![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 18, 2022, 6:21 PM IST
ಬೆಳ್ತಂಗಡಿ: ನಡ ಗ್ರಾಮದ ಮಂಜೊಟ್ಟಿ ಅಂತ್ರಾಯಪಲ್ಕೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳು, 2 ವಾಹನಗಳು ಹಾಗೂ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಆರೋಪಿಗಳಾದ ರಫೀಕ್, ರಜಾಕ್ ಪಿ. ಹಾಗೂ ನಾಗೇಶ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಠಾಣಾ ಪಿಎಸ್ಐ ನಂದಕುಮಾರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಾರುತಿ 800 ಕಾರನ್ನು ತಡೆದು ನಿಲ್ಲಿಸಿದಾಗ ಅದರ ಚಾಲಕ ರವೂಫ್ ಓಡಿ ಪರಾರಿಯಾಗಿದ್ದಾನೆ. ಕಾರಿನ ಹಿಂಬದಿ ಬರುತ್ತಿದ್ದ ಕ್ವಾಲಿಸ್ ವಾಹನವನ್ನು ತಪಾಸಣೆ ನಡೆಸಿದಾಗ ಎರಡು ದನ ಹಾಗೂ ಒಂದು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ತುಂಬಿಸಿ ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಎರಡು ವಾಹನ ಹಾಗೂ ಜಾನುವಾರು ಸಹಿತ ವಶಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ 4.15 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.