![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 8, 2022, 5:25 PM IST
ಗಜೇಂದ್ರಗಡ: ಜಾತಿಯ ಹಂಗಿಲ್ಲದೇ ಮನುಕುಲ ಒಂದೇ ಎಂಬ ಸಂದೇಶ ಸಾರಿ, ಸರ್ವಧರ್ಮಗಳ ಭಾವೈಕ್ಯತೆಯ ಕೊಂಡಿಯಾಗಿರುವ ಮೊಹರಂ ಹಬ್ಬ ಆಚರಣೆ ಆಧುನಿಕ ಯುಗದಲ್ಲೂ ಸ್ನೇಹ, ಭ್ರಾತೃತ್ವದ ಸಂಕೇತವಾಗಿ ನಡೆದುಕೊಂಡು ಬಂದಿದೆ.
ಹುತಾತ್ಮರನ್ನು ನೆನೆಯುವ ಉದ್ದೇಶದಿಂದ ವಿಶ್ವಾದಾದ್ಯಂತ ಮೊಹರಂ ಹಬ್ಬವನ್ನು ಜಾತಿ ಭೇದವಿಲ್ಲದೇ ಶೋಕದ ಮೂಲಕ ಆಚರಿಸಲಾಗುತ್ತದೆ.
ಮೊಹರಂ ಸರ್ವ ಧರ್ಮೀಯರು ಆಚರಿಸುವ ವೈಶಿಷ್ಟ್ಯಪೂರ್ಣ ಹಬ್ಬವಾಗಿದೆ. ಇದಕ್ಕೆ ಅಲಾಯಿ ಹಬ್ಬ ಅಂತಲೂ ಹೆಸರು. ಹಳ್ಳಿಗಳಲ್ಲಿ ಈ ಹಬ್ಬವನ್ನು ಉತ್ಸಾಹದಿಂದ ಆಚರಿಸುತ್ತಾರೆ. ಈ ಹಬ್ಬದಲ್ಲಿ ಚಿಣ್ಣರನ್ನು ನೋಡುವುದೇ ಒಂದು ಮಜ. ಐದು ದಿನಗಳ ವರೆಗೆ ಕೂರಿಸಲಾಗುವ ಅಲಾಯಿ (ಪಂಜಾ) ದೇವರಿಗೆ ಕುಣಿ ತೆಗೆದು ಅಗ್ನಿಕುಂಡ ಪ್ರವೇಶ ಮಾಡುತ್ತಾರೆ. ಇನ್ನೊಂದೆಡೆ ಅಲಾಯಿ ದೇವರ ಎದುರಿಗೆ ವೃತ್ತಾಕಾರದ ಇಟ್ಟಿಗೆಗಳನ್ನಿಟ್ಟು ಮೊಹರಂ ಕೊನೆಯ ದಿನ ಹಬ್ಬ ಆಚರಿಸಲಾಗುತ್ತದೆ.
ಹಬ್ಬದ ಕೊನೆಯ ದಿನ ಇಮಾಮ್ ಕುಟುಂಬದವರನ್ನು ಸ್ಮರಿಸುವುದಕ್ಕಾಗಿ ಊರು-ಕೇರಿಗಳಲ್ಲಿ ಮೆರವಣಿಗೆ ನಡೆಸುತ್ತಾರೆ. ಇಮಾಮ್ ಅವರು ತೋರಿದ ಮಾನವೀಯತೆಗೆ ಗೌರವ ಕೊಡುವುದೇ ಮೊಹರಂ ಹಬ್ಬದ ವಿಶೇಷತೆ. ಅವರು ಇಸ್ಲಾಂ ಧರ್ಮದ ಕಟ್ಟುಪಾಡುಗಳಿಗಾಗಿ ಜೀವನ ಮುಡುಪಾಗಿಟ್ಟಿದ್ದರು. ದೇವರಿಗೆ ಹರಕೆ ತೀರಿಸಲೆಂದು ಫಕೀರರಾಗುತ್ತಾರೆ. ಅಲ್ಲದೇ, ಕೈಯಲ್ಲಿ ಕೆಂಪುಲಾಡಿ ಕಟ್ಟಿಕೊಳ್ಳುತ್ತಾರೆ. ಇದನ್ನು ಕರುಳಿಗೆ ಹೋಲಿಸುವ ಕಥೆಗಳಿವೆ ಮತ್ತು ಮೈಗೆ ಬಣ್ಣದ ಲಾಡಿಗಳನ್ನು ಹಾಕಿಕೊಳ್ಳುತ್ತಾರೆ. ಹರಕೆ ತೀರಿಸಲೆಂದು ಹುಲಿಯಾಗುತ್ತಾರೆ.
ಕುಡಿಕೆ- ಮಡಿಕೆ
ಮೊಹರಂ ಹಬ್ಬದ ಶರಬತ್ತಿಗೆ ಹೆಚ್ಚಿನ ಮಹತ್ವವಿದೆ. ಕುಡಿಕೆ-ಮಡಿಕೆಗಳಿಗೆ ಹೆಚ್ಚಿನ ಬೇಡಿಕೆ. ಹಬ್ಬದಲ್ಲಿ ಮಡಿಕೆಯನ್ನು ಶರಬತ್ ಸೇವಿಸಲು ಮತ್ತು ಮಡಿಕೆಯಾಟವಾಡಲು ಬಳಸುತ್ತಾರೆ. ಹೆಜ್ಜೆ ಕುಣಿತದಲ್ಲಿ ಮಡಿಕೆಗಳನ್ನು ಬಳಸುತ್ತಾರೆ. ಈ ಹೆಜ್ಜೆ ಕುಣಿತ ನೋಡುವುದೇ ಒಂದು ವೈಭವ.
ಮೊಹರಂ ಹುಲಿ
ಕೆಲ ಊರುಗಳಲ್ಲಿ ಬೇಡರ ಕಣ್ಣಪ್ಪ ವೇಷ ಹಾಕಲಾಗುತ್ತದೆ. ಯುದ್ಧದ ಸಂದರ್ಭದಲ್ಲಿ ಹುಸೇನರ ಮಗ ಸೈನಿಕರಿಂದ ತಪ್ಪಿಸಿಕೊಂಡು ಕಾಡಿನಲ್ಲಿ ಓಡಿ ಹೊಗುತ್ತಾನೆ. ಬೇಡರ ಕಣ್ಣಪ್ಪ ಮಗುವನ್ನು ರಕ್ಷಿಸಿ ನೀರು ಕುಡಿಸುತ್ತಾನೆ. ಹಿಂಬಾಲಿಸುತ್ತಾ ಬಂದ ಸೈನಿಕರು ಮಗುವನ್ನು ಬೇಡುತ್ತಾರೆ. ನಿರಾಕರಿಸಿದ ಬೇಡನೂ ಅವರೊಡನೆ ಮಗುವನ್ನು ಬೆನ್ನಿಗೆ ಕಟ್ಟಿಕೊಂಡು ಯುದ್ಧ ಮಾಡಿ ರಕ್ಷಿಸುತ್ತಾನಂತೆ. ಅದೇ ರೀತಿ, ಬೇಡರ ವೇಷಧಾರಿ ಎದುರಿಗಿನ ಹುಲಿಯನ್ನು ಕತ್ತಿಯಿಂದ ಹೆದರಿಸುವ ಕುಣಿತ ಜನಜನಿತವಾಗಿದೆ. ಹೀಗಾಗಿ, ಹುಲಿಯ ವೇಷ ಹಾಕಿ ಹರಕೆ ತೀರಿಸುತ್ತಾರೆ.
ಭಾವೈಕ್ಯದ ಸಂಕೇತ
ಮೊಹರಂ ಧರ್ಮ, ಜಾತಿಯ ಹಂಗಿಲ್ಲದ ಹಬ್ಬವಾಗಿದೆ. ಇದು ಎಲ್ಲರೂ ಭಾವೈಕ್ಯತೆ ಹಾಗೂ ಶ್ರದ್ಧಾ-ಭಕ್ತಿಯಿಂದ ಆಚರಿಸುವ ಹಬ್ಬವಾಗಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.