ಪಾಲಿಶ್‌ ಮಾಡಿಕೊಡುವುದಾಗಿ ಹೇಳಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಅಪರಿಚಿತರು


Team Udayavani, Aug 3, 2022, 3:44 PM IST

ಪಾಲಿಶ್‌ ಮಾಡಿಕೊಡುವುದಾಗಿ ಹೇಳಿ ಮಾಂಗಲ್ಯ ಸರವನ್ನು ಎಗರಿಸಿ ಪರಾರಿಯಾದ ಅಪರಿಚಿತರು

ಹೊಳೆಹೊನ್ನೂರು: ಸಮೀಪದ ಹಂಚಿನ ಸಿದ್ದಾಪುರದಲ್ಲಿ ಸುಶೀಲಮ್ಮ ಎಂಬುವರ 30 ಗ್ರಾಂ ಚಿನ್ನಾಭರಣಕ್ಕೆ ಪಾಲಿಶ್ ಹಾಕಿಕೊಡುವುದಾಗಿ ನಂಬಿಸಿ ಇಬ್ಬರು ಅಪರಿಚಿತರು ಎಗರಿಸಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಮನೆಯ ಮುಂದೆ ಬಟ್ಟೆ ಒಗೆಯುತ್ತಿದ್ದ ಸುಶೀಲಮ್ಮರ ಬಳಿ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಹಿತ್ತಾಳೆ, ಬೆಳ್ಳಿ ಸಾಮಾಗ್ರಿಗಳಿಗೆ ಪಾಲಿಶ್ ಹಾಕ್ತೀವಿ ಪಾತ್ರೆಗಳು ಆಭರಣಗಳು ಇದ್ದರೆ ಕೊಡಿ ಎಂದು ಪೌಡರ್ ತೋರಿಸಿದ್ದಾರೆ.

ಯಾವ ಪಾತ್ರೆನೂ ಇಲ್ಲ ನಡೆಯಿರಿ ಎಂದು ಮಹಿಳೆ ಹೇಳಿದ್ದಾಳೆ. ಅಷ್ಟರಲ್ಲಿ ಹೊರಗೆ ಬಂದ ಗೋವಿಂದಮ್ಮ‌ಳನ್ನು ಕಂಡ ಸುಶೀಲಮ್ಮ ಈ ಇಬ್ಬರು ಪೌಡರ್ ತೋರಿಸಿ ಪಾಲಿಶ್ ಮಾಡಿಕೊಡುವುದಾಗಿ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಗೋವಿಂದಮ್ಮನಿಗೂ ಈ ಅಪರಿಚಿತರು ಪಾಲಿಶ್ ಮಾಡಿಕೊಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತೋತ್ಸವ : 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ಎನ್.ರವಿಕುಮಾರ್

ಅಷ್ಟರಲ್ಲಿ ಒಂದು ಪಾತ್ರೆ ಹಿಡಿದುಕೊಂಡು ಬಂದ ಗೋವಿಂದಮ್ಮರಿಗೆ ಪಾತ್ರೆಯನ್ನು ಲಕಲಕಾ ಅಂತ ಹೊಳೆಯುವಂತೆ ಮಾಡಿಕೊಟ್ಟಿದ್ದಾರೆ. ಉಂಗುರವನ್ನೂ ತೊಳೆದುಕೊಟ್ಟಿದ್ದಾರೆ. ಯಾವಾಗ‌ ಗೋವಿಂದಮ್ಮ ಪಾತ್ರೆ ಮತ್ತು ಉಂಗುರವನ್ನು ತೆಗೆದುಕೊಂಡು ಮನೆಗೆ ತೆರಳುತ್ತಿದ್ದಂತೆ ಸುಶೀಲಮ್ಮರ ಮಾಂಗಲ್ಯ ಸರ ಕೊಡಮ್ಮ ಪಾಲಿಶ್ ಮಾಡಿಕೊಡ್ತೀವಿ ಎಂದು ಹೇಳಿದ್ದಾರೆ.

ಗೋವಿಂದಮ್ಮರ ಪಾಲಿಶ್ ಮಾಡಿಕೊಟ್ಟಿರುವುದನ್ನು ಕಂಡು ನಂಬಿಕೆ ಹುಟ್ಟಿಸಿಕೊಂಡ ಸುಶೀಲಮ್ಮ ಮಾಂಗಲ್ಯ ಸರವನ್ನು ಅಪರಿಚಿತರ ಕೈಗೆ ಇಟ್ಟಿದ್ದಾರೆ. ಕೈಗೆ ಇಡುತ್ತಿದ್ದಂತೆ ಒಂದು ಲೋಟ ನೀರು ತೆಗೆದುಕೊಂಡು ಬಾರಮ್ಮ‌ಎನ್ನುತ್ತಿದ್ದಂತೆ ಅಪರಿಚಿತರು ಮಹಿಳೆ ಮನೆಯೊಳಗೆ ಕಾಲಿಡುತ್ತಿದ್ದಂತೆ ಪರಾರಿಯಾಗಿದ್ದಾರೆ.

ಎಲ್ಲಡೆ ಹುಡುಕಿದರೂ ಅಪರಿಚಿತರು ಕಾಣದೆ ಇರುವುದರಿಂದ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುಶೀಲಮ್ಮ 1 ಲಕ್ಷದ 20 ಸಾವಿರ ರೂ ಮೌಲ್ಯದ ಚಿನ್ನಾಭರಣ ಕಳುವಾಗಿರುವುದಾಗಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಕಾಲುಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.