ಹಳಕರ್ಟಿ ಶರೀಫ್ ದರ್ಗಾ ಉರುಸ್‌ಗೆ ಭಕ್ತಸಾಗರ


Team Udayavani, Aug 12, 2022, 8:33 PM IST

1-sdsdsadsad

ವಾಡಿ: ಪಟ್ಟಣ ಸಮೀಪದ ಹಳಕರ್ಟಿ ಶರೀಫ್ ದರ್ಗ ಉರುಸ್‌ಗೆ ದೇಶದ ನಾನಾ ಭಾಗಗಳಿಂದ ಭಕ್ತಸಾಗರವೇ ಹರಿದು ಬಂದಿದೆ. ಹಜರತ್ ಖ್ವಾಜಾ ಸೈಯ್ಯದ್ ಮೊಹ್ಮದ್ ಬಾದಶಹಾ ಖ್ವಾದ್ರೀ ದರ್ಗಾದ 45ನೇ ಉರುಸ್ ಶುಭ ಶುಕ್ರವಾರ ಸಾಮೂಹಿಕ ನಮಾಜ್ ಮೂಲಕ ಆರಂಭಗೊಂಡಿತು.

ಹೈದರಾಬಾದ್ ದಿಂದ ಎರಡು ಸಾವಿರ ಭಕ್ತರು ವಿಶೇಷ ರೈಲಿನಲ್ಲಿ ಸುಗಂಧ ದೃವ್ಯದ ಮೂಲಕ ಆಗಮಿಸಿ ಉರುಸ್ ಸಂಭ್ರಮ ಹೆಚ್ಚಿಸಿದರು.
ಪಟ್ಟಣದ ರೈಲು ನಿಲ್ದಾಣದಲ್ಲಿ ಸಂಧಲ್ ಆಮಿಸುತ್ತಿದ್ದ ವಿಶೇಷ ರೈಲನ್ನು ಸ್ವಾಗತಿಸಿದ ಹಳಕರ್ಟಿ ದರ್ಗಾದ ಹಜರತ್ ಖ್ವಾಜಾ ಸೈಯ್ಯದ್ ಅಬುತುರಾಬ ಶಹಾ ಖ್ವಾದ್ರಿ ಚಿಸ್ತಿ ಯಮನಿ ಬಂದಾನವಾಜ್ ತುರಾಬ ಖ್ವಾದೀರ್, ಹಳಕರ್ಟಿ ಕಟ್ಟಿಮನಿ ಹಿರೇಮಠದ ಪೂಜ್ಯ ಶ್ರೀಮುನೀಂದ್ರ ಸ್ವಾಮೀಜಿ, ದಂದಗುಂಡದ ಶ್ರೀಸಂಗನಬಸವ ಸ್ವಾಮೀಜಿ ಹಾಗೂ ವಿವಿಧ ದರ್ಗಾಗಳ ಪೂಜ್ಯರು, ಸಂಧಲ್ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಕೋಮು ಸೌಹಾರ್ಧತೆ ಮೆರೆದರು.

ಇದಕ್ಕೂ ಮೊದಲು ಶುಕ್ರವಾರ ಹಳಕರ್ಟಿ ದರ್ಗಾ ಶರೀಫ್ ಸಮಾದಿಗೆ ಗುಲಾಬಿ ಹೂಗಳ ಅರ್ಪಣೆ, ಸುಗಂಧ ದೃವ್ಯ ಸಿಂಪರಣೆ, ಭಕ್ತಿಯ ಚಾದರ್ ಹೊದಿಕೆ ನೆರವೇರಿಸಿದ ಸಾವಿರಾರು ಜನ ಮುಸ್ಲಿಂ ಭಕ್ತರು, ವಿಶಾಲವಾದ ದರ್ಗ ಆವರಣದಲ್ಲಿ ಸಾಮೂಹಿಕವಾಗಿ ಉರುಸ್ ನಮಾಜ್ ಕೈಗೊಳ್ಳುವ ಮೂಲಕ ಸಂಪ್ರದಾಯ ಪೂರ್ಣಗೊಳಿಸಿದರು. ಮಹಾರಾಷ್ಟ್ರ, ಆಂದ್ರಾ, ತೆಲಂಗಾಣ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ದೇಶ ವಿದೇಶಗಳಲ್ಲಿ ವಾಸವಿದ್ದ ದರ್ಗಾ ಶರೀಫರ ಅನುಯಾಯಿಗಳು ಉರುಸ್ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಖವ್ವಾಲಿ ಗಾಯನ, ಕವಿತೆಗಳ ವಾಚನ, ಶೇರ್ ಶಾಯರಿ ಪಠಣ ಸೇರಿದಂತೆ ಪ್ರಾರ್ಥನೆ ಹಾಗೂ ಪ್ರವಚನಗಳು ನಡೆದವು. ಶನಿವಾರ ಮತ್ತು ರವಿವಾರ ಎರಡು ದಿನಗಳ ಕಾಲ ನಿರಂತರವಾಗಿ ಭಕ್ತರ ಆಗಮನವಾಗಲಿದ್ದು, ಒಂದು ಲಕ್ಷ ಜನ ಅನುಯಾಯಿಗಳು ಶರೀಫರ ದರ್ಶನ ಪಡೆಯಲಿದ್ದಾರೆ ಎನ್ನಲಾಗಿದೆ.

ಉರುಸ್‌ಗೆ ವಿಶೇಷವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಮನರಂಜನಾ ತಾಣಗಳಲ್ಲಿ ಕಾವಲು ಕಾಯಲು ಖಾಸಗಿ ಸಿಬ್ಬಂದಿಗಳನ್ನು ಉರುಸ್ ಸಮಿತಿಯೇ ನೇಮಿಸಿದೆ. ಲಕ್ಷ ಜನರಿಗೆ ದಾಸೋಹ ಕಾರ್ಯ ನಡೆಯುತ್ತಿದೆ. ಹಿಂದೂ ಹಾಗೂ ಮುಸ್ಲಿಂ ಭಕ್ತರು ಬೇಧವಿಲ್ಲದೆ ಉರುಸ್‌ನಲ್ಲಿ ಪಾಲ್ಗೊಂಡಿದ್ದು ಕಂಡು ಬಂದಿತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.