ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನಿಷೇಧ… ಸೈಬರ್ ಸೆಕ್ಯುರಿಟಿ ತಜ್ಞರ ಆರೋಪವೇನು?

ನಿರ್ಬಂಧ ವಿಧಿಸಲಾಗಿದೆ ಎಂಬ ಬಗ್ಗೆ ಸರ್ಕಾರದಿಂದ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ

Team Udayavani, Aug 13, 2022, 1:32 PM IST

ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನಿಷೇಧ… ಸೈಬರ್ ಸೆಕ್ಯುರಿಟಿ ತಜ್ಞರ ಆರೋಪವೇನು?

ನವದೆಹಲಿ: ಜನಪ್ರಿಯ ವಿಎಲ್ ಸಿ ಮೀಡಿಯಾ ಪ್ಲೇಯರ್ ಆ್ಯಪ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಆ್ಯಪಲ್ ಆ್ಯಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್ ನಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ಡೌನ್ ಲೋಡ್ ಗೆ ಲಭ್ಯವಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಹೂಡಿಕೆ ನೆಪದಲ್ಲಿ ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ,ಕೊಲೆ ಬೆದರಿಕೆ: ಪ್ರಕರಣ ದಾಖಲು

ವರದಿಯ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಅಡಿಯಲ್ಲಿ www.videolan.org ವೆಬ್ ಸೈಟ್ ಅನ್ನು ಭಾರತ ಸರ್ಕಾರ ನಿರ್ಬಂಧಿಸಿರುವುದಾಗಿ ವಿವರಿಸಿದೆ. ವಿಂಡೋಸ್ ಡಿವೈಸ್ ಗಳಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ಅನ್ನು ಈಗಲೂ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಒಂದು ವೇಳೆ ನೀವು ಈಗಾಗಲೇ ವಿಎಲ್ ಸಿ ಮೀಡಿಯಾ ಪ್ಲೇಯರ್ ಅನ್ನು ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ಗಳಲ್ಲಿ ಬಳಸುತ್ತಿದ್ದರೆ ಯಾವುದೇ ಸಮಸ್ಯೆ ಇಲ್ಲದೆ ಕಾರ್ಯನಿರ್ವಹಿಸಲಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನ ವೆಬ್ ಸೈಟ್ ಗೆ ಯಾಕೆ ನಿರ್ಬಂಧ ವಿಧಿಸಲಾಗಿದೆ ಎಂಬ ಬಗ್ಗೆ ಸರ್ಕಾರದಿಂದ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇನ್ನುಳಿದಂತೆ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್-ಐಡಿಯಾ ಸೇರಿದಂತೆ ಪ್ರಮುಖ ಇಂಟರ್ನೆಟ್ ಸರ್ವೀಸ್ ಪ್ರೊವೈಡರ್ಸ್ ಗಳು ಕೂಡಾ ಭಾರತದಲ್ಲಿ ವಿಎಲ್ ಸಿ ವೆಬ್ ಸೈಟ್ ಬಳಸಲು ಬಳಕೆದಾರರಿಗೆ ಅವಕಾಶ ನೀಡಿಲ್ಲ. ಯಾವುದೇ ವಿಪಿಎನ್ ಸರ್ವೀಸ್ ಬಳಸಿಕೊಂಡು ಫೋನ್ ಅಥವಾ ಲ್ಯಾಪ್ ಟಾಪ್ ನಲ್ಲಿ ವಿಎಲ್ ಸಿ ವೆಬ್ ಸೈಟ್ ಬಳಕೆ ಮಾಡಿಕೊಳ್ಳಬಹುದಾಗಿದೆ.

ವಿಎಲ್ ಸಿ ಮೀಡಿಯಾ ಪ್ಲೇಯರ್ ಅನ್ನು ಸುಮಾರು ಐದು ತಿಂಗಳ ಹಿಂದೆಯೇ ಸರ್ಕಾರದಿಂದಲಾಗಲಿ ಅಥವಾ ವಿಡಿಯೊಲಾನ್ ಸಂಸ್ಥೆಯಿಂದ ಯಾವುದೇ ಸೂಚನೆ ಇಲ್ಲದೇ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ವಿಎಲ್ ಸಿ ಮೀಡಿಯಾ ಪ್ಲೇಯರ್ ನಿಷೇಧಿಸಲು ಕಾರಣವೇನು?

ಚೀನಾ ಸರ್ಕಾರದ ರಹಸ್ಯ ಭಾಗವಾಗಿರುವ ಸಿಕಾಡಾ ಎಂಬ ಹೆಸರಿನ ಹ್ಯಾಕರ್ ಗಳ ಗುಂಪು ವಿಎಲ್ ಸಿ ಮೀಡಿಯಾ ಪ್ಲೇಯರ್ ಅನ್ನು ಬಳಸಿಕೊಂಡು ಮಾಲ್ವೇರ್ ಮೂಲಕ ಸೈಬರ್ ದಾಳಿ ನಡೆಸುತ್ತಿವೆ ಎಂದು ಸೈಬರ್ ಸೆಕ್ಯುರಿಟಿ ತಜ್ಞರು ಆರೋಪಿಸಿದ್ದರು. ಆದರೆ ಈ ಕೃತ್ಯದಲ್ಲಿ ಚೀನಾ ಸರ್ಕಾರ ಶಾಮೀಲಾಗಿದೆ ಎಂಬ ಬಗ್ಗೆ ಭಾರತ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಪ್ರಸ್ತುತ ಈ ಕಾರಣದಿಂದಾಗಿಯೇ ವಿಎಲ್ ಸಿ ಮೀಡಿಯಾ ಪ್ಲೇಯರ್ ವೆಬ್ ಸೈಟ್ ಅನ್ನು ಭಾರತದಲ್ಲಿ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.