ನಾಗಾಇದಲಾಯಿ ಕೆರೆಯಲಿ ಬಿರುಕು
Team Udayavani, Aug 2, 2022, 6:09 PM IST
ಚಿಂಚೋಳಿ: ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದ ನಾಗಾಇದಲಾಯಿ ಗ್ರಾಮದ ಸಣ್ಣ ನೀರಾವರಿ ಕೆರೆಯ ಬಂಡಿಂಗನಲ್ಲಿ ಬಿರುಕು ಉಂಟಾಗಿ ಕೆರೆ ಒಡೆಯುವ ಸಾಧ್ಯತೆ ಇದೆ. ಸಂಗ್ರಹಣೆಗೊಂಡಿರುವ ನೀರು ಖಾಲಿ ಮಾಡುವ ಕಾರ್ಯ ನಡೆಯುತ್ತಿದೆ. ಕೆರೆ ಕೆಳಭಾಗದ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಶಾಸಕ ಡಾ| ಅವಿನಾಶ ಜಾಧವ್ ತಿಳಿಸಿದರು.
ನಾಗಾಇದಲಾಯಿ ಗ್ರಾಮದ ಸಣ್ಣನೀರಾವರಿ ಕೆರೆ ಸ್ಥಿತಿಗತಿ ಮತ್ತು ದುರಸ್ತಿಕಾರ್ಯ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ 2020ರಲ್ಲಿ ವ್ಯಾಪಕ ಮಳೆ ಸುರಿದ ಪರಿಣಾಮವಾಗಿ ಕೆರೆ ನೀರಿನ ರಭಸಕ್ಕೆ ಒಡೆದು ಹೋಗಿತ್ತು. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ರೈತರ ಬೆಳೆಗಳು ಮತ್ತು ಅನೇಕ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವುದರಿಂದ ಸಣ್ಣ ನೀರಾವರಿ ಕೆರೆ ಸಚಿವ ಜೆ.ಸಿ. ಮಾಧುಸ್ವಾಮಿ ಭೇಟಿ ನೀಡಿ ದುರಸ್ತಿ ಕಾರ್ಯ ಕೈಕೊಳ್ಳುವುದಕ್ಕಾಗಿ ನೈಸರ್ಗಿಕ ವಿಪತ್ತು ನಿರ್ವಹಣೆ ಯೋಜನೆ ಅಡಿ 4ಕೋಟಿ ರೂ. ಮಂಜೂರಿಗೊಳಿಸಿದ್ದರಿಂದ ಕೆರೆಯನ್ನು ದುರಸ್ತಿಗೊಳಿಸಲಾಗಿದೆ ಎಂದರು.
ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ದುರಸ್ತಿ ಕಾರ್ಯ ಪುರ್ಣಗೊಳಿಸಲಾಗಿದೆ. ಕೆರೆ ದುರಸ್ತಿ ಕಾರ್ಯ ನಡೆಸಿದ ಸ್ಥಳದಲ್ಲಿ ಮಣ್ಣಿನ ಕುಸಿತ ಆಗಿಲ್ಲ. ಬೇರೆ ಕಡೆಯಲ್ಲಿ ಕುಸಿತವಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಕೆರೆಯ ಒಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೆರೆಯ ವೇಸ್ಟ್ವೇರ್ನಿಂದ ನೀರು ಖಾಲಿ: ನಾಗಾಇದಲಾಯಿ ಗ್ರಾಮದಲ್ಲಿ ರೈತರ ಅನುಕೂಲಕ್ಕಾಗಿ ಆಗಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲರು 1972ರಲ್ಲಿ ಕೆರೆ ನಿರ್ಮಿಸಿಕೊಟ್ಟಿದ್ದರು. 50 ವರ್ಷದ ಹಳೆಯ ಕೆರೆ ಆಗಿರುವುದರಿಂದ ಕೆರೆ ಒಡೆಯುವ ಸಾಧ್ಯತೆ ಇರುವುದರಿಂದ ಎರಡು ಕಡೆಗೆ ವೇಸ್ಟ್ವೇರ್ ಮೂಲಕ ನೀರು ಹರಿದು ಬಿಡಲಾಗಿರುವುದರಿಂದ ಅಪಾರ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ ಎಂದು ನಿರಾಶೆ ವ್ಯಕ್ತಪಡಿಸಿದರು.
ತಜ್ಞರ ತಂಡದಿಂದ ಪರಿಶೀಲನೆ: ನಾಗಾಇದಲಾಯಿ ಸಣ್ಣ ನೀರಾವರಿ ಕೆರೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ವಿಶೇಷ ತಜ್ಞರಿಂದ ಪರಿಶೀಲಿಸಿ ಅವರು ನೀಡಿದ ವರದಿ ಆಧಾರದ ಮೇಲೆ ಸರಕಾರಕ್ಕೆ ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಾಗಾಇದಲಾಯಿ ಗ್ರಾಮದ ಸಣ್ಣ ನೀರಾವರಿ ಕೆರೆ ದುರಸ್ತಿಗೆ ಸರಕಾರ ಈಗಾಗಲೇ 4 ಕೋಟಿ ರೂ.ಅನುದಾನ ನೀಡಿದೆ. ಆದರೆ ಕಾಮಗಾರಿ ಗುಣಮಟ್ಟದ ಸರಿಯಾಗಿ ನಡೆದಿಲ್ಲವೆಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಪಂ ಮುಖ್ಯಕಾರ್ಯನಿರ್ವಾಹಣಾ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಶಾಸಕರು ತಿಳಿಸಿದರು.
ತಾಲೂಕಿನ ನಾಗಾಇದಲಾಯಿ ಗ್ರಾಮದ ಸಣ್ಣ ನೀರಾವರಿ ಕೆರೆಯೂ ಮುಂದಿನ ದಿನಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೆರೆ ಒಡೆದು ಹೋಗುವ ಸಾಧ್ಯತೆ ಇರುವುದರಿಂದ ನಾಗಾಇದಲಾಯಿ, ಪಟಪಳ್ಳಿ, ದೇಗಲಮಡಿ, ಚಿಂಚೋಳಿ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ಡಂಗೂರ ಸಾರಿ ಜನರಿಗೆ ತಿಳಿಸಬೇಕೆಂದು ತಹಶೀಲ್ದಾರ್ ಅಂಜುಮ್ ತಬಸುಮ್ ಮತ್ತು ತಾಪಂ ಅಧಿಕಾರಿ ವೈ.ಎಲ್. ಹಂಪಣ್ಣ ಅವರಿಗೆ ಶಾಸಕರು ಸೂಚಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಗೌತಮ ಪಾಟೀಲ ಮಾತನಾಡಿ, ಮುಂಜಾನೆ ಮಣ್ಣಿನ ಒಡ್ಡು ಪರಿಶೀಲಿಸಿದಾಗ ಕೇವಲ ಸ್ವಲ್ಪಮಟ್ಟಿಗೆ ಬಿರುಕು ಕಾಣಿಸಿದೆ. ಮಧ್ಯಾಹ್ನ ಸಮಯದಲ್ಲಿ 30 ಅಡಿ ಕೆರೆಯಲ್ಲಿ ಬಿರುಕು ಉಂಟಾಗಿದೆ. ಕ್ಷಣ ಕ್ಷಣಕ್ಕೆ ಬಿರುಕು ಕಾಣಿಸುತ್ತಿರುವುದರಿಂದ ಕೆರೆಯಲ್ಲಿ ನೀರು ಖಾಲಿಗೊಳಿಸುವುದು ಸೂಕ್ತವಾಗಿದೆ ಎಂದು ತಿಳಿಸಿದರು.
ಸಣ್ಣ ನೀರಾವರಿ ಎಇಇ ಶಿವಶರಣಪ್ಪ ಕೇಶ್ವಾರ ಮಾತನಾಡಿ, ನಾಗಾಇದಲಾಯಿ ಸಣ್ಣ ನೀರಾವರಿಗೆ 10 ಕ್ಯೂಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಕೆರೆ ನೀರಿನ ಸಂಗ್ರಹಣೆ ಒಟ್ಟು 44 ಎಂಸಿಎಫ್ಟಿ ಇದೆ. ಕೆರೆ ಸುರಕ್ಷತೆ ಕಾಪಾಡಿಕೊಳ್ಳುವುದಕ್ಕಾಗಿ ನೀರು ವೇಸ್ಟ್ವೇರ್ದಿಂದ ಎರಡು ಕಡೆಯಿಂದ ನೀರು ಬಿಡಲಾಗುತ್ತಿದೆ ಎಂದು ಶಾಸಕರ ಗಮನಕ್ಕೆ ತಂದರು.
ತಾಪಂ ಅಧಿಕಾರಿ ವೈ.ಎಲ್. ಹಂಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಸಂತೋಷ ಗಡಂತಿ, ಕೆ.ಎಂ. ಬಾರಿ, ಶ್ರೀಮಂತ ಕಟ್ಟಿಮನಿ, ಉದಯಕುಮಾರ ಸಿಂಧೋಲ, ಭೀಮಶೆಟ್ಟಿ ಮುರುಡಾ, ಪಿಎಸೈ ಉದ್ದಂಡಪ್ಪ, ನಿಂಗಪ್ಪ, ಶೇರಖಾನ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.