ತಮಿಳುನಾಡು: ದಲಿತ ಗ್ರಾ.ಪಂ. ಅಧ್ಯಕ್ಷರಿಗೆ ಕೂರಲೂ ಅವಕಾಶ ಇಲ್ಲ

ಅಸ್ಪೃಶ್ಯತೆ ಇನ್ನೂ ಪಾಲನೆ ; ಟಿಎನ್‌ಯುಇಎಫ್ ಸಮಗ್ರ ಅಧ್ಯಯನ

Team Udayavani, Aug 12, 2022, 7:20 AM IST

1-sdsad

ಚೆನ್ನೈ: ತಮಿಳುನಾಡಿನ ಹಲವು ಪಂಚಾಯಿತಿಗಳಲ್ಲಿ ಅಧ್ಯಕ್ಷರಾಗಿರುವ ದಲಿತ ಸಮುದಾಯದವರಿಗೆ ಕೂರಲು ಕುರ್ಚಿಯನ್ನೇ ನೀಡಲಾಗುತ್ತಿಲ್ಲ. ಇಂಥ ಒಂದು ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಮಿಳುನಾಡು ಅಸ್ಪೃಶ್ಯತಾ ನಿವಾರಣಾ ಘಟಕ (ಟಿಎನ್‌ಯುಇಎಫ್) ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಿದೆ. ದ್ರಾವಿಡ ರಾಜ್ಯದ 386 ಪಂಚಾಯಿತಿಗಳ ಪೈಕಿ 22 ಪಂಚಾಯಿತಿಗಳಲ್ಲಿ ದಲಿತ ಸಮುದಾಯದಿಂದ ಆಯ್ಕೆ ಯಾಗಿರುವ ಅಧ್ಯಕ್ಷರಿಗೆ ಕೂರಲು ಕುರ್ಚಿಯನ್ನೇ ನೀಡಲಾಗುತ್ತಿಲ್ಲ ಎಂದು ಅಭಿಪ್ರಾಯಕ್ಕೆ ಬರಲಾಗಿದೆ.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಪೂರ್ಣಗೊಂಡರೂ ಈ ವ್ಯವಸ್ಥೆ ಮುಂದುವರಿದಿರುವುದು ಖಂಡ ನಾರ್ಹ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಅಸ್ಪೃಶ್ಯತೆಯ ಮನೋಭಾವ ಎಷ್ಟರ ಮಟ್ಟಿಗೆ ವ್ಯವಸ್ಥೆಯಲ್ಲಿ ಬೇರೂರಿದೆ ಎಂದರೆ, ಅಧ್ಯಕ್ಷರಾ ದವರಿಗೆ ರಾಷ್ಟ್ರ ಧ್ವಜಾರೋಹಣ ಮಾಡಲು, ಕೆಲವು ಹಂತಗಳಲ್ಲಿ ಪಂಚಾಯಿತಿ ಕಚೇರಿ ಆವರಣಕ್ಕೆ ಆಗಮಿ ಸಲು ಅವಕಾಶ ನೀಡಲಾಗುತ್ತಿಲ್ಲ. ಕೆಲವು ಸ್ಥಳಗಳಲ್ಲಿ ಪಂಚಾಯಿತಿ ಕಚೇರಿಗೆ ಬಂದರೂ ದಾಖಲೆಗಳನ್ನು ಪರಿಶೀಲಿಸಲೂ ಅಧ್ಯಕ್ಷರಿಗೆ ಅನುಮತಿಯನ್ನೇ ಕೊಡಲಾಗುತ್ತಿಲ್ಲ ಎಂದು ಕಂಡುಕೊಳ್ಳಲಾಗಿದೆ.

ಆಘಾತಕಾರಿ: ಸಮೀಕ್ಷೆಯನ್ನು ಬಿಡುಗಡೆ ಮಾಡಿದ ಬಳಿಕ ಟಿಎನ್‌ಯುಇಎಫ್ನ ಸಾಮ್ಯುಯೆಲ್‌ ರಾಜ್‌ “ಸಮೀಕ್ಷೆಯಲ್ಲಿ ಕಂಡು ಬಂದಿರುವ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ಪರಿಯಾರ್‌ ಪ್ರತಿಪಾದಿಸಿದ ಸಮಾನತೆಯನ್ನು ಪಾಲಿಸುವ ರಾಜ್ಯದಲ್ಲಿಯೇ ಇಂಥ ಘಟನೆಗಳು ನಡೆಯುತ್ತಿವೆ ಎಂದಾದರೆ, ಅದು ಪ್ರಶ್ನಾರ್ಹ’ ಎಂದರು.

ರಾಜ್ಯ ಸರ್ಕಾರ ದಲಿತ ಸಮುದಾ ಯದ ವ್ಯಕ್ತಿಗಳಿಗೆ ಸಾಂವಿಧಾನಿಕವಾಗಿ ನೀಡಲಾಗಿರುವ ಅಧಿಕಾರವನ್ನು ನಿಭಾ ಯಿಸಲು ಅವಕಾಶ ನೀಡದೇ ಇರುವ ಬಗ್ಗೆ ಪ್ರತ್ಯೇಕ ವ್ಯವಸ್ಥೆಯನ್ನೇ ರೂಪಿಸ ಬೇಕು ಎಂದು ಒತ್ತಾಯಿಸಿದರು.

ಅಧಿಕಾರಿಗಳ ನೇಮಿಸಿ: ತಮಿಳುನಾಡು ಸರ್ಕಾರಕ್ಕೆ ಈ ವರದಿ ನೀಡಲಾಗುತ್ತದೆ ಎಂದು ಹೇಳಿದ ಸಾಮ್ಯುಯೆಲ್‌ ರಾಜ್‌, ಆ.15ರಂದು ರಾಷ್ಟ್ರ ಧ್ವಜಾರೋಹಣ ನಡೆಸಲು ಅವಕಾಶ ನೀಡಬೇಕು. ಅದಕ್ಕಾಗಿ ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕೆಲವು ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳೇ ದಲಿತ ಸಮುದಾಯದ ಅಧ್ಯಕ್ಷರು ರಾಷ್ಟ್ರ ಧ್ವಜಾರೋಹಣ ನಡೆಸದಂತೆ ಮನವೊಲಿಸುವ ಕೆಲಸ ನಡೆಸುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಡಿಎಂಕೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.