ಚರಂಡಿಗೆ ಅಡ್ಡಲಾಗಿ ಒಡ್ಡು ನಿರ್ಮಾಣ: ಕ್ರಮಕ್ಕೆ ಆಗ್ರಹ
Team Udayavani, Aug 3, 2022, 6:22 PM IST
ಲಿಂಗಸುಗೂರು: ಐದನಾಳ ಗ್ರಾಮದಲ್ಲಿ ಚರಂಡಿಗೆ ಕೆಲವು ವ್ಯಕ್ತಿಗಳು ಅಡ್ಡಲಾಗಿ ಒಡ್ಡು ನಿರ್ಮಿಸಿದ್ದರಿಂದ ಚರಂಡಿ ನೀರು ಹರಿದು ಹೋಗಲು ಆಗದೇ ರಸ್ತೆಯಲ್ಲಿ ನಿಲ್ಲುತ್ತಿದ್ದರಿಂದ ಪರದಾಡುವಂತಾಗಿದೆ.
ಕೂಡಲೇ ಈ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿ ಗ್ರಾಮದ ನಿವಾಸಿಗಳು ತಾಪಂ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು. ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಚರಂಡಿ ನೀರಿನ ಹರಿಗೆ ಕೆಲವರು ಉದ್ದೇಶ ಪೂರ್ವಕವಾಗಿ ಒಡ್ಡು ಹಾಕಿದ್ದರಿಂದ ಚರಂಡಿ ನೀರು ಸರಾಗವಾಗಿ ಮುಂದೆ ಹರಿಯದೇ ಪಕ್ಕದಲ್ಲಿರುವ ದಲಿತ ಕಾಲೋನಿ ರಸ್ತೆಯಲ್ಲಿ ನಿಲ್ಲುತ್ತಿದೆ. ಇದರಿಂದ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸಬೇಕಾಗಿದೆ. ಅಲ್ಲದೇ ಮಲೇರಿಯಾ, ಡೆಂಘ್ಯೂದಂತಹ ಸಾಂಕ್ರಾಮಿಕ ರೋಗಗಳು ವ್ಯಾಪಕವಾಗಿ ಹರಡುತ್ತಿವೆ. ಈ ಬಗ್ಗೆ ಗ್ರಾಪಂಗೆ ಸಾಕಷ್ಟು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ, ಚರಂಡಿ ನೀರು ಹರಿವಿಗೆ ಅಡ್ಡಲಾಗಿರುವ ಒಡ್ಡು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಶಿವು, ದುರಗಮ್ಮ, ಹನುಮಂತ, ವೀರಭದ್ರ, ಬಸಲಿಂಗಪ್ಪ, ಶರಣಮ್ಮ, ಮಲ್ಲಮ್ಮ, ದೇವಮ್ಮ, ಹುಲಗಮ್ಮ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ
Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.