ಕೆ.ಎಲ್.ರಾಹುಲ್ ಜಾಗಕ್ಕೆ ಕಣ್ಣಿಟ್ಟ ಹಾರ್ದಿಕ್: ಕನ್ನಡಿಗನಿಂದ ಕೈತಪ್ಪುತ್ತಾ ಉಪನಾಯಕ ಪಟ್ಟ?
Team Udayavani, Aug 4, 2022, 1:18 PM IST
ಮುಂಬೈ: ಭಾರತ ಟಿ20 ತಂಡದ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆ ಮಾಡುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ ಎಂದು ಮೂಲಗಳು ವರದಿ ಮಾಡಿದೆ. ಸದ್ಯದ ಉಪ ನಾಯಕ ಕೆ.ಎಲ್.ರಾಹುಲ್ ಬದಲಿಗೆ ಪಾಂಡ್ಯರನ್ನು ಆಯ್ಕೆ ಮಾಡಲಾಗುವುದು ಎನ್ನಲಾಗಿದೆ.
ಕನ್ನಡಿಗ ರಾಹುಲ್ ಪದೇ ಪದೇ ಗಾಯಗೊಳ್ಳುತ್ತಿರುವುದು ಇದಕ್ಕೆ ಕಾರಣ. ಫಿಟ್ ನೆಸ್ ಸಮಸ್ಯೆಯಿಂದ ರಾಹುಲ್ ಸತತ ಸರಣಿಗಳಿಂದ ಹೊರುಳಿಯುತ್ತಿದ್ದಾರೆ. ಹೀಗಾಗಿ ತಂಡಕ್ಕೆ ಭರ್ಜರಿ ಕಮ್ ಬ್ಯಾಕ್ ಮಾಡಿರುವ ಹಾರ್ದಿಕ್ ಪಾಂಡ್ಯಗೆ ಈ ಜವಾಬ್ದಾರಿ ನೀಡಲು ಬಿಸಿಸಿಐ ಮುಂದಾಗಿದೆ ಎನ್ನುತ್ತಿದೆ ವರದಿ.
ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮೊದಲ ಬಾರಿ ಉಪ ನಾಯಕತ್ವದ ಜವಾಬ್ದಾರಿ ನೀಡಲಾಗಿತ್ತು. ಬಳಿಕ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಪಾಂಡ್ಯಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿತ್ತು. ಇಲ್ಲೂ ಹಾರ್ದಿಕ್ ಯಶಸ್ಸು ಪಡೆದಿದ್ದರು.
ಇದನ್ನೂ ಓದಿ:ಅಮಿತ್ ಶಾ ಭೇಟಿಯಾದ ಬಿಎಸ್ ವೈ: ಪುತ್ರನ ರಾಜಕೀಯದ ಬಗ್ಗೆ ಚರ್ಚೆ
ಮುಂದಿನ ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಹಾರ್ದಿಕ್ ಪಾಂಡ್ಯಗೆ ಅಧಿಕೃತವಾಗಿ ಉಪ ನಾಯಕತ್ವದ ಜವಾಬ್ದಾರಿ ನೀಡಲಾಗುತ್ತದೆ ಎನ್ನಲಾಗಿದೆ. ಮೊದಲ ಐಪಿಎಲ್ ತಂಡದ (ಗುಜರಾತ್ ಟೈಟಾನ್ಸ್) ನಾಯಕತ್ವ ವಹಿಸಿದ್ದ ಹಾರ್ದಿಕ್, ಚೊಚ್ಚಲ ಕಪ್ ಗೆದ್ದುಕೊಂಡಿದ್ದರು. ಹೀಗಾಗಿ ಅವರ ಆಯ್ಕೆ ಬಹುತೇಕ ಖಚಿತ ಎನ್ನುತ್ತಿದೆ ಬಿಸಿಸಿಐ ಮೂಲಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.