ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ತಿಳಿದುಕೊಂಡಿಲ್ಲ; ಜಗದೀಶ್ ಶೆಟ್ಟರ್
ಪ್ರತಿ ವಿಚಾರದಲ್ಲೂ ವಿವಾದ ಸೃಷ್ಟಿ
Team Udayavani, Aug 15, 2022, 8:00 PM IST
ಹುಬ್ಬಳ್ಳಿ: ಪ್ರತಿಯೊಂದು ವಿಚಾರದಲ್ಲಿ ವಿವಾದಗಳು ಏಕೆ ಸೃಷ್ಟಿಯಾಗುತ್ತಿವೆ ಎಂದು ಗೊತ್ತಾಗುತ್ತಿಲ್ಲ. ಟಿಪ್ಪು ಸುಲ್ತಾನ, ವೀರ ಸಾವರ್ಕರ್ ಭಾವಚಿತ್ರಗಳನ್ನು ಕಿತ್ತು ಹಾಕುವುದು ನಡೆದಿದೆ. ಏನೇ ಆಕ್ರೋಶವಿದ್ದರೂ ಹೋರಾಟ ಹಾಗೂ ಕಾನೂನಾತ್ಮಕವಾಗಿ, ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದು ಒಳಿತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನೇ ಸಮಸ್ಯೆಗಳಿದ್ದರೂ ಅವುಗಳನ್ನು ಶಾಂತಿಯುತ ಹೋರಾಟ ಇಲ್ಲವೇ ಕಾನೂನಾತ್ಮಕ ಹೋರಾಟದ ಮೂಲಕ ಬಗೆಹರಿಸಿಕೊಳ್ಳುವುದು ಒಳಿತು. ಎಂತಹ ಸಂದರ್ಭ ಬಂದರೂ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಸಾವರ್ಕರ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿದುಕೊಂಡಿಲ್ಲ.
ಮುಸ್ಲಿಂ ಮತಗಳ ತುಷ್ಟೀಕರಣಕ್ಕೆ ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಆರೋಪ ಮಾಡುವಂತೆ ಸಾವರ್ಕರ್ ಇದ್ದಿದ್ದರೆ ಅವರಿಗೆ ಬ್ರಿಟಿಷರು ಕಾಲಾ ಪಾನಿ ಎನ್ನುವ ಕಠಿಣವಾದ ಶಿಕ್ಷೆ ನೀಡುತ್ತಿರಲಿಲ್ಲ. ಇತಿಹಾಸ ಅಧ್ಯಯನ ಮಾಡದೆ ಕಾಂಗ್ರೆಸ್ ನಾಯಕರು ಈ ರೀತಿ ಮಾತನಾಡುತ್ತಿರುವುದು ಸರಿಯಲ್ಲ. ಅತಿಯಾದ ತುಷ್ಟೀಕರಣ ಮುಳುವಾಗಲಿದೆ. ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ನೆಹರು ಭಾವಚಿತ್ರ ಬಿಟ್ಟಿರುವ ಬಗ್ಗೆ ಸರ್ಕಾರದ ಪ್ರತಿನಿಧಿಗಳು ಉತ್ತರ ನೀಡಲಿದ್ದಾರೆ ಎಂದರು.
ಖಾದಿ ಬಟ್ಟೆ ಉತ್ಪಾದನೆ, ರಫ್ತಿಗೆ ಅತಿ ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಪ್ರಧಾನಿ ಮೋದಿ. ಆ.13, 14 ಹಾಗೂ 15 ಅತ್ಯಂತ ಪ್ರಮುಖವಾದ ದಿನಗಳು. ಈ ಸಂದರ್ಭದಲ್ಲಿ ಖಾದಿ ಜತೆಗೆ ಪಾಲಿಸ್ಟರ್ ರಾಷ್ಟ್ರಧ್ವಜಗಳ ಮೂಲಕ ರಾಷ್ಟ್ರ ಭಕ್ತಿ ತೋರಲು ಅವಕಾಶ ಕೊಟ್ಟಿದ್ದಾರೆ.
ಕಾಂಗ್ರೆಸ್ ಕೇವಲ ಟೀಕಿಸುವುದಕ್ಕಾಗಿ ರಾಜಕಾರಣ ಮಾಡುತ್ತಿದೆ. ಖಾದಿಗೆ ಮಹತ್ವ ಕಡಿಮೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ. ಖಾದಿ ಮೇಲೆ ಅವಲಂಬಿತರಾಗಿ ಇರುವವರಿಗೆ ಹಾಗೂ ನೇಕಾರರ ಬದುಕಿಗೆ ತೊಂದರೆಯಾಗದ ರೀತಿಯಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.