ಸಾವರ್ಕರ್‌ ಬಗ್ಗೆ ಸಿದ್ದರಾಮಯ್ಯ ತಿಳಿದುಕೊಂಡಿಲ್ಲ; ಜಗದೀಶ್ ಶೆಟ್ಟರ್

ಪ್ರತಿ ವಿಚಾರದಲ್ಲೂ ವಿವಾದ ಸೃಷ್ಟಿ

Team Udayavani, Aug 15, 2022, 8:00 PM IST

ಸಾವರ್ಕರ್‌ ಬಗ್ಗೆ ಸಿದ್ದರಾಮಯ್ಯ ತಿಳಿದುಕೊಂಡಿಲ್ಲ; ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಪ್ರತಿಯೊಂದು ವಿಚಾರದಲ್ಲಿ ವಿವಾದಗಳು ಏಕೆ ಸೃಷ್ಟಿಯಾಗುತ್ತಿವೆ ಎಂದು ಗೊತ್ತಾಗುತ್ತಿಲ್ಲ. ಟಿಪ್ಪು ಸುಲ್ತಾನ, ವೀರ ಸಾವರ್ಕರ್‌ ಭಾವಚಿತ್ರಗಳನ್ನು ಕಿತ್ತು ಹಾಕುವುದು ನಡೆದಿದೆ. ಏನೇ ಆಕ್ರೋಶವಿದ್ದರೂ ಹೋರಾಟ ಹಾಗೂ ಕಾನೂನಾತ್ಮಕವಾಗಿ, ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದು ಒಳಿತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನೇ ಸಮಸ್ಯೆಗಳಿದ್ದರೂ ಅವುಗಳನ್ನು ಶಾಂತಿಯುತ ಹೋರಾಟ ಇಲ್ಲವೇ ಕಾನೂನಾತ್ಮಕ ಹೋರಾಟದ ಮೂಲಕ ಬಗೆಹರಿಸಿಕೊಳ್ಳುವುದು ಒಳಿತು. ಎಂತಹ ಸಂದರ್ಭ ಬಂದರೂ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಸಾವರ್ಕರ್‌ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿದುಕೊಂಡಿಲ್ಲ.

ಮುಸ್ಲಿಂ ಮತಗಳ ತುಷ್ಟೀಕರಣಕ್ಕೆ ಸಾವರ್ಕರ್‌ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದವರು ಆರೋಪ ಮಾಡುವಂತೆ ಸಾವರ್ಕರ್‌ ಇದ್ದಿದ್ದರೆ ಅವರಿಗೆ ಬ್ರಿಟಿಷರು ಕಾಲಾ ಪಾನಿ ಎನ್ನುವ ಕಠಿಣವಾದ ಶಿಕ್ಷೆ ನೀಡುತ್ತಿರಲಿಲ್ಲ. ಇತಿಹಾಸ ಅಧ್ಯಯನ ಮಾಡದೆ ಕಾಂಗ್ರೆಸ್‌ ನಾಯಕರು ಈ ರೀತಿ ಮಾತನಾಡುತ್ತಿರುವುದು ಸರಿಯಲ್ಲ. ಅತಿಯಾದ ತುಷ್ಟೀಕರಣ ಮುಳುವಾಗಲಿದೆ. ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ನೆಹರು ಭಾವಚಿತ್ರ ಬಿಟ್ಟಿರುವ ಬಗ್ಗೆ ಸರ್ಕಾರದ ಪ್ರತಿನಿಧಿಗಳು ಉತ್ತರ ನೀಡಲಿದ್ದಾರೆ ಎಂದರು.

ಖಾದಿ ಬಟ್ಟೆ ಉತ್ಪಾದನೆ, ರಫ್ತಿಗೆ ಅತಿ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಪ್ರಧಾನಿ ಮೋದಿ. ಆ.13, 14 ಹಾಗೂ 15 ಅತ್ಯಂತ ಪ್ರಮುಖವಾದ ದಿನಗಳು. ಈ ಸಂದರ್ಭದಲ್ಲಿ ಖಾದಿ ಜತೆಗೆ ಪಾಲಿಸ್ಟರ್‌ ರಾಷ್ಟ್ರಧ್ವಜಗಳ ಮೂಲಕ ರಾಷ್ಟ್ರ ಭಕ್ತಿ ತೋರಲು ಅವಕಾಶ ಕೊಟ್ಟಿದ್ದಾರೆ.

ಕಾಂಗ್ರೆಸ್‌ ಕೇವಲ ಟೀಕಿಸುವುದಕ್ಕಾಗಿ ರಾಜಕಾರಣ ಮಾಡುತ್ತಿದೆ. ಖಾದಿಗೆ ಮಹತ್ವ ಕಡಿಮೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ. ಖಾದಿ ಮೇಲೆ ಅವಲಂಬಿತರಾಗಿ ಇರುವವರಿಗೆ ಹಾಗೂ ನೇಕಾರರ ಬದುಕಿಗೆ ತೊಂದರೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು ಎಂದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.