವುದು ವಿಶೇಷ.
ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮೀರಾಬಾಯಿ ಚಾನು ಈ ಬಾರಿಯ ಕೂಟದಲ್ಲಿ ಭಾರತದ ಮೊದಲ ಚಿನ್ನ ಗೆದ್ದರು. 2018ರ ಕ್ರೀಡಾಕೂಟದಲ್ಲೂ ಚಿನ್ನ ಗೆದ್ದಿದ್ದ ಮೀರಾಬಾಯಿ ಮಹಿಳೆಯರ 49 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು.
ಇದನ್ನೂ ಓದಿ:ಸಾವಿತ್ರಿ ಜಿಂದಾಲ್ ಈಗ ಏಷ್ಯಾಕ್ಕೇ ಶ್ರೀಮಂತೆ !ಈವರೆಗೆ ನಂ.1 ಆಗಿದ್ದ ಚೀನದ ಯಾಂಗ್ ಈಗ ನಂ.3
ಅದಕ್ಕೂ ಮೊದಲು ಭಾರತಕ್ಕೆ ಕೂಟದ ಪದಕ ತಂದು ಕೊಟ್ಟಿದ್ದು ಸಂಕೇತ್ ಮಹಾದೇವ್. ಅವರು 55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಗೆದ್ದರು. ಬಳಿಕ 61 ಕೆಜಿ ಪುರುಷರ ವಿಭಾಗದಲ್ಲಿ ಕುಂದಾಪುರದ ಗುರುರಾಜ ಪೂಜಾರಿ ಅವರು ಕಂಚಿನ ಪದಕ ಗೆದ್ದುಕೊಂಡಿದ್ದರು. ಸದ್ಯ ಪದಕ ಪಟ್ಟಿಯಲ್ಲಿ ಭಾರತ ಎಂಟನೇ ಸ್ಥಾನದಲ್ಲಿದೆ.
Congratulations to Bindyarani Devi for winning a Silver medal at CWG, Birmingham. This accomplishment is a manifestation of her tenacity and it has made every Indian very happy. I wish her the very best for her future endeavours. pic.twitter.com/4Z3cgVYZvv
— Narendra Modi (@narendramodi) July 31, 2022
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.