ಗಾಳಿಪಟ-2 ಚಿತ್ರ ವಿಮರ್ಶೆ: ಹಾರಾಟದ ಹುಡುಗರ ಗೆಲುವಿನ ಹೋರಾಟ


Team Udayavani, Aug 13, 2022, 10:05 AM IST

Yogaraj bhat’s Galipata 2 review

ನಿರ್ದೇಶಕ ಯೋಗರಾಜ್‌ ಭಟ್‌ ಹಾಗೂ ಗಣೇಶ್‌ ಜೊತೆಯಾದರೆ ಅಲ್ಲೊಂದು ಮಜವಾದ ಕಥೆ ಹುಟ್ಟುತ್ತದೆ. ಪ್ರೀತಿ, ಪ್ರೇಮ, ಪ್ರಣಯ ಜೊತೆಗೊಂದು ಕಣ್ಣೀರಧಾರೆ… ಇವಿಷ್ಟು ಆ ಕಥೆಯಲ್ಲಿ ಮೇಲೈಸಿ, ರೆಕ್ಕೆ ಬಿಚ್ಚಿ ಕುಣಿಯುತ್ತದೆ. ಹಿಂದಿನ ಸಿನಿಮಾಗಳಲ್ಲಿ ಈ ಅಂಶಗಳೊಂದಿಗೆ ಸೈ ಎನಿಸಿಕೊಂಡಿದ್ದ ಜೋಡಿ ಈ ಬಾರಿ “ಗಾಳಿಪಟ-2′ ಮೂಲಕ ಮತ್ತೂಮ್ಮೆ ಮೋಡಿ ಮಾಡಿದೆ. ಈ ಚಿತ್ರವನ್ನು ಒಂದೇ ವಾಕ್ಯದಲ್ಲಿ ವಿಮರ್ಶಿಸುವುದಾದರೆ ಒಂದು ಫ‌ನ್‌ ರೈಡ್‌…. ಆ ಮಟ್ಟಿಗೆ ಯೋಗರಾಜ್‌ ಭಟ್‌ ಒಂದು ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ.

ಸಿನಿಮಾದ ಕಥೆ ಬಗ್ಗೆ ಹೇಳುವುದಾದರೆ ಮೂವರು ಯುವಕರ ಕಥೆ ಇಲ್ಲಿದೆ. ಆ ಮೂವರ ಮೈಂಡ್‌ಸೆಟ್‌, ಮ್ಯಾನರಿಸಂ, ಅವರ ಬೆನ್ನಿಗಿರುವ ಒಂದೊಂದು ಲವ್‌ಸ್ಟೋರಿ, ಗ್ಯಾಪಲ್ಲಿ ಬಂದು ಹೋಗುವ ಮೇಷ್ಟ್ರ ಕನ್ನಡ ಹಾಗೂ ಪುತ್ರ ಪ್ರೇಮ ಹಾಗೂ ಇವೆಲ್ಲವನ್ನು ಓವರ್‌ಟೇಕ್‌ ಮಾಡಿ, ಪ್ರೇಕ್ಷಕನ ಎದೆಗೆ ನಾಟುವ ಒಂದು ಎಮೋಶನಲ್‌ ಎಪಿಸೋಡ್‌ … ಇಷ್ಟು ಅಂಶಗಳನ್ನಿಟ್ಟುಕೊಂಡು ಭಟ್ಟರು “ಗಾಳಿಪಟ-2’ವನ್ನು ಸುಸೂತ್ರವಾಗಿ ಹಾರಿಸಿದ್ದಾರೆ.

ಕಥೆಗಿಂತ ಸನ್ನಿವೇಶಗಳನ್ನು ಸೃಷ್ಟಿಸಿಕೊಂಡು ಸಿನಿಮಾ ಮುಂದುವರೆಸಿಕೊಂಡು ಹೋಗುವ ಕಲೆ ಭಟ್ಟರಿಗೆ ಚೆನ್ನಾಗಿಯೇ ಸಿದ್ಧಿಸಿದೆ ಮತ್ತು ಅದು ಅವರ ಹಿಂದಿನ ಸಿನಿಮಾಗಳಲ್ಲೂ ಸಾಬೀತಾಗಿದೆ. ಇಲ್ಲೂ ಆ ತರಹದ “ತರ್ಲೆ’ ಸನ್ನಿವೇಶಗಳು ಪ್ರೇಕ್ಷಕನಿಗೆ ಖುಷಿ ಕೊಡುತ್ತವೆ.

ಮೊದಲರ್ಧ ಕಾಲೇಜು ಹಿನ್ನೆಲೆಯಿಂದ ಆರಂಭವಾಗುವ ಕಥೆ ಜಾಲಿಯಾಗಿ ಸಾಗುತ್ತಲೇ, ದೊಡ್ಡ ತಿರುವಿಗೆ ನಾಂದಿಯಾಡುತ್ತದೆ. ನಗುವ ಹುಡುಗನ ಅಂತರಾಳದಲ್ಲಿ ಹುದುಗಿರುವ ಘಟನೆ, ಮಗನನ್ನು ಕಳೆದುಕೊಂಡ ತಂದೆಯ ಚಡಪಡಿಕೆ… ಈ ಎರಡು ಅಂಶಗಳನ್ನು ಭಟ್ಟರು ಜೊತೆ ಜೊತೆಯಾಗಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.

ಮುಖ್ಯವಾಗಿ ಭಟ್ಟರು ಸೃಷ್ಟಿಸಿರುವ ಮೂವರು ಹುಡುಗರ ಪಾತ್ರಗಳೇ ಮಜವಾಗಿವೆ. ಸಿನಿಮಾ ದುದ್ದಕ್ಕೂ ಪ್ರೇಕ್ಷಕನನ್ನು ನಗಿಸುತ್ತಾ “ಎಚ್ಚರ’ವಾಗಿಡುವಲ್ಲಿನ ಆ ಪಾತ್ರಗಳ ಪ್ರಯತ್ನ ಯಶಸ್ವಿಯಾಗಿದೆ ಕೂಡಾ. ಸಿನಿಮಾದ ದ್ವಿತೀಯಾರ್ಧ ಬಹುತೇಕ ವಿದೇಶದಲ್ಲೇ ನಡೆದಿದೆ. ಅದಕ್ಕೊಂದು ಕಾರಣವಿದೆ. ನಗುವಿನ ಹಾದಿಯಲ್ಲಿ ಸಾಗುವ ಸಿನಿಮಾವನ್ನು ನೋಡ ನೋಡುತ್ತಲೇ ಎಮೋಶನಲ್‌  ಜರ್ನಿಯಾಗಿ ಪರಿವರ್ತಿಸಿ ಬಿಡುತ್ತಾರೆ ಭಟ್ಟರು.

ಅಲ್ಲಿಂದ ಸಿನಿಮಾ ಮತ್ತಷ್ಟು ಗಂಭೀರವಾಗಿ ಸಾಗುತ್ತದೆ. ಇಲ್ಲಿ ಭಟ್ಟರ ಕಥೆಯ ಜೊತೆಗೆ ಹಾಡುಗಳು ಕೂಡಾ ಸಿನಿಮಾದ ಭಾವಕ್ಕೆ ಪೂರಕವಾಗಿದೆ. ಅದರಲ್ಲೂ ದ್ವಿತೀಯಾರ್ಧದಲ್ಲಿ ಬರುವ “ನಾವು ಬದುಕಿರಬಹುದು ಪ್ರಾಯಶಃ’ ಸಿನಿಮಾಕ್ಕೆ ಮತ್ತಷ್ಟು ಮೈಲೇಜ್‌ ನೀಡಿದೆ.

ಇಡೀ ಸಿನಿಮಾವನ್ನು ಹೆಗಲ ಮೇಲೆ ಹೊತ್ತು ಸಾಗಿದವರು ನಾಯಕ ನಟರಾದ ಗಣೇಶ್‌, ದಿಗಂತ್‌ ಹಾಗೂ ಪವನ್‌ ಕುಮಾರ್‌. ಈ ಮೂವರ ಕಾಮಿಡಿ ಟೈಮಿಂಗ್‌, ಜಾಲಿರೈಡ್‌, ಜೊತೆಗೆ ಎಮೋನಲ್‌ ಜರ್ನಿ… ಎಲ್ಲವೂ ಖುಷಿ ಕೊಡುತ್ತದೆ. ಸಿನಿಮಾ ಕ್ಕೊಂದು ಟರ್ನಿಂಗ್‌ ಪಾಯಿಂಟ್‌ ಕೊಡುವ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅನಂತ್‌ ನಾಗ್‌ ಅವರದು ಎಂದಿನಂತೆ ತೂಕದ ಅಭಿನಯ. ನಾಯಕಿಯರಾದ ವೈಭವಿ, ಶರ್ಮಿಳಾ, ಸಂಯುಕ್ತಾ ಮೆನನ್‌ ಸಿನಿಮಾದ ಗ್ಲಾಮರ್‌ ಟಚ್‌. ಉಳಿದಂತೆ ರಂಗಾಯಣ ರಘು, ಸುಧಾ ಬೆಳವಾಡಿ ಸೇರಿದಂತೆ ಇತರರು ನಟಿಸಿದ್ದಾರೆ.

ಅರ್ಜುನ್‌ ಜನ್ಯಾ ಸಂಗೀತ “ಗಾಳಿಪಟ’ದ ಹಾರಾಟವನ್ನು ಇನ್ನು ಎತ್ತರಕ್ಕೆ ಕೊಂಡೊಯ್ಯಿದಿದೆ. ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣದಲ್ಲಿ ಸೊಬಗು- ಸೊಗಸು ಎರಡೂ ತುಂಬಿದೆ. ಒಂದು ಮಜವಾದ ಸಿನಿಮಾವನ್ನು ಕುಟುಂಬ ಸಮೇತ ನೋಡಬಯಸುವವರಿಗೆ “ಗಾಳಿಪಟ-2′ ಒಂದೊಳ್ಳೆಯ ಆಯ್ಕೆಯಾಗಬಹುದು

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.