![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 17, 2022, 12:43 PM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ತುರುಸುಗೊಂಡಿದ್ದು, ಇದೇ ತಿಂಗಳ 21ರಿಂದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಒಳಗೊಂಡಂತೆ ಪ್ರಮುಖ ನಾಯಕರ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:2ನೇ ಸುತ್ತಿನ ಕಾಂಗ್ರೆಸ್ ಪದಾಧಿಕಾರಿ ಪಟ್ಟಿಗೆ ಗ್ರೀನ್ ಸಿಗ್ನಲ್ ಪಡೆಯಲು ಡಿಕೆಶಿ ದೆಹಲಿಗೆ
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ , ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ ನಡೆಯಲಿದೆ.
ಇದಕ್ಕೆ ಸಂಬಂಧಪಟ್ಟಂತೆ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಂಗಳವಾರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆದಿದ್ದು, ಇಂದು ಮೈಸೂರು ವಿಭಾಗದ ಸಭೆ ನಡೆದಿದೆ ಎಂದು ವರದಿ ವಿವರಿಸಿದೆ.
ಬೃಹತ್ ಸಮಾವೇಶ :
ಇದೆಲ್ಲದರ ಜತೆಗೆ ಸರಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಮಾವೇಶವನ್ನು ಆಗಸ್ಟ್ 28ರಂದು ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲು ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ದಿಲ್ಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
You seem to have an Ad Blocker on.
To continue reading, please turn it off or whitelist Udayavani.