ಆಲೂರು ಮೀನು ಮಾರುಕಟ್ಟೆ ನವೀಕರಣಕ್ಕೆ ಬೇಡಿಕೆ

ಸರಿಯಾದ ಶೌಚಾಲಯ ವ್ಯವಸ್ಥೆಯೂ ಇಲ್ಲ

Team Udayavani, Aug 9, 2022, 2:31 PM IST

12

ಆಲೂರು: ಇಲ್ಲಿರುವ ಮಹಿಳಾ ಮೀನು ಮಾರಾಟ ಮಾರುಕಟ್ಟೆಯ ಕಟ್ಟಡ ಶಿಥಿಲಗೊಂಡಿದ್ದು, ಮಾಡು ಸೋರುತ್ತಿದೆ. ಮಳೆ ನೀರು ಒಳಗೆ ಬೀಳುತ್ತಿದ್ದು, ವ್ಯಾಪಾರಸ್ಥ ಮಹಿಳೆಯರು, ಗ್ರಾಹಕರಿಗೆ ನಿತ್ಯವೂ ಕಿರಿಕಿರಿ ಉಂಟು ಮಾಡಿದೆ. ಆಲೂರಿನ ಈ ಮೀನು ಮಾರುಕಟ್ಟೆಯನ್ನು ನವೀಕರಣಗೊಳಿಸಬೇಕೆನ್ನುವ ಬೇಡಿಕೆ ವ್ಯಕ್ತವಾಗಿದೆ.

ಆಲೂರು ಗ್ರಾ.ಪಂ. ಮೀನು ಮಾರಾಟಕ್ಕಾಗಿ ಪೇಟೆ ಹೃದಯ ಭಾಗದಲ್ಲಿ ಮಾರುಕಟ್ಟೆ ಕಟ್ಟಡ ನಿರ್ಮಿಸಿದ್ದು, ನಾಲ್ಕಾರು ದಶಕದಿಂದ ಮೀನು ಮಾರಾಟ ಮಾಡಿ ಮಹಿಳೆಯರು ಕುಟುಂಬ ನಿರ್ವಹಣೆ ಮಾಡಿಕೊಂಡಿದ್ದಾರೆ. ಆಲೂರು ಗ್ರಾ.ಪಂ. ಮೀನು ಮಾರುಕಟ್ಟೆ ತೆರಿಗೆ ಸಂಗ್ರಹಿಸುತ್ತಿದ್ದು, ಅದೇ ರೀತಿ ಇದರ ಅಭಿವೃದ್ಧಿಗೂ ಮುಂದಾಗಲಿ ಎನ್ನುವುದಾಗಿ ಮಹಿಳಾ ವ್ಯಾಪಾರಸ್ಥರು ಒತ್ತಾಯಿಸಿದ್ದಾರೆ.

ಸರಕಾರ ಮೀನು ಮಾರಾಟ ಮಹಿಳೆಯರಿಗೆ ಕೋಲ್ಡ್‌ ಬಾಕ್ಸ್‌, ಆರ್ಥಿಕ ಸಹಕಾರ, ವಾಹನ ಮುಂತಾದ ವ್ಯವಸ್ಥೆ ಮೂಲಕ ಮಾರಾಟಕ್ಕೆ ಉತ್ತೇಜನ ನೀಡಿದರೆ, ಆಲೂರು ಗ್ರಾ.ಪಂ.ನಿಂದ ಮಾತ್ರ ನಮಗೆ ಅನ್ಯಾಯವಾಗಿದೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ.

ವ್ಯವಸ್ಥೆ ಸರಿಪಡಿಸಿ

ಇಲ್ಲಿನ ಮೀನು ಮಾರುಕಟ್ಟೆ ಕಟ್ಟಡವು ಶಿಥಿಲ ಗೊಂಡಿದ್ದು, ಮಳೆ ಬಂದರೆ ನೀರು ಒಳಗೆ ಬೀಳುತ್ತಿದೆ. ಮಹಿಳಾ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ಶೌಚಾ ಲಯದ ವ್ಯವಸ್ಥೆಯೂ ಇಲ್ಲಿಲ್ಲ. ಆದಷ್ಟು ಬೇಗ ಈ ವ್ಯವಸ್ಥೆ ಸರಿಪಡಿಸಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ದುರಸ್ತಿಗೆ ಪ್ರಸ್ತಾವನೆ: ಮಾರುಕಟ್ಟೆಯ ಅಭಿವೃದ್ಧಿಗೆ ಈಗಾಗಲೇ ತಾಲೂಕು ಪಂಚಾಯತ್‌ ಸಹಿತ ಸಂಬಂಧ ಪಟ್ಟವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನು ಈಗ ಬೇಡಿಕೆಯಿರುವ ಶೌಚಾಲಯ ಪಂಚಾಯತ್‌ ನಿಂದ ನಿರ್ಮಿಸಿಕೊಡಲಾಗುವುದು. ಆಲೂರು ಪಂಚಾಯತ್‌ ಮೀನು ಮಾರುಕಟ್ಟೆಯಲ್ಲದೆ ಬೇರೆ ಕಡೆ ಮೀನು ಮಾರಾಟಕ್ಕೆ ಅವಕಾಶ ಕೊಟ್ಟಿರುವುದು ಹಿಂದಿನ ಆಡಳಿತ ವ್ಯವಸ್ಥೆಯಲ್ಲಿ. ಬೇರೆ ಯಾರೂ ಮೀನು ಮಾರಾಟ ಮಾಡಬಾರದು ಎಂದು ಹೇಳಲಿಕ್ಕೆ ಬರೋದಿಲ್ಲ. ಈ ಸಮಸ್ಯೆ ಸೌಹಾರ್ದವಾಗಿ ಪರಿಹರಿಸುವ ಪ್ರಯತ್ನ ಮಾಡಲಾಗುವುದು. – ರವಿ ಶೆಟ್ಟಿ, ಉಪಾಧ್ಯಕ್ಷರು, ಆಲೂರು ಗ್ರಾ.ಪಂ

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Kundapur; ವಿಪರೀತ ತಲೆನೋವು: ಮಹಿಳೆ ಸಾ*ವು

police

Kollur:ಯಾತ್ರಾರ್ಥಿಯ ಚಿನ್ನದ ಒಡವೆ ಕಳವು

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

10(1)

Kundapura :ಕಂಚುಗೋಡು ತೀರವಾಸಿಗಳ ಗೋಳು ಕೇಳ್ಳೋರಿಲ್ಲ

Servey-Road

Highway Problem: ಕುಂದಾಪುರ -ತಲಪಾಡಿ ಹೆದ್ದಾರಿಯಲ್ಲಿ ನೀರು ನಿಲ್ಲುವ 40 ಸ್ಥಳಗಳ ಗುರುತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.