![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 9, 2022, 12:11 AM IST
ವಿಟ್ಲ: ಅನಂತಾಡಿ ಗ್ರಾಮದ ಬಂಟ್ರಿಂಜದಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕುತ್ತಿಗೆಗೆ ಹಗ್ಗ ಸಿಲುಕಿ ಮೃತಪಟ್ಟ ಘಟನೆ ಸಂಭವಿಸಿದೆ.
ಬಾಬನಕಟ್ಟೆ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ, ಅನಂತಾಡಿ ಗ್ರಾಮದ ಬಂಟ್ರಿಂಜ ಶೇಖರ ಮತ್ತು ಚಂದ್ರಾವತಿ ದಂಪತಿಯ ಪುತ್ರಿ ಲಿಖಿತಾ (11)ಮೃತರು.
ತಾಯಿ ಚಂದ್ರಾವತಿ ದಿನಸಿ ಸಾಮಗ್ರಿ ತರಲೆಂದು ಹತ್ತಿರದ ಅಂಗಡಿಗೆ ತೆರಳಿದ್ದಾಗ ಲಿಖಿತಾ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿದ್ದು, ಜೋಕಾಲಿಗೆ ಕಟ್ಟಿದ ಹಗ್ಗ ಆಕೆಯ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾಳೆ.
ಮೃತ ಬಾಲಕಿ ತಂದೆ-ತಾಯಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಪರಿಶೀಲಿಸುತ್ತಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.